Breaking News: ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ಗೆ ನ್ಯಾಯಾಂಗ ಬಂಧನ!
ಬೆಂಗಳೂರು ಜೂನ್ 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜುಲೈ 4ರವರೆಗೆ ಅಂದರೆ 14 ದಿನ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ ನೀಡಿದೆ.
ಇಂದು ದರ್ಶನ್ ಅವರ ಕಸ್ಟಡಿ ಅವಧಿ ಅಂತ್ಯವಾಗಿದ್ದು ಅವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ದರ್ಶನ್ ಸೇರಿದಂತೆ ಇತರ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೀಗಾಗಿ ಇಂದಿನಿಂದ ಜೈಲಿನಲ್ಲಿ ದರ್ಶನ್ ಮುದ್ದೆ ಮುರಿಯುವುದು ಪಕ್ಕಾ ಆಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ವಿಚಾರಣೆ ಬಹುತೇಕ ಮುಗಿದಿದೆ. ಹೀಗಾಗಿ ಪೊಲೀಸರು ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಿಲ್ಲ. ಇದರಿಂದ ನಾಲ್ವರಿಗೆ ನ್ಯಾಯಾಂಗ ಬಂಧನ ವಿಧಿಸಿ ಪರಪ್ಪನ ಅಗ್ರಹಾರಕ್ಕೆ ರವಾನಿಸಲು ಕೋರ್ಟ್ ಆದೇಶ ನೀಡಿದೆ. ದರ್ಶನ್ ಜೊತೆಗೆ ವಿನಯ್, ಪ್ರದೋಶ್ ಮತ್ತು ಧನರಾಜು ಕಸ್ಟಡಿ ಅಂತ್ಯವಾಗಿದ್ದು, ಪೊಲೀಸರು ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಕೋರ್ಟ್ ಅವರಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಹೀಗಾಗಿ 13 ವರ್ಷಗಳ ಬಳಿಕ ಮತ್ತೆ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುದ್ದೆ ಊಟ ಮಾಡಲಿದ್ದಾರೆ. ಈ ಹಿಂದೆ ಹೆಂಡತಿ ವಿಜಯಲಕ್ಷ್ಮಿ ಮೇಲೆ ಕೈ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಆಗಲೂ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಇದು ಎರಡನೇ ಬಾರಿಗೆ ದರ್ಶನ್ ಜೈಲು ವಾಸ ಅನುಭವಿಸಲಿದ್ದಾರೆ.
ಈಗಾಗಲೇ ಪ್ರಕರಣದ ಎ1 ಆರೋಪಿ, ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಕೊಲೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ನಟಿ ಪವಿತ್ರಾ ಗೌಡ ಅವರನ್ನು ಆರೋಪಿ ನಂಭರ್ ಒನ್ ಎಂದು ಹೆಸರಿಸಲಾಗಿದೆ. ನಟ ದರ್ಶನ್ ತೂಗುದೀಪ್ ಅವರನ್ನು ಕೊಲೆಯನ್ನು ಕಾರ್ಯಗತಗೊಳಿಸಿದ ಆರೋಪದ ಮೇರೆಗೆ ಆರೋಪಿ ನಂಬರ್ ಎರಡು ಎಂದು ಹೆಸರಿಸಲಾಗಿದೆ.
ಪೊಲೀಸ್ ರಿಮಾಂಡ್ ನೋಟ್ನಲ್ಲಿರುವ ಮಾಹಿತಿ ಪ್ರಕಾರ ರೇಣುಕಾಸ್ವಾಮಿ ಕೊಲೆಯಾದ ಸ್ಥಲದಲ್ಲಿ ಪವಿತ್ರಾ ಗೌಡ ಸ್ವತ: ಇದ್ದರು ಎಂದು ಹೇಳಲಾಗಿದೆ. ಪವಿತ್ರಾ ಅವರ ಮನೆಯಿಂದ ದರ್ಶನ್ಗೆ ಸಂಬಂಧಿಸಿದ ಚಪ್ಪಲಿ, ಬಟ್ಟೆ ಸಾಮಾಗ್ರಿಗಳು ಮತ್ತು ಇತರ ದಾಖಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿ ಹದಿನೈದು ಮಂದಿಯನ್ನು ಬಂಧಿಸಲಾಗಿದೆ. ತನಿಖೆಯ ಭಾಗವಾಗಿ ರೇಣುಸ್ವಾಮಿ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಹಂಚಿಕೊಂಡ ಮತ್ತು ಡಿಲೀಟ್ ಮಾಡಲಾದ ಸಂದೇಶಗಳಿಗೆ ಸಂಬಂಧಿಸಿದ ಡೇಟಾವನ್ನು ಸಂಪರ್ಕಿಸಲು ಯೋಚಿಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications