ನಿವೇಶನಕ್ಕೆ ನಕಲಿ ದಾಖಲೆ ಸೃಷ್ಟಿಸಿ ಬೆದರಿಕೆ: ನಟ ಮಯೂರ್ ಪಟೇಲ್ ದೂರು
ಬೆಂಗಳೂರು, ಫೆಬ್ರವರಿ 13: ನಿವೇಶನ ವಿಚಾರವಾಗಿ ನಟ ಮೂಯರ್ ಪಟೇಲ್ ಅವರಿಗೆ ಜೀವ ಬೆದರಿಕೆ ಹಾಕಿರುವ ಸಂಗತಿ ಬೆಳಕಿಗೆ ಬಂದಿದೆ. ಈ ಸಂಬಂಧ ಮಯೂರ್ ಪಟೇಲ್ ಎಚ್.ಎಸ್. ಆರ್. ಲೇಔಟ್ ಪೊಲೀಸರಿಗೆ ದೂರು ನೀಡಿದ್ದಾರೆ.
ಬೇಗೂರು ಬಳಿಯ ಪರಂಗಿಪಾಳ್ಯದಲ್ಲಿರುವ ನಿವೇಶನವನ್ನು ಎಂ.ಎಸ್. ಸುಬ್ರಮಣ್ಯ ಎಂಬುವರಿಂದ ಮಯೂರ್ ಪಟೇಲ್ ಕರೀದಿಸಿದ್ದರು. ಈ ಸಂಬಂಧ ಸುಬ್ರಮಣ್ಯ ಎಂಬುವರಿಂದ ಜಿಪಿಎ ಮಾಡಿಸಿಕೊಂಡಿದ್ದ ಮಯೂರ್ ಪಟೇಲ್ ಕಳೆದ ಜನವರಿ 22 ರಂದು ಗೆಳೆಯರೊಂದಿಗೆ ನಿವೇಶನ ನೋಡಲು ಪರಂಗಿಪಾಳ್ಯಕ್ಕೆ ತೆರಳಿದ್ದರು.
ಮಯೂರ್ ಪಾಟೇಲ್ ಖರೀದಿ ಮಾಡಿದ್ದ ನಿವೇಶನಕ್ಕೆ ಕಾಂಪೌಂಡ್ ಹಾಕಿದ್ದ ಅಪರಿಚಿತರು, ಈ ನಿವೇಶನ ಅನಂತರಾಮರೆಡ್ಡಿ ಹಾಗೂ ಗನ್ ಮಂಜಣ್ಣ ಅವರಿಗೆ ಸೇರಿದ್ದಾಗಿದೆ ಎಂಬ ನಾಮ ಫಲಕ ಹಾಕಿದ್ದರು. ಇದೇ ವೇಳೆ ಅಪರಿಚಿತರು ಕರೆ ಮಾಡಿ, ನೀವು ಇಲ್ಲಿಗೆ ಸುಮ್ಮನೆ ಬರಬೇಡಿ.ಈ ನಿವೇಶನನ ನಿಮ್ಮದಲ್ಲ ಎಂದು ಬೆದರಿಕೆ ಹಾಕಿದ್ದಾರೆ. ಇದೇ ವೇಳೆ ನಾಮ ಫಲಕ ಹಾಕಿದ್ದ ಅನಂತರಾಮರೆಡ್ಡಿ ಅವರನ್ನು ಮಯೂರ್ ಪಟೇಲ್ ಸಂಪರ್ಕಿಸಿದ್ದಾರೆ.

ಈ ನಿವೇಶನ ನನಗೆ ಸೇರಿದ್ದು. ಅಲ್ಲಿಗೆ ಯಾರನ್ನೂ ಬಿಡುವುದಿಲ್ಲ. ಈ ಜಾಗ ನನ್ನದು. ನನ್ನ ಮಗನಿಗೆ ದಾನ ಪತ್ರ ಮೂಲಕ ಮಾಡಿಕೊಟ್ಟಿದ್ದೇನೆ. ನೀವು ಆ ಜಾಗಕ್ಕೆ ಬಂದ್ರೆ, ಅಮೇಲೆ ನಾವು ಯಾರು ಎಂದು ಗೊತ್ತಾಗುತ್ತದೆ ಎಂದು ಅನಂತರಾಮರೆಡ್ಡಿ ಹೆದರಿಸಿದ್ದಾರೆ. ಈ ಕುರಿತು ಎಚ್ಎಸ್ಆರ್ ಬಡಾವಣೆ ಪೊಲೀಸರಿಗೆ ದೂರು ನೀಡಿರುವ ಮಯೂರ ಪಟೇಲ್, ನಾನು ಖರೀದಿಸಿರುವ ನಿವೇಶನಕ್ಕೆ ಅಕ್ರಮವಾಗಿ ಕಾಂಪೌಂಡ್ ಹಾಕಿದ್ದಾರೆ. ಅಲ್ಲದೇ ಅಲ್ಲಿಗೆ ಕಾಲಿಡದಂತೆ ಜೀವ ಬೆದರಿಕೆ ಹಾಕಿರುವ ಬಗ್ಗೆ ತಿಳಿಸಿದ್ದಾರೆ.

Recommended Video
ನಕಲಿ ದಾಖಲೆಗಳನ್ನು ಸೃಷ್ಟಿಸಿ ಅನಂತರಾಮರೆಡ್ಡಿ ಅಸಲಿ ಜಮೀನು ಎಂದು ಸುಳ್ಳು ಹೇಳಿ ಬೆದರಿಕೆ ಹಾಕುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮಯೂರ್ ಪಟೇಲ್ ಅನಂತರಾಮರೆಡ್ಡಿ ಮತ್ತು ಮಂಜುನಾಥ ರೆಡ್ಡಿ ವಿರುದ್ಧ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು












Click it and Unblock the Notifications