'ಯಾವತ್ತಿಗೂ ನೀವೇ ನನ್ನ ಹೀರೋ': ಅಪ್ಪಂದಿರ ದಿನಕ್ಕೆ ದರ್ಶನ್ ಪುತ್ರನ ಭಾವುಕ ಪೋಸ್ಟ್
ಬೆಂಗಳೂರು, ಜೂನ್ 16: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ಗೆ ಮಗ ವಿನೀಶ್ ದರ್ಶನ್ ಅಪ್ಪಂದಿರ ದಿನದ ಶುಭಾಶಯ ತಿಳಿಸಿದ್ದಾರೆ. ಅಪ್ಪನೊಂದಿಗೆ ಅತಿಯಾದ ಬಾಂಧವ್ಯ ಇಟ್ಟುಕೊಂಡಿರುವ ವಿನೀಶ್, ಈ ದಿನ ಅಪ್ಪನನ್ನು ಮಿಸ್ ಮಾಡಿಕೊಳ್ಳುತ್ತಾ ಭಾವುಕ ಪೋಸ್ಟ್ವೊಂದನ್ನು ಶೇರ್ ಮಾಡಿದ್ದಾನೆ.
ತಂದೆ ಕೂಲಿಗಾರನೇ ಆಗಿರಲಿ, ಕೊಲೆಗಾರನೇ ಆಗಿರಲಿ ಮಕ್ಕಳ ಪಾಲಿಗೆ ಮೊದಲ ಹೀರೋ ಅಪ್ಪ. ಹೆಂಡತಿ-ಮಕ್ಕಳು ಹಾಗೂ ತನ್ನ ಕುಟುಂಬಕ್ಕಾಗಿ ತನ್ನ ಸರ್ವಸ್ವವನ್ನೇ ಮೀಸಲಿಡುವ ಅಪ್ಪಂದಿರನ್ನು ಸಂಭ್ರಮಿಸುವ ದಿನ ಇಂದು. ಇಂತಹ ಸಂದರ್ಭದಲ್ಲಿ ವಿನೀಶ್, ಪೊಲೀಸ್ ಠಾಣೆಯಲ್ಲಿರುವ ತನ್ನ ತಂದೆ ದರ್ಶನ್ಅನ್ನು ನೆನಪಿಸಿಕೊಂಡು ಅಪ್ಪಂದಿರ ದಿನದ ಶುಭಾಶಯ ತಿಳಿಸಿದ್ದಾನೆ.

ತಾಯಿ ವಿಜಯಲಕ್ಷ್ಮಿ ಹಾಗೂ ತಂದೆ ದರ್ಶನ್ ಜೊತೆಗಿನ ವಿಶೇಷವಾದ ಫೋಟೋಗಳನ್ನು ಹಂಚಿಕೊಂಡಿರುವ ವಿನೀಶ್, 'ನಿಮ್ಮನ್ನು ನಾನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಐ ಲವ್ ಯು, ಯಾವತ್ತಿಗೂ ನೀವೇ ನನ್ನ ಹೀರೋ ಅಪ್ಪ' ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾನೆ.
ಅತ್ತ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪೊಲೀಸರ ವಶದಲ್ಲಿದ್ದರೆ, ಇತ್ತ ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ವಿನೀಶ್ ನೋವು ಅನುಭವಿಸುತ್ತಿದ್ದಾರೆ. ಘಟನೆ ಬೆಳಕಿಗೆ ಬಂದ ದಿನದಿಂದ ವಿಜಯಲಕ್ಷ್ಮಿ ಯಾರ ಸಂಪರ್ಕಕ್ಕೂ ಸಿಗದೇ ಮೌನಕ್ಕೆ ಜಾರಿದ್ದರೆ, ವಿನೀಶ್ ತಮ್ಮ ನೋವನ್ನು ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ಹಂಚಿಕೊಳ್ಳುತ್ತಿರುತ್ತಾನೆ.
ನನಗೆ ಶಾಪ ಹಾಕುವುದರಿಂದ ಯಾವ ಪ್ರಯೋಜನವಿಲ್ಲ-ವಿನೀಶ್
ತಂದೆ ದರ್ಶನ್ ಅರೆಸ್ಟ್ ಆದ ನಂತರ ಈ ಹಿಂದೆ ಕೂಡ ವಿನೀಶ್ ಇನ್ಸ್ಟಾಗ್ರಾಮ್ನಲ್ಲಿ ಭಾವನಾತ್ಮಕ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದನು. 'ನನ್ನ ತಂದೆ ಬಗ್ಗೆ ಕೆಟ್ಟ ಕಾಮೆಂಟ್ಸ್ ಹಾಗೂ ಅಸಭ್ಯ ಭಾಷೆಯಲ್ಲಿ ನಿಂದಿಸುತ್ತಿರುವವರಿಗೆ ಧನ್ಯವಾದ. ನನಗೀಗ 15 ವರ್ಷ, ನನಗೂ ಮನಸ್ಸಿದೆ. ಈ ಕಷ್ಟದ ಸಮಯದಲ್ಲಿ ನನ್ನ ತಾಯಿ ಮತ್ತು ತಂದೆಗೆ ನಿಮ್ಮ ಬೆಂಬಲ ಬೇಕಾಗಿದೆ. ನನಗೆ ಶಾಪ ಹಾಕುವುದರಿಂದ ಯಾವ ಪ್ರಯೋಜನವಿಲ್ಲ' ಎಂದು ಇನ್ಸ್ಟಾ ಸ್ಟೋರಿಯಲ್ಲಿ ಬರೆದುಕೊಂಡಿದ್ದನು. ವಿನೀಶ್ ಇನ್ಸ್ಟಾಗ್ರಾಮ್ನ ಸ್ಟೋರಿ ಸದ್ಯ ಭಾರೀ ವೈರಲ್ ಆಗುತ್ತಿದ್ದು, ದರ್ಶನ್ ಅಭಿಮಾನಿಗಳು ವಿನೀಶ್ಗೆ ಧೈರ್ಯ ತುಂಬಲು ಪ್ರಯತ್ನಿಸುತ್ತಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications