ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಉಪೇಂದ್ರ ತೆರೆದಿಟ್ಟ ಕ್ರಿಯೇಟಿವಿಟಿ ರಹಸ್ಯ
ಬೆಂಗಳೂರು, ಸೆಪ್ಟೆಂಬರ್ 24: "ನಮ್ಮಲ್ಲಿ ಏನಾದರೂ ಕ್ರಿಯೇಟಿವಿಟಿ ಅಂತ ಇದ್ದರೆ ಅದು ಪುಸ್ತಕಗಳ ಓದಿನಿಂದ ಬಂದಿರೋದು. ನಾನು ಜೋಗಿ ಅವರ ದೊಡ್ಡ ಅಭಿಮಾನಿ. ಅವರು ಇದೇ ರೀತಿ ಇನ್ನಷ್ಟು- ಮತ್ತಷ್ಟು ಪುಸ್ತಕಗಳನ್ನು ಬರೆಯಲಿ" ಎಂದು ನಟ- ನಿರ್ದೇಶಕ ಉಪೇಂದ್ರ ಹೇಳಿದರು.
ಇಲ್ಲಿನ ಬಿ.ಪಿ.ವಾಡಿಯಾ ರಸ್ತೆಯ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ನಲ್ಲಿ ಭಾನುವಾರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಚಂದಮಾಮ ಓದುವಾಗ ಅಲ್ಲಿ ಕಥೆಗಳಲ್ಲಿ ಬರುತ್ತಿದ್ದ ಕಾಡು, ಮರ, ಅಲ್ಲೊಂದು ಮನೆ ಇಂಥ ವಿವರಣೆಗಳಿಂದ ನಮ್ಮ ಊಹಾ ಶಕ್ತಿ ಮತ್ತಷ್ಟು ಹೆಚ್ಚಾಗುತ್ತಿತ್ತು ಎಂದರು.

ಪುಸ್ತಕದ ಮುಂದೆ ತಲೆತಗ್ಗಿಸಿದರೆ ಅದು ತಲೆ ಎತ್ತುವಂತೆ ಮಾಡುತ್ತದೆ. ಅದೇ ಮೊಬೈಲ್ ಗೆ ತಲೆ ತಗ್ಗಿಸಿದರೆ ಎಂದೂ ತಲೆ ಎತ್ತದಂತೆ ಮಾಡುತ್ತದೆ ಎಂಬ ವಾಟ್ಸ್ ಅಪ್ ಸಂದೇಶವೊಂದರ ಉದಾಹರಣೆ ಕೂಡ ಅವರು ನೀಡಿದರು.
ಇದಕ್ಕೂ ಮುನ್ನ, ಜೋಗಿಯವರು ಬರೆದ 'ಉಳಿದ ವಿವರಗಳು ಲಭ್ಯವಿಲ್ಲ' ಕಥಾ ಸಂಕಲನ, ಡಾ. ಗುರುಪ್ರಸಾದ್ ಕಾಗಿನೆಲೆ ಅವರ ಕಾದಂಬರಿ 'ಹಿಜಾಬ್' ಹಾಗೂ ಗೋಪಾಲಕೃಷ್ಣ ಕುಂಟನಿ ಅವರ ಕಥಾಸಂಕಲನ 'ಅಪ್ಪನ ನೀಲಿಕಣ್ಣು' ಬಿಡುಗಡೆ ಮಾಡಿದರು.

ಆ ನಂತರ ಲಕ್ಷ್ಮೀಶ್ ತೋಳ್ಪಾಡಿ ಅವರು 'ಉಪಸಂಹಾರ' ಉಪನ್ಯಾಸ ನೀಡಿದರು. ಚಿತ್ರ ನಿರ್ದೇಶಕರಾದ ಬಿ.ಎಸ್.ಲಿಂಗದೇವರು, ಟಿ.ಎನ್.ಸೀತಾರಾಂ, ಲೇಖಕರಾದ ಜೋಗಿ, ಡಾ. ಗುರುಪ್ರಸಾದ್ ಕಾಗಿನೆಲೆ, ಗೋಪಾಲಕೃಷ್ಣ ಕುಂಟನಿ, ಲೇಖಕರು ಹಾಗೂ ವಿಮರ್ಶಕರೂ ಆದ ಕೆ.ಸತ್ಯನಾರಾಯಣ, ಅಂಕಿತ ಪ್ರಕಾಶನದ ಪ್ರಕಾಶ್ ಕಂಬತ್ತಳ್ಳಿ ಮತ್ತಿತತರಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ











Click it and Unblock the Notifications