ಶ್ರುತಿ ಅವಕಾಶವಾದಿಯಲ್ಲ, ಅರ್ಜುನ್ ಅಪರಾಧಿ ಎನ್ನಲಾರೆ: ಪ್ರಕಾಶ್ ರಾಜ್
ಬೆಂಗಳೂರು, ಅಕ್ಟೋಬರ್ 25: ರಾಷ್ಟ್ರಪ್ರಶಸ್ತಿ ವಿಜೇತ ನಟ ಪ್ರಕಾಶ್ ರಾಜ್ ಅವರು ಮೀಟೂ ಅಭಿಯಾನವು ಹಳಿ ತಪ್ಪುವಂತೆ ಮಾಡುತ್ತಿರುವವರ ಬಗ್ಗೆ ಎಚ್ಚರಿಸಿ ಟ್ವೀಟ್ ಮಾಡಿದ್ದಾರೆ. ಮೀಟೂ ಅಭಿಯಾನವನ್ನು ಬೆಂಬಲಿಸಿದ್ದೇಕೆ? ಎಂಬುದನ್ನು ಸರಣಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಆಚಾರ..ವಿಚಾರಗಳಿಲ್ಲದ ನಾಲಿಗೆಗಳು..ತಮ್ಮ ನೀಚ ಬುದ್ದಿಯಿಂದ ತಮ್ಮ ತಮ್ಮ ಹಿತಾಸಕ್ತಿಗಳ ಬೇಳೆ ಬೇಯಿಸಿಕೊಳ್ಳುತ್ತಾ #ಮೀಟೂ ಅಭಿಯಾನವನ್ನು ದಾರಿ ತಪ್ಪಿಸುವ ಮುನ್ನ #justasking ಎಂದು ಇಂದು ಟ್ವೀಟ್ ಮಾಡಿದ್ದಾರೆ.
ನಟಿ ಶ್ರುತಿ ಹರಿಹರನ್ ಅವರು ಹಿರಿಯ ನಟ ಅರ್ಜುನ್ ಸರ್ಜಾ ಅವರ ವಿರುದ್ಧ #metoo ಅಭಿಯಾನದಡಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಶ್ರುತಿ ಪರ ಟ್ವೀಟ್ ಮಾಡಿದ್ದರು. ಆದರೆ, ನಂತರ ಸ್ಪಷ್ಟನೆ ನೀಡಿದ್ದು, ಶ್ರುತಿ ಅವಕಾಶವಾದಿಯಲ್ಲ, ಅರ್ಜುನ್ ಈ ಪ್ರಕರಣದಲ್ಲಿ ಅಪರಾಧಿ ಎನ್ನಲಾರೆ ಎಂದಿದ್ದಾರೆ. ಅರ್ಜುನ್ ಅವರು ಈ ಪ್ರಕರಣದಲ್ಲಿ ಕ್ಷಮೆಯಾಚಿಸಿದರೆ ತಪ್ಪೇನಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ನಾನು ಅರ್ಜುನ್ ನನ್ನು ಬಹಳ ವರ್ಷಗಳಿಂದ ಬಲ್ಲೆ. ನಾನು ಆತನ ವಿರುದ್ಧ ಅರೋಪ ಮಾಡಿಲ್ಲ. ಅರ್ಥವಿಲ್ಲದ ಆರೋಪ, ಮಾತುಕತೆ ಮಾಡುವ ಪೈಕಿ ನಾನಲ್ಲ ಎಂದಿದ್ದಾರೆ.

ಹೆಣ್ಣುಮಗಳ ನೋವಿಗೆ ಸ್ಪಂದಿಸಬೇಕಿದೆ
ಒಬ್ಬ ಹೆಣ್ಣುಮಗಳು ತನಗಾದ ನೋವನ್ನು ತೋಡಿಕೊಂಡ ತಕ್ಷಣ, ನಿನ್ನ ಬಳಿ ಸಾಕ್ಷಿ ಇದೆಯೇ, ಯಾಕೆ ನೀನಿದನ್ನು ಹೇಳುತ್ತಿರುವೆ? ನಿನಗೆ ಇದನ್ನು ಹೇಳಿಕೊಟ್ಟವರು ಯಾರು? ಯಾವ ರಾಜಕೀಯ ಪಕ್ಷದ ಬೆಂಬಲ ಇದೆ? ಈ ಆರೋಪದಲ್ಲಿ ರಾಜಕೀಯ ಪ್ರೇರಣೆ ಇದೆಯೇ? ಎಂದೆಲ್ಲ ಪ್ರಶ್ನಿಸಿ ಅವಮಾನಿಸಬಾರದು.

ಹೆಣ್ಣನ್ನು ಹೆಣ್ಣೇ ನಂಬದಂಥ ಪರಿಸ್ಥಿತಿ ಇದೆ
ಇಂಥದ್ದನ್ನು ನಾನು ನೋಡುತ್ತಲೇ ಬಂದಿದ್ದೇನೆ. ಹೀಗಾಗಿ, ಇದನ್ನೆಲ್ಲ ಕೇಳಿದಾಗ ನನಗೆ ಅಷ್ಟೇನೂ ಆಶ್ಚರ್ಯ ಆಗುವುದಿಲ್ಲ. ಇಂಥದ್ದನ್ನು ನಾನು ಸಾಕಷ್ಟು ನೋಡಿಕೊಂಡೇ ಬಂದಿದ್ದೇನೆ. ಹೆಣ್ಣು ತನಗೆ ಅನ್ಯಾಯವಾಗಿದೆ ಎಂದರೆ ಗಂಡು ಬಿಡಿ, ಹೆಣ್ಣು ಕೂಡಾ ಅದನ್ನು ಎಷ್ಟೊ ಸಲ ನಂಬುವುದಿಲ್ಲ. ನನ್ನ ಜೊತೆ ಎಷ್ಟು ಸಂಭಾವಿತರಾಗಿ ನಡೆದುಕೊಂಡಿದ್ದಾರೆ ಎಂದು ಮತ್ತೊಬ್ಬ ಹೆಣ್ಣುಮಗಳು ಅದನ್ನು ವಿರೋಧಿಸುತ್ತಾಳೆ. ಕೊನೆಗೆ ಆ ಹೆಣ್ಣು ಖಳನಾಯಕಿಯಂತೆ ಕಾಣಿಸುತ್ತಾಳೆ.

ದ್ರೌಪದಿಗೆ ಆದ ಸ್ಥಿತಿ ಈಗಿನ ಸಂತ್ರಸ್ತರಿಗೆ ಬಂದಿದೆ
ದ್ರೌಪದಿಗೆ ಆದ ಸ್ಥಿತಿ ಈಗಿನ ಸಂತ್ರಸ್ತರಿಗೆ ಬಂದಿದೆ. ಶ್ರುತಿ ಹರಿಹರನ್ ಪ್ರಸಂಗ ಎಬ್ಬಿಸಿರುವ ಅಲೆಗಳನ್ನು ನೋಡಿದರೆ ಗಾಬರಿಯಾಗುತ್ತದೆ. ಎಡಪಂಥೀಯರ ಪಿತೂರಿ ಅಂತ ಯಾರೋ ಕರೆದರಂತೆ. ಎಲ್ಲವನ್ನು ರಾಜಕೀಯಕ್ಕೆ ತಗುಲಿ ಹಾಕಿ ಬಿಡುತ್ತಾರೆ. ರಾಜಕೀಯ ಅಂದುಬಿಟ್ಟರೆ ಲೈಂಗಿಕ ದೌರ್ಜನ್ಯ ಕೂಡಾ ತಪ್ಪೇನಲ್ಲ ಇವರ ಪಾಲಿಗೆ.
ಅರ್ಜುನ್ ಸರ್ಜಾರನ್ನು ಸಮರ್ಥಿಸಿಕೊಳ್ಳಲು ಇವರೆಲ್ಲ ಎದ್ದು ಕೂತಿದ್ದಾರೆ ಎಂದು ನನಗೆ ಅನಿಸಿಲ್ಲ. ಹೆಣ್ನು ಮಾತನಾಡುವುದನ್ನು ತಡೆಯುವುದು ಇವರ ಉದ್ದೇಶ. ನ್ಯಾಯ ಕೇಳಲು ನಿಂತ ದ್ರೌಪದಿಯ ಕತೆಗೂ ಇಲ್ಲಿ ನಡೆಯುತ್ತಿರುವುದಕ್ಕೂ ವ್ಯತ್ಯಾಸವೇ ಇಲ್ಲವಲ್ಲ.

ಅರ್ಜುನ್ ಕ್ಷಮೆ ಕೇಳಲಿ ಎಂದರೆ ನನ್ನ ವಿರುದ್ಧ ನಿಂತರು
ಅರ್ಜುನ್ ಸರ್ಜಾ ಕ್ಷಮೆ ಕೇಳಬಹುದಾಗಿತ್ತು. ಅಂತ ನಾನು ಹೇಳಿದಾಗ ಜಗತ್ತು ನನ್ನ ಮೇಲೆ ತಿರುಗಿಬಿದ್ದಿತು. ಅರ್ಜುನ್ ಸರ್ಜಾ ತಪ್ಪು ಮಾಡಿದ್ದಾರೆ ಅಂತ ನಾನೆಂದೂ ಹೇಳಿರಲಿಲ್ಲ. ನಾನು ತಪ್ಪಾಗಿ ನಡೆದುಕೊಂಡಿದ್ದೇನೆ ಎಂಬ ಭಾವವನ್ನು ನಿನ್ನಲ್ಲಿ ಹುಟ್ಟಿಸಿದ್ದರೆ ಕ್ಷಮಿಸಿ ಅಂತ ಒಂದು ಕ್ಷಮಾಪಣೆಯನ್ನು ಮುಂದಿಡುವುದು ಅರೋಗ್ಯವಂಥ ಜೀವದ ಮೊದಲ ಲಕ್ಷಣ.
ಒಂದು ಕೆಟ್ಟ ಸ್ಪರ್ಶ, ಉದ್ದೇಶಪೂರ್ವಕವಾಗಿರಲಿಲ್ಲ ಎಂದುಬಿಡುವುದಕ್ಕೆ ಅಹಂಕಾರ ಯಾಕೆ ಅಡ್ಡಿಬರಬೇಕು?
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications