3 ದಿನದಲ್ಲಿ ನಟ ದರ್ಶನ್ ಬೇರೆ ಜೈಲಿಗೆ ಶಿಫ್ಟ್, ತನಿಖೆಗೆ IPS ಅಧಿಕಾರಿ ನೇಮಕ: ಜಿ.ಪರಮೇಶ್ವರ

ಬೆಂಗಳೂರು, ಆಗಸ್ಟ್ 27: ಕೊಲೆ ಆರೋಪದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಇದರ ಬೆನ್ನಲ್ಲೆ ಜೈಲು ಮೂರು ವಿಭಾಗ ಮಾಡುವ ಪ್ರಸ್ತಾಪ ಶುರುವಾಗಿದೆ. ಅಲ್ಲದೇ ದರ್ಶನ್ ಅನ್ನು ಬೇರೆ ಜೈಲಿಗೆ ಸ್ಥಳಾಂತರ ವಿಚಾರಗಳ ಕುರಿತು ಗೃಹ ಸಚಿವ ಜಿ.ಪರಮೇಶ್ವರ ಅವರು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಹಾಗೂ ಇತರ ಆರೋಪಿಗಳಿಗೆ ಎಲ್ಲ ಐಶಾರಾಮಿ ಸೌಲಭ್ಯಗಳು ಸಿಗುತ್ತಿವೆ ಎಂಬ ಆರೋಪಗಳು ಕೇಳಿ ಬಂದಿವೆ. ಹೀಗಾಗಿ ದರ್ಶನ್ ರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡುತ್ತಾರೆ ಎಂಬ ಮಾತು ಕೇಳಿ ಬರುತ್ತಿವೆ. ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು ಬೇರೆ ಜೈಲಿಗೆ ದರ್ಶನ್ ಸ್ಥಳಾಂತರ ಮಾಡುವ ತೀರ್ಮಾನ ನಾವು ಮಾಡಲಾಗುವುದಿಲ್ಲ ಎಂದು ತಿಳಿಸಿದರು.

Actor Darshan Shift to Another Jail in 3 Days IPS Officer Appoint for Probe today G Parameshwara

ಮೂರು ದಿನದಲ್ಲಿ ದರ್ಶನ್ ಬೇರೆ ಜೈಲಿಗೆ ಶಿಫ್ಟ್

ಮಂಗಳವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಗೃಹ ಸಚಿವರು, ಜೈಲು ಪ್ರಾಧಿಕಾರವು ಕೋರ್ಟಿನ ನಿರ್ದೇಶನ ಮೇರೆಗೆ ನಟ ದರ್ಶನ್ ಅನ್ನು ಸ್ಥಳಾಂತರ ಮಾಡಲಿದೆ. ವಿಚಾರಣಾ ಖೈದಿ ಆಗಿರುವ ಹಿನ್ನೆಲೆಯಲ್ಲಿ ಕೆಲವೊಂದು ನಿಯಮಗಳಡಿ ಸ್ಥಳಾಂತರ ಆಗಲಿದೆ. ಇನ್ನು ಎರಡು ಮೂರು ದಿನಗಳಲ್ಲಿ ದರ್ಶನ್ ಬೇರೆ ಜೈಲಿಗೆ ಶಿಫ್ಟ್ ಆಗಲಿದ್ದಾರೆ ಎಂದು ತಿಳಿಸಿದರು.

ಪರಪ್ಪನ ಅಗ್ರಹಾರ ಜೈಲು ಮೂರು ವಿಭಾಗ ಮಾಡುವ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, ಭದ್ರತೆ ದೃಷ್ಟಿಯಿಂದ ಆಂತರಿಕ ಆಡಳಿತದ ಸೆಟಪ್ ಮಾಡಬಹುದು. ಜೈಲನ್ನು ಆದರೆ ಮೂರು ಭಾಗ ಮಾಡಲು ಆಗುವುದಿಲ್ಲ. ಬ್ಲಾಕ್ ವಾರು, ಬ್ಯಾರಕ್ ವಾರು ವಿಭಾಗಗಳಾಗಿ ಮಾಡಬಹುದು. ಅದು ಜೈಲು ಆಡಳಿತದವರಿಗೆ ಸಂಬಂಧಿಸಿದೆ ಎಂದು ಅವರು ಸ್ಪಷ್ಟಪಡಿಸಿದರು.

Actor Darshan Shift to Another Jail in 3 Days IPS Officer Appoint for Probe today G Parameshwara

ಸಚವರಿಗೆ ಜೈಲಿನಲ್ಲಿ ಲೋಪದೋಷ ಪತ್ತೆ

ಸೋಮವಾರ ನಾನು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಪರಿಶೀಲಿಸಿದ್ದೇವೆ. ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಜೈಲಿನಲ್ಲಿ ಕೆಲವು ಲೋಪಗಳು ನಮಗೆ ಕಂಡು ಬಂದಿವೆ. ವಿಲ್ಸನ್ ಗಾರ್ಡನ್ ನಾಗನಿಗೆ ಒಂದು ಬ್ಯಾರಕ್ ನಿಂದ ಮತ್ತೊಂದು ಬ್ಯಾರಕ್ ಗೆ ಹೋಗಲು ಅವಕಾಶ ಕೊಟ್ಟಿದ್ದಾರೆ ಎಂಬುದು ಗೊತ್ತಾಗಿದೆ. ಇದಕ್ಕೆ ಸಂಬಂಧಿಸಿದ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲೂ ಸೆರೆಯಾಗಿದೆ.

ಈ ದೃಶ್ಯಾವಳಿಗಳನ್ನು ಗಮನಿಸಿಯೇ ನಾವು ಕ್ರಮ ಕೈಗೊಳ್ಳಲು ಸಾಧ್ಯವಾಗಿದೆ. ದರ್ಶನ್ ರಾಜಾತಿಥ್ಯಕ್ಕೆ ಸಂಬಂಧಿಸಿದ ಫೋಟೋಗಳು ವೈರಲ್ ಆದ ಹಿನ್ನೆಲೆಯಲ್ಲಿ ಈಗಾಗಲೇ 9 ಜೈಲು ಅಧಿಕಾರಿಗಳನ್ನು ಅಮಾನತು ಮಾಡಿದ್ದೇವೆ.

ಮೊದಲು ಏಳು ಮಂದಿ ಜೈಲಾಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ನಂತರ ಚೀಫ್ ಸೂಪರಿಂಟೆಂಡೆಂಟ್ ಹಾಗೂ ಸೂಪರಿಂಟೆಂಡೆಂಟ್ ಅವರನ್ನು ಅಮಾನತು ಮಾಡಲಾಯಿತು ಎಂದು ಅವರು ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದರು.

ತನಿಖೆಗಾಗಿ ಇಂದು ಐಪಿಎಸ್ ಅಧಿಕಾರಿ ನೇಮಕ

ಇನ್ನೂ ಜೈಲಿನಲ್ಲಿ ನಟ ದರ್ಶನ್‌ಗೆ ಯಾರೆಲ್ಲ ಸಹಕಾರ ನೀಡಿದ್ದಾರೆಯೋ ಅವರನ್ನು ಅಮಾನತು ಮಾಡಲಾಗಿದೆ. ಘಟನೆ ಕುರಿತ ತನಿಖೆ ಮುಂದುವರಿದಿದ್ದು, ಇವತ್ತು ತನಿಖಾಗಾಗಿ ಐಪಿಎಸ್ ಅಧಿಕಾರಿಯೊಬ್ಬರು ನೇಮಕ ಮಾಡುತ್ತೇವೆ. ವರದಿ ಆಧರಿಸಿ ಶಾಶ್ವತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+