ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ಕೊಟ್ಟು 'ದರ್ಶನ್ ಗ್ಯಾಂಗ್' ಕ್ರೌರ್ಯ
ಬೆಂಗಳೂರು, ಜೂನ್ 15: ನಟನಾಗಿ ಹೆಸರು ಮಾಡಿದ್ದ ದರ್ಶನ್ ಇಂದು ಜೈಲು ಪಾಲಾಗಿದ್ದಾರೆ. ಇದಕ್ಕೆ ರೇಣುಕಾಸ್ವಾಮಿ ಕೊಲೆ ಮಾಡಿರುವ ವಿಚಾರ ಇಡೀ ರಾಜ್ಯಕ್ಕೆ ಗೊತ್ತಾಗಿದ್ದು, ಸದ್ಯ ಈ ಪ್ರಕರಣದಲ್ಲಿ ಕೊಲೆಗೆ ಸಂಬಂಧಿಸಿದಂತೆ ಹೊತದೊಂದು ಮಾಹಿತಿ ಬೆಳಕಿಗೆ ಬಂದಿದೆ.
ದರ್ಶನ್ ಪ್ರೇಯಸಿಗೆ ಅಶ್ಲೀಲವಾಗಿ ಸಂದೇಶ ಕಳಹಿಸಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ಕೊಟ್ಟು ದರ್ಶನ್ ಗ್ಯಾಂಗ್ ಕೊಲೆ ಮಾಡಿದ್ದಾರೆ. ಈ ಮಾಹಿತಿ ಪೊಲೀಸರು ತನಿಖೆಯಿಂದ ಬಹಿರಂಗವಾಗಿದೆ.

ರೇಣುಕಾಸ್ವಾಮಿಯನ್ನು ಹೇಗೆ ಮರ್ಡರ್ ಮಾಡಲಾಗಿದೆ ಎಂಬುದರ ಕುರಿತು ನೆನ್ನೆಯಷ್ಟೇ ಇಬ್ಬರು ತನಿಖಾ ಪೊಲೀಸರ ಮಧ್ಯದ ಆಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೆ ಮತ್ತೊಂದು ಮಾಹಿತಿ ಪಡೆದಿರುವ ಪೊಲೀಸರೇ ದಂಗಾಗಿದ್ದಾರೆ.
ಕ್ರೂರವಾಗಿ ರೇಣುಕಾಸ್ವಾಮಿ ಕೊಲೆ
ಮೃತ ರೇಣುಕಾಸ್ವಾಮಿಗೆ ಶೆಡ್ನಲ್ಲಿಟ್ಟ ವೇಳೆ ಮನ ಬಂದಂತೆ ಹೊಡೆದು ಹಲ್ಲೆ ಮಾಡುವ ಜೊತೆಗೆ ಬರೆ ಹಾಕಿದ್ದಾರೆ. ಎತ್ತಿ ಲಾರಿಗೆ ಬಿಸಾಡಿದ್ದಾರೆ. ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಆತನಿಗೆ ಬರೆ ಸಹ ಹಾಕಿದ್ದಾರೆ. ಬೆಲ್ಟ್, ಕಬ್ಬಿಣದ ಸರಳಿನಿಂದ ಹೊಡೆದಿದ್ದಾರೆ. ಇದೇ ವೇಳೆ ಆತನಿಗೆ ಡಿವೈಸ್ ವೊಂದರಿಂದ ಎಲೆಕ್ಟ್ರಿಕ್ ಶಾಕ್ ಸಹ ನೀಡಿದ್ದಾರೆ ಎಂದು ಪೊಲೀಸರ ಮುಂದೆ ಆರೋಪಿಗಳು ಬಾಯಿ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸದ್ಯ ತನಿಖೆ ನಡೆಸುತ್ತಿರುವ ಪೊಲೀಸರು ಆತನಿಗೆ ಶಾಕ್ ಕೊಟ್ಟ ಡಿವೈಸ್ ಅನ್ನು ಪತ್ತೆ ಮಾಡುವಲ್ಲಿ ನಿರತರಾಗಿದ್ದಾರೆ. ಸಾಕ್ಷ್ಯಗಳು, ಹೊಸ ಹೊ ಮಾಹಿತಿಗಳು ಪ್ರಕರಣದಲ್ಲಿ ಬಿಚ್ಚಿಕೊಳ್ಳುತ್ತಿದ್ದಂತೆ ಮತ್ತೊಮ್ಮೆ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸದ್ಯ ನಟ ದರ್ಶನ್, ಆತನ ಪ್ರೇಯಸಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 16 ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ ಐದನೇ ಆರೋಪಿ ಹಾಗೂ 11 ಆರೋಪಿ ಈ ಇಬ್ಬರು ಕೊಲೆಯಾದ ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಜೂನ್ 20ರವರೆಗೆ ಡಿ ಗ್ಯಾಂಗ್ ಪೋಲಿಸ್ ವಶಕ್ಕೆ
ಸದ್ಯ ಆರು ದಿನಗಳ ಪೊಲೀಸ್ ಕಸ್ಟಡಿ ಅಂತ್ಯಗೊಂಡಿದ್ದು, ಶನಿವಾರ ದರ್ಶನ್ ಸೇರಿ ಗ್ಯಾಂಗ್ ಅನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇನ್ನಷ್ಟು ವಿಚಾರಣೆಗೆ ಅಗತ್ಯತೆ ಇರುವ ಕಾರಣ ಪೊಲೀಸರು ಕಸ್ಟಡಿಗೆ ಕೇಳಿದ್ದಾರೆ. ವಾದ ವಿವಾದ ಆಲಿಸಿದ ಪೊಲೀಸರು ಡಿ-ಗ್ಯಾಂಗ್ನಲ್ಲಿ ಹತ್ತು ಮಂದಿಯನ್ನು ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಮುಂದಿನ ಜೂನ್ 20ರವರೆಗೆ ಇವರು ಪೋಲಿಸ್ ವಶಕ್ಕೆ ನೀಡಲಾಗಿದೆ.
ಇತ್ತ ಪವಿತ್ರಾಗೌಡ ಸಹ ರೇಣುಕಾಸ್ವಾಮಿ ಇದ್ದ ಶೆಡ್ ಬಂದ ಬಳಿಕ ಚಪ್ಪಲಿಯಿಂದ ಹೊಡೆದಿದ್ದಾಳೆ. ಆಕೆ ಸಹ ಹಲ್ಲೆ ಮಾಡಿದ್ದು, ಇದೀಗ ಪೊಲೀಸರು ಪವಿತ್ರಾಗೌಡ ಮನೆಯಲ್ಲಿ ಮಹಜರು ಮಾಡುತ್ತಿದ್ದಾರೆ. ಆಕೆಯ ಚಪ್ಪಲಿಯನ್ನು ಸಹ ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಿದ್ದಾರೆ.
ಒಟ್ಟಾರೆ ದರ್ಶನ್ ಆಂಡ್ ಗ್ಯಾಂಗ್ ನಡೆದುಕೊಂಡ ರೀತಿ ಭಯಂಕರ ಎಂಬುದು ದಿನಗಳೆದಂತೆ ಗೊತ್ತಾಗುತ್ತಿದೆ. ಅಲ್ಲದೇ ಗ್ಯಾಂಗ್ ನ ಕೆಲವರು ಶವ ಬಿಸಾಡುವಾಗಿ ರೇಣುಕಾಸ್ವಾಮಿ ಮೈ ಮೇಲಿನ ಚಿನ್ನಾಭರಣ ದೋಚಿದ್ದಾರೆ ಎನ್ನಲಾಗಿದೆ. ಅದರ ಪತ್ತೆಗೂ ಪೊಲೀಸರು ಬಲೆ ಬೀಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications