Prakash Raj: ದರ್ಶನ್ ಬಂಧನ: ನಟ ಪ್ರಕಾಶ್ ರಾಜ್ ಹೇಳಿದ್ದೇನು..?
ಬೆಂಗಳೂರು, ಜುಲೈ 10: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಈ ಪ್ರಕರಣದ ಬಗ್ಗೆ ಈಗಾಗಲೇ ಚಿತ್ರರಂಗದ ಅನೇಕ ನಟ ನಟಿಯರು ಪ್ರತಿಕ್ರಿಯಿಸಿದ್ದು, ಬಹುಭಾಷಾ ನಟ ಪ್ರಕಾಶ್ ರಾಜ್ ಈವರೆಗೂ ದರ್ಶನ್ ಬಂಧನದ ಬಗ್ಗೆ ತುಟಿ ಬಿಚ್ಚಿರಲಿಲ್ಲ. ಇದೀಗ ಫಾದರ್ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ್ದಾರೆ.
ನಟ ದರ್ಶನ್ ಬಂಧನದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಪ್ರಕಾಶ್ ರಾಜ್, ಈಗ ನಡೆಯುತ್ತಿರುವ ಘಟನಾವಳಿಗಳ ಬಗ್ಗೆ ಕಳೆದ ಒಂದು ತಿಂಗಳಿಂದ ಎಲ್ಲರೂ ಮಾತನಾಡುತ್ತಿದ್ದಾರೆ. ಹೀಗಾಗಿ ನಾವು ಸ್ವಲ್ಪ ಬದಲಾವಣೆ ಮಾಡೋಣ. ಈಗ ದರ್ಶನ್ ಬಗ್ಗೆ ಮಾತನಾಡಬೇಕು, ಸೂರಜ್ ರೇವಣ್ಣ ಬಗ್ಗೆ ಮಾತನಾಡಬೇಕು, ಪ್ರಜ್ವಲ್ ರೇವಣ್ಣ ಬಗ್ಗೆ ಮಾತನಾಡಬೇಕು, ಯಡಿಯೂರಪ್ಪ ಅವರ ಬಗ್ಗೆ ಮಾತನಾಡಬೇಕು ಅಲ್ವಾ..

ಕಳೆದ ಒಂದೂವರೆ ತಿಂಗಳಿಂದ ಎಲ್ಲರೂ ಇದನ್ನೇ ಮಾತನಾಡುತ್ತಿರುವುದಿಂದ ನಾನು ನೀವು ಕುಳಿತುಕೊಂಡು ನೀಟ್ ಪರೀಕ್ಷೆ ಬಗ್ಗೆ ಮಾತನಾಡೋಣ. ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಜಾಸ್ತಿಯಾಗುತ್ತಿಲ್ಲ ಅದರ ಬಗ್ಗೆ ಮಾತನಾಡೋಣ. ಆಮೇಲೆ ಆಟೋ ಚಾಲಕರಿಗೆ ಬೈಕ್ನವರಿಂದ ತೊಂದರೆಯಾಗುತ್ತಿದೆ. ಅದರ ಬಗ್ಗೆ ಮಾತನಾಡೋಣ ಎಂದರು.
ಈ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಮಾಡುವವರಿಗೆ ತಿಂಗಳಿಗೆ ಮೂರು ಸಾವಿರ ರೂಪಾಯಿ ಸಂಬಳ ಅವರ ಬಗ್ಗೆ ಏನಾದರೂ ಮಾತನಾಡೋಣ. ಉಳಿದವರೆಲ್ಲಾ ಬೇರೆ ವಿಚಾರಗಳಿಂದ ಬ್ಯೂಸಿಯಾಗಿರುವುದರಿಂದ ನಾವು ಈ ವಿಚಾರಗಳ ಬಗ್ಗೆ ಮಾತನಾಡೋಣ ಎಂದು ಹೇಳಿದ್ದಾರೆ.
ಇನ್ನು ಸಾಮಾಜಿಕ ಜಾಲತಾಣಗಳ ಬಳಕೆ ಹಾಗೂ ದುರುಪಯೋಗದ ಬಗ್ಗೆ ಮಾತನಾಡಿದ ಪ್ರಕಾಶ್ ರಾಜ್ ಅವರು, ಎಲ್ಲದರಲ್ಲೂ ಒಳ್ಳೆಯದು ಮತ್ತು ಕೆಟ್ಟದು ಇರುತ್ತದೆ. ನಾವು ಒಳ್ಳೆಯದನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು. ಕೆಟ್ಟದರ ಬಗ್ಗೆ ಬಹಳ ಯೋಚನೆ ಮಾಡಬಾರದು ಎಂದು ಹೇಳಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications