ಆತ್ಮಹತ್ಯೆಗೆ ಯತ್ನಿಸಿದ ವೆಂಕಟ್ ಹುಡುಕಿಕೊಂಡು ಬಂದ ಪೊಲೀಸರು
ನಟ ಹುಚ್ಚ ವೆಂಕಟ್ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ವರದಿಯಾಗಿದೆ. ಫಿನಾಯೆಲ್ ಕುಡಿದು ಸಾಯಲು ಯತ್ನಿಸಿದ್ದ ವೆಂಕಟ್, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ
ಬೆಂಗಳೂರು, ಜೂನ್ 18: ನಟ ಹುಚ್ಚ ವೆಂಕಟ್ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ವರದಿಯಾಗಿದೆ. ಫಿನಾಯೆಲ್ ಕುಡಿದು ಸಾಯಲು ಯತ್ನಿಸಿದ್ದ ವೆಂಕಟ್, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅತ್ಮಹತ್ಯೆಗೆ ಯತ್ನಿಸಿದ ವೆಂಕಟ್ ಹುಡುಕಿಕೊಂಡು ಪೊಲೀಸರು ಬಂದಿದ್ದಾರೆ. ಆದರೆ, ವೆಂಕಟ್ ಅವರು ಮಾತನಾಡುವ ಸ್ಥಿತಿಯಲ್ಲಿಲ್ಲದ ಕಾರಣ, ವೈದ್ಯರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಭಾರತೀಯ ದಂಡ ಸಂಹಿತೆ 309 ರ ಅನ್ವಯ ಶಿಕ್ಷಾರ್ಹ ಅಪರಾಧವಾಗಿದೆ. ಅದರೆ, ಮಾನಸಿಕ ಸ್ಥಿಮಿತ ಕಳೆದುಕೊಂಡ ವ್ಯಕ್ತಿಗಳ ಇಂಥ ಹುಚ್ಚಾಟಕ್ಕೆ ಸರ್ಕಾರ ಪ್ರತ್ಯೇಕ ವಿಧೇಯಕ ಜಾರಿಗೆ ತಂದಿದ್ದು, ಪುನರ್ವಸತಿ ಕೇಂದ್ರದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ.
ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಸಂದೇಶ ಕಳಿಸಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ವೆಂಕಟ್ ರಿಂದ ಆಸ್ಪತ್ರೆಯಲ್ಲೂ ರಂಪಾಟ ಮಾಡಿರುವುದು ಸುದ್ದಿ ವಾಹಿನಿಗಳಲ್ಲಿ ಕಂಡು ಬಂದಿದೆ.

'ಬಿಗ್ ಬಾಸ್' ಕಾರ್ಯಕ್ರಮದ ಮೂಲಕ ಕನ್ನಡ ಜನಗಳ ಪ್ರೀತಿ ಸಂಪಾದನೆ ಮಾಡಿದ್ದ ಪ್ರಥಮ್ ಈಗ ಆತ್ಮಹತ್ಯೆಗೆ ಮುಂದಾದಾಗ 'ಫೈರಿಂಗ್ ಸ್ಟಾರ್', ಪೊರ್ಕಿ ಹುಚ್ಚ ವೆಂಕಟ್ ಅವರು ಬುದ್ಧಿವಾದ ಹೇಳಿದ್ದರು.
'ಹುಚ್ಚ ವೆಂಕಟ್ ಸಿನಿಮಾ ಸೋತಾಗ ನಾನೂ ಆತ್ಮಹತ್ಯೆ ಮಾಡಬೇಕಂತ ಅಂದುಕೊಂಡಿದ್ದೆ ಆದರೆ ಸೋಲೇ ಜೀವನವಲ್ಲ. ಅದರಲ್ಲೂ ಗೆದ್ದವರು ಈ ರೀತಿ ಮಾಡಿದರೆ ಮುಟ್ಟಾಳತನ ಎಂದು ಹೇಳಬೇಕಷ್ಟೇ' ಎಂದಿದ್ದರು.
ವ್ಯಕ್ತಿಯೊಬ್ಬ ಎಲ್ಲರನ್ನೂ ತೃಪ್ತಿಪಡಿಸಲು ಆಗಲ್ಲ, ಆದ್ರೆ ಪ್ರೀತಿಸುವವರನ್ನು ತೃಪ್ತಿಪಡಿಸಬೇಕು. ಜೀವನದಲ್ಲಿ ಹೊಗಳಿಕೆ ಇದ್ದರೆ ತೆಗಳುವವರೂ ಇರುತ್ತಾರೆ. ಹೀಗಾಗಿ ಸಣ್ಣ ಪುಟ್ಟ ವಿಚಾರಗಳಿಗೆ ಹೀಗೆ ಸೂಸೈಡ್ ಮಾಡಿಕೊಳ್ಳುತ್ತೇನೆ ಎನ್ನುವುದು ತಪ್ಪು ಎಂದಿದ್ದರು.
ರಿಯಾಲಿಟಿ ಶೋನ ಸಹನಟಿ ಜತೆ ವೆಂಕಟ್ ಅವರಿಗೆ ಪ್ರೇಮಾಂಕುರವಾಗಿತ್ತು. ಆಕೆ ಮದುವೆಯಾಗಲು ಒಪ್ಪದ ಕಾರಣ, ಮನನೊಂದ ವೆಂಕಟ್, 'ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಾಳೆ' ಎಂದು ಕಾರಣ ಹೇಳಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ನಟಿ ರಮ್ಯಾ ನನ್ನ ಹೆಂಡತಿ ಎಂದು ಜೈಲು ದರ್ಶನ ಮಾಡಿ ಬಂದ ವೆಂಕಟ್ ಅವರಿಗೆ ಈಗಾಗಲೆ ಮದುವೆಯಾಗಿದ್ದು, ಹೆಂಡತಿಯನ್ನು ತೊರೆದಿದ್ದರೆ ಎಂಬ ಸುದ್ದಿಯೂ ಇದೆ. ಯೂಟ್ಯೂಬ್ ವಿಡಿಯೋ, ಬಿಗ್ ಬಾಸ್ ರಂಪಾಟಗಳ ಮೂಲಕ ವೆಂಕಟ್ ಜನಪ್ರಿಯ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications