ಅಭಿಮಾನಿಗಳಿಗೆ ನಟ ದರ್ಶನ್‌ ಸಂದೇಶ.!

Actor Darshan Message: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಅವರು ಜೈಲು ಸಿಬ್ಬಂದಿ ಮೂಲಕ ಅಭಿಮಾನಿಗಳಿಗೆ ವಿಶೇಷ ಸಂದೇಶವೊಂದನ್ನು ರವಾನಿಸಿದ್ದಾರೆ. ಹಾಗಾದರೆ ಆ ಸಂದೇಶ ಏನು ಗೊತ್ತಾ. ಮಾಹಿತಿ ಇಲ್ಲಿದೆ ನೋಡಿ.

ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ, ಎ2 ಆರೋಪಿ ನಟ ದರ್ಶನ್‌ ಸೇರಿದಂತೆ ಇವರ ಪಟಲಾಂ ಗ್ಯಾಂಗ್‌ ಜೈಲು ಪಾಲಾಗಿದೆ. ಇನ್ನು ದರ್ಶನ್‌ನನ್ನು ನೋಡಲು ಅಭಿಮಾನಿಗಳು ಪ್ರತಿನಿತ್ಯ ಜೈಲಿನ ಬಳಿ ಬಂದು ಕಾದು ಕಾದು ವಾಪಾಸ್‌ ಆಗುತ್ತಿದ್ದಾರೆ. ಆದರೆ ನಿಯಮದ ಪ್ರಕಾರ ಪೊಲೀಸರು ಅವರನ್ನು ಒಳಗಡೆ ಬಿಡುವಂತಿಲ್ಲ. ಆದ್ದರಿಂದ ನಟ ದರ್ಶನ್‌ ಅಭಿಮಾನಿಗಳಿಗೆ ಜೈಲು ಅಧಿಕಾರಿಗಳ ಮೂಲಕ ವಿಶೇಷ ಸಂದೇಶವೊಂದನ್ನು ರವಾನಿಸಿದ್ದಾರೆ.

Actor Darshan Thoogudeepa message to fans

ನಟ ದರ್ಶನ್ ಜೈಲು ಸೇರಿದ ನಂತರ ಚಿತ್ರರಂಗ ಹಲವರು ಜೈಲಿಗೆ ಬಂದು ಅವರನ್ನು ಭೇಟಿ ಮಾಡಿ ಹೋಗುತ್ತಿದ್ದಾರೆ. ಇನ್ನು ಚಿತ್ರರಂಗದ ದರ್ಶನ್ ಅವರಿಂದ ನೆರವು ಪಡೆದವರು, ಅಭಿಮಾನಿಗಳು ಅವರನ್ನು ನೋಡುವುದಕ್ಕಾಗಿ ಜೈಲಿನತ್ತ ಬರುತ್ತಿದ್ದು, ಇದು ಫಲಿಸುತ್ತಿಲ್ಲ. ಜೈಲಿನ ಹೊರಗಡೆ ಇರುವ ಗೇಟ್‌ ನೋಡಿ ವಾಪಾಸ್‌ ಆಗುತ್ತಿದ್ದಾರೆ.

ಇತ್ತೀಚೆಗಷ್ಟೇ ವಿಶೇಷ ಚೇತನ ಅಭಿಮಾನಿಯೊಬ್ಬರು ದರ್ಶನ್‌ ನೋಡಲು ಜೈಲಿನ ಬಳಿ ಬಂದಿದ್ದರು. ಆದರೆ ನಿಯಮದ ಪ್ರಕಾರಣ ಪೊಲೀಸರು ಆತನನ್ನು ಒಳಗಡೆ ಬಿಟ್ಟಿರಲಿಲ್ಲ. ಈ ಘಟನೆಯ ಬಳಿಕ ಅಭಿಮಾನಿಗಳಿಗೆ ನಟ ಜೈಲಿನಿಂದಲೇ ನಟ ದರ್ಶನ್ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಜೈಲು ಅಧಿಕಾರಿಗಳ ಮೂಲಕ ಸಂದೇಶ ನೀಡಿದ ದರ್ಶನ್, ಅಭಿಮಾನಿಗಳು ಯಾರೂ ಜೈಲಿನ ಬಳಿ ಬರಬೇಡಿ. ಜೈಲಿನ ನಿಯಮದ ಪ್ರಕಾರ ಅಭಿಮಾನಿಗಳ ಭೇಟಿ ಸಾಧ್ಯವಾಗುವುದಿಲ್ಲ ಎಂದು ಸಂದೇಶ ರವಾನಿಸಿದ್ದಾರೆ.

ಜೈಲಿನ ಬಳಿ ನನ್ನ ಭೇಟಿಗೆ ಬಂದು ನೀವು ಕಾಯುವುದು. ನನ್ನ ಭೇಟಿಗೆ ಅವಕಾಶ ಸಿಗದೆ ನಿರಾಸೆಯಿಂದ ವಾಪಸ್ ಹೋಗುವುದು. ಅದರಲ್ಲಿಯೂ ವಿಶೇಷ ಚೇತನ ಯುವತಿ ಸೌಮ್ಯ ನಟ ದರ್ಶನ್‌ ಕೊಡಿಸಿದ್ದ ಆಟೋದಲ್ಲಿ ಪೋಷಕರ ಜೊತೆ ಆಗಮಿಸಿ ವಾಪಾಸ್‌ ತೆರಳಿದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಯಮುನಾ ಶ್ರೀನಿಧಿ ಹೇಳಿದ್ದೇನು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಪರ, ವಿರೋಧ ಹೇಳಿಕೆಗಳು ವ್ಯಕ್ತವಾಗುತ್ತಲೇ ಇವೆ. ಹಾಗೆಯೇ ಇದೀಗ ನಟಿ ಯಮುನಾ ಶ್ರನಿಧಿ ಅವರು ಕೂಡ ಪ್ರತಿಕ್ರಿಯಿಸಿದ್ದಾರೆ. ಹಾಗಾದರೆ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ನಟ ದರ್ಶನ್‌ ಬಂಧನವಾದಾಗಿನಿಂದ ಅಂಧಾಭಿಮಾನಿಗಳ ಹುಚ್ಚಾಟ ಹೆಚ್ಚಾಗಿದ್ದು, ಈ ಹುಚ್ಚಾಟಕ್ಕೆ ಪೊಲೀಸರು ತೆರೆ ಎಳೆಯುವ ಕೆಲಸವನ್ನು ಮಾಡಿದ್ದರು. ಇದೀಗ ಕಲೆವು ನಟಿಯರೇ ಅವರ ಅಭಿಮಾನಿಗಳಿಗೆ ಶಾಂತ ರೀತಿಯಿಂದ ಇರುವಂತೆ ಸಲಹೆಗಳನ್ನು ಸಹ ನೀಡುತ್ತಿದ್ದಾರೆ.

ನಟ ದರ್ಶನ್‌ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ನಟಿ ಯಮುನಾ ಶ್ರೀನಿಧಿ ಅವರು, "ನಿಮ್ಮ ಮೇಲಿನ ನನ್ನ ಭಾವನೆಗಳು ಎಂದಿಗೂ ಬದಲಾಗುವುದಿಲ್ಲ ದರ್ಶನ್ ಸರ್" ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

"ಈ ಜಗತ್ತಿನಲ್ಲಿ ಪ್ರೀತಿ, ವಿಶ್ವಾಸ ಮತ್ತು ನಿಷ್ಠೆ ಇಲ್ಲದಿದ್ದರೆ ನಾವು ಬದುಕಲು ಸಾಧ್ಯ ಆಗುತ್ತಿರಲಿಲ್ಲ. ನಾನು ಇಲ್ಲಿ ಪ್ರಕರಣದ ಬಗ್ಗೆ ಮಾತನಾಡಲು ಹೋಗುವುದಿಲ್ಲ, ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳುತ್ತದೆ. ಯಾರೂ ಕಾನೂನಿಗಿಂತ ಮೇಲಲ್ಲ ಮತ್ತು ಜನರು ಅಥವಾ ಮಾಧ್ಯಮದ ವಿಚಾರಣೆಗಿಂತ ನ್ಯಾಯಾಲಯದ ವಿಚಾರಣೆಯನ್ನು ನಾನು ನಂಬುತ್ತೇನೆ'", ಎಂದು ತಿಳಿಸಿದ್ದಾರೆ.

"ನಟ ದರ್ಶನ್ ಸರ್ ಬಗ್ಗೆ ನನ್ನ ಗೌರವಕ್ಕೆ ಕಾರಣ ಅವರು ನಮ್ಮನ್ನು ನಡೆಸಿಕೊಳ್ಳುವ ರೀತಿ. ನಮ್ಮ ಮಕ್ಕಳು ತಪ್ಪು ಮಾಡಿದಾಗ, ನಾವು ಅವರಿಗೆ ಮಾರ್ಗದರ್ಶನ ನೀಡುತ್ತೇವೆ. ನಾವು ಅವರನ್ನು ಶಿಕ್ಷಿಸುತ್ತೇವೆ, ಆದರೆ ನಾವು ಅವರನ್ನು ತಿರಸ್ಕರಿಸುವುದಿಲ್ಲ. ನಾವು ಅವರನ್ನು ಪ್ರೀತಿಸುವುದನ್ನು ನಿಲ್ಲಿಸುವುದಿಲ್ಲ. ಏನೇ ಆದರೂ ನಿಮ್ಮ ಮೇಲಿನ ನನ್ನ ಭಾವನೆಗಳು ಎಂದಿಗೂ ಬದಲಾಗುವುದಿಲ್ಲ ದರ್ಶನ್ ಸರ್", ಎಂದು ತಿಳಿಸಿದ್ದಾರೆ.

"ಅವರ ಅಭಿಮಾನಿಗಳ ಅಪಾರ ಪ್ರೀತಿ ಮತ್ತು ಬೆಂಬಲವನ್ನು ನೋಡುವುದು ಹೃದಯಸ್ಪರ್ಶಿಯಾಗಿದೆ. ದರ್ಶನ್ ಸರ್ ಅವರ ಅಭಿಮಾನಿಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ತಾಳ್ಮೆ ಕಳೆದುಕೊಳ್ಳಬೇಡಿ, ಕಾನೂನನ್ನು ಕೈಗೆತ್ತಿಕೊಳ್ಳಬೇಡಿ. ಪ್ರತಿಯೊಬ್ಬರ ಜೀವನದಲ್ಲೂ ಏರಿಳಿತಗಳಿರುತ್ತವೆ. ಯಾವುದು ಸರಿ-ತಪ್ಪು ಎಂದು ಕಂಡುಹಿಡಿಯಲು ನ್ಯಾಯಾಂಗವಿದೆ. ಯಾರು ಏನೇ ಮಾತಾಡಿಕೊಂಡರೂ ತಾಳ್ಮೆಯಿಂದಿರಿ ಎಂದು ಬೇಡಿಕೊಳ್ಳುತ್ತೇನೆ. ಈ ಅಹಿತಕರ ಘಟನೆಯಿಂದ ನಮಗೆಲ್ಲ ನೋವಾಗಿದೆ, ಆದರೆ ಈಗ ಬೇಕಾಗಿರುವುದು ತಾಳ್ಮೆ" ಎಂದು ತಿಳಿಸಿದ್ದಾರೆ.

ಇನ್ನು ದರ್ಶನ್ ನಟನೆಯ ತಾರಕ್ ಸಿನಿಮಾದಲ್ಲಿ ಯಮುನಾ ಶ್ರೀನಿಧಿ ಅವರು ನಟಿಸಿದ್ದಾರೆ. ಅಲ್ಲದೆ, ಕಿರುತೆರೆಯಲ್ಲಿ ಹೆಸರು ಮಾಡಿರುವ ಯಮುನಾ, ಅಶ್ವಿನಿ ನಕ್ಷತ್ರ, ತ್ರಿವೇಣಿ ಸಂಗಮ, ಮನಸಾರೆ, ಎರಡು ಕನಸು, ಮಾಸನ ಸರೋವರ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದವರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+