ಆರ್ಟ್ ಆಫ್ ಗೀವಿಂಗ್: ನಟ ರಾಘಣ್ಣ ನೀಡಿದ್ದೇನು?
ಬೆಂಗಳೂರು, ಮೇ 17: ಆರ್ಟ್ ಆಫ್ ಗೀವಿಂಗ್ 2ನೇ ವಾರ್ಷಿಕೋತ್ಸವದಲ್ಲಿಪಾಲ್ಗೊಂಡಿದ್ದ ನಟ ರಾಘವೇಂದ್ರ ರಾಜ್ ಕುಮಾರ್ ಅವರು ಐದು ಲಕ್ಷ ಬೇವಿನ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆ ಮಾಡುವ ಸಂಕಲ್ಪ ತೊಟ್ಟಿದ್ದಾರೆ. ಬೇವಿನ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಕೆಲವೇ ವರ್ಷಗಳಲ್ಲಿ ಐದು ಲಕ್ಷ ಬೇವಿನ ಸಸಿಗಳನ್ನು ನೆಡಲಾಗುವುದು ಎಂದರು.
ಅಭಿಮಾನಿಗಳಲ್ಲೂ ಕೂಡ ಸಮಾಜಸೇವಾ ಮನೋಭಾವವನ್ನು ರೂಪಿಸಬೇಕು, ಅವರನ್ನು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು, ಕೊಡುವ ಗುಣ ಕೇವಲ ಮಾತಿಗೆ ಸೀಮಿತವಾಗದೆ ಕೃತಿಗಿಳಿಯಬೇಕು ಎಂದರು.
ಸಮಾಜಮುಖಿ ರಾಘಣ್ಣ: ಅಘೋರಿ ಸ್ವಾಮೀಜಿಯೊಬ್ಬರು ಆಶೀರ್ವಾದ ನೀಡಿದ ನಂತರ ತಮ್ಮ ಮನಸ್ಸಿನಲ್ಲಿ ಪರಿವರ್ತನೆಯಾಗಿದ್ದು, ಸಮಾಜಮುಖಿ ಸೇವೆ ಮಾಡಲು ಮುಂದಾಗಿರುವುದಾಗಿ ತಿಳಿಸಿದರು. ಸ್ವಾಮೀಜಿಯವರ ಆಶೀರ್ವಾದದ ನಂತರ ತಮ್ಮ ಆರೋಗ್ಯದಲ್ಲಿ ಸುಧಾರಣೆಯಾಗಿದೆ ಎಂದು ಹೇಳಿದರು.

ಶಾಸಕ ಬಿ.ಎನ್.ವಿಜಯ್ಕುಮಾರ್ : ಕೊಡುವುದರಿಂದ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಕಳಿಂಗ ವಿಶ್ವವಿದ್ಯಾಲಯ ಯಾವುದೇ ಪ್ರಚಾರವಿಲ್ಲದೆ ದೇಶಕ್ಕೆ ಮಾದರಿಯಾಗುವ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮದ ಅಧ್ಯಕ್ಷ ಹಾಗೂ ಡಿಜಿಪಿ ಸುಶಾಂತ್ ಮಹಾಪಾತ್ರ: ಶಿಕ್ಷಣ ಕ್ಷೇತ್ರ ಹಾಗೂ ಸಮಾಜಕ್ಕೆ ಒಳ್ಳೆಯ ಕೆಲಸ ಮಾಡುವಂತವರಿಗೆ ಪ್ರೋತ್ಸಾಹ ನೀಡಬೇಕೆ ಹೊರತು ಕಾಲೆಳೆಯಬಾರದು. ಸಮಾಜಸೇವೆ ಮಾಡುವವರಿಂದ ಮೌನಕ್ರಾಂತಿ ಯಾಗುತ್ತಿದೆ
ಯಾರು ಯಾರು ಬಂದಿದ್ದರು: ಕಾರ್ಯಕ್ರಮದಲ್ಲಿ ಮಣಿಪಾಲ್ ಫೌಂಡೇಷನ್ ಕಾರ್ಯನಿರ್ವಾಹಕ ಅಧಿಕಾರಿ ಪಿ.ಬಾಲಚಂದ್ರನ್ ವಾರಿಯರ್, ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಡಾ.ವೂಡೆ.ಪಿ.ಕೃಷ್ಣ, ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಮುಂತಾದ ಗಣ್ಯರು ಆಗಮಿಸಿದ್ದರು.
ಆರ್ಟ್ ಆಫ್ ಗೀವಿಂಗ್ : ಕಳಿಂಗ ವಿಶ್ವವಿದ್ಯಾಲಯದ ಸ್ಥಾಪಕ ಅಚ್ಯುತ ಸಮಂತಾ ಅವರ ಪರಿಕಲ್ಪನೆಯಲ್ಲಿ ಸಮಾಜದಿಂದ ಪಡೆದಿದ್ದನ್ನು ಸಮಾಜಕ್ಕೆ ನೀಡುವ ಕಾರ್ಯ ಸತತವಾಗಿ ನಡೆಸಿಕೊಂಡು ಬರಲಾಗಿದೆ. ಸಮರ್ಪಣಾ ಕಲೆ ಮಾನವ ಜೀವನದಲ್ಲಿ ಅನನ್ಯ ಅನುಭೂತಿ ನೀಡುವ ಕ್ರಿಯೆ. ತಮ್ಮಲ್ಲಿ ಇರುವುದನ್ನು ಇಲ್ಲದವರಿಗೆ ನೀಡುವುದನ್ನೇ ಸಮರ್ಪಣೆ ಎನ್ನಬಹುದು. 1992-93ರಲ್ಲಿ ಆರಂಭವಾದ ಕಳಿಂಗ ವಿಶ್ವವಿದ್ಯಾಲಯದಲ್ಲಿ ಈಗ ಸುಮಾರು 50 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ.
ಮೇ.17ರಂದು ನಗರದ ಶೇಷಾದ್ರಿಪುರಂ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದ ವಿಡಿಯೋಗಳು
ಕಾರ್ಯಕ್ರಮದ ವಿಡಿಯೋ
ಚಿತ್ರ ಹಾಗೂ ವಿಡಿಯೋ ಕೃಪೆ: ರಿಷಿ ಶರ್ಮ
(ಒನ್ ಇಂಡಿಯಾ ಸುದ್ದಿ)
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ












Click it and Unblock the Notifications