ಸೈಕಲ್ ರವಿ ಜತೆ ನಂಟು: ಸಿಸಿಬಿಗೆ ಹಾಜರಾದ ಸಾಧು ಕೋಕಿಲ
Recommended Video

ಬೆಂಗಳೂರು, ಜುಲೈ 10: ರೌಡಿ ಶೀಟರ್ ಸೈಕಲ್ ರವಿಗೆ ನಿರಂತರವಾಗಿ ಮೊಬೈಲ್ ಕರೆ ಮಾಡಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ಸಿಸಿಬಿ ಕಚೇರಿಗೆ ಸೋಮವಾರ ಭೇಟಿ ನೀಡಿದರು.
ಸೋಮವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಿಸಿಬಿ ಕಚೇರಿಗೆ ತೆರಳಿದ ಸಾಧು ಕೋಕಿಲ, ಅಲ್ಲಿ ಹಿರಿಯ ಅಧಿಕಾರಿಯನ್ನು ಭೇಟಿ ಮಾಡಿದರು.
ಸ್ವಯಂಪ್ರೇರಿತರಾಗಿ ಹೋಗಿದ್ದ ಅವರು, ತಮಗೂ ಸೈಕಲ್ ರವಿಗೂ ಸಂಬಂಧವಿಲ್ಲ. ಆದರೂ ಈ ಪ್ರಕರಣದಲ್ಲಿ ತಮ್ಮ ಹೆಸರು ಏಕೆ ಕೇಳಿಬರುತ್ತಿದೆ ಎಂದು ವಿಚಾರಿಸಿದರು ಎನ್ನಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಸಿಸಿಬಿ ಅಧಿಕಾರಿ, ಸೈಕಲ್ ರವಿ ಜತೆ ನಿಮಗೆ ಸಂಪರ್ಕವಿದೆ ಎಂದು ನಾವು ಹೇಳಿಕೆ ನೀಡಿಲ್ಲ. ಅದಕ್ಕೆ ಸಾಕ್ಷ್ಯಗಳು ಕೂಡ ಇಲ್ಲ. ವಿಚಾರಣೆಯ ಅಗತ್ಯವಿದ್ದರೆ ನಾವೇ ನಿಮ್ಮನ್ನು ಕರೆಯುತ್ತೇವೆ ಎಂದು ಹೇಳಿ ಅಲ್ಲಿಂದ ಕಳುಹಿಸಿದರು ಎನ್ನಲಾಗಿದೆ.
ಕಚೇರಿಯಿಂದ ಹೊರಬಂದ ಸಾಧು ಕೋಕಿಲ, ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡದೆ ಹೊರಟು ಹೋದರು.
ಸೈಕಲ್ ರವಿ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆಯ ಜೆಡಿಎಸ್ನ ಪರಾಜಿತ ಅಭ್ಯರ್ಥಿ ಅಲ್ತಾಫ್ಖಾನ್ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಅಲ್ತಾಫ್, ಇವೆಲ್ಲವೂ ರಾಜಕೀಯ ಗಿಮಿಕ್ಕಿಗಾಗಿ ಜಮೀರ್ ಅಹ್ಮದ್ ಈ ರೀತಿ ಮಾಡುತ್ತಿರುವ ತಂತ್ರ. ಸೈಕಲ್ ರವಿಯನ್ನು ನಾನು 18 ವರ್ಷದ ಹಿಂದೆ ನೋಡಿದ್ದೆ.
ಸೈಕಲ್ ರವಿ ತಮ್ಮ ಮಹೇಶ್ ನನ್ನ ಕ್ಷೇತ್ರದ ನಿವಾಸಿ. ಚುನಾವಣೆ ವೇಳೆ ನನ್ನ ಪರವಾಗಿ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಸೈಕಲ್ ರವಿ ನನಗೆ ಕರೆ ಮಾಡಿ ಮಾತನಾಡಿದ್ದರು ಎಂದು ಹೇಳಿದ್ದಾರೆ.
ಸೈಕಲ್ ರವಿಯ ನಂಬರ್ನಿಂದ ಕರೆ ಬಂದಿದ್ದು ನಿಜ. ಆದರೆ ಅವರೇ ಮಾತನಾಡಿದ್ದೋ ಅಲ್ಲವೋ ತಿಳಿದಿಲ್ಲ. ಚುನಾವಣೆಯ ಒತ್ತಡದಲ್ಲಿ ಅದನ್ನು ಗಮನಿಸಲಿಲ್ಲ.
ಆದರೆ, ಇಂದು ಸೈಕಲ್ ರವಿಗೂ ನನಗೂ ಸಂಬಂಧಿವಿದೆ ಎಂದು ಸಿಸಿಬಿ ಪೊಲೀಸರನ್ನು ನನ್ನನ್ನು ವಿಚಾರಣೆಗೆ ಕರೆಯಿಸಿದ್ದರು. ಬೇಕಿದ್ದರೆ ತನಿಖೆ ಮಾಡಲಿ. ಎಲ್ಲವನ್ನೂ ಎದುರಿಸುತ್ತೇನೆ ಎಂದರು.
ರೌಡಿ ಶೀಟರ್ ಸೈಕಲ್ ರವಿಯನ್ನು ಜೂನ್ 27ರಂದು ರಾಜರಾಜೇಶ್ವರಿ ನಗರದ ನೈಸ್ ರೋಡ್ ಸಮೀಪ ಬಂಧಿಸಲು ಹೋದಾಗ ಆತ, ಪೊಲೀಸ್ ಕಾನ್ಸ್ಟೆಬಲ್ ಸತೀಶ್ ಮೇಲೆ ಹಲ್ಲೆಗೆ ಯತ್ನಿಸಿದ್ದ.
ಆಗ ಸಿಸಿಬಿ ಇನ್ಸ್ಪೆಕ್ಟರ್ ಪ್ರಕಾಶ್ ಮತ್ತು ಪಿಐ ಮಲ್ಲಿಕಾರ್ಜುನ್ ಎರಡು ಸುತ್ತು ಗುಂಡುಹಾರಿಸಿ ಅವನನ್ನು ವಶಕ್ಕೆ ಪಡೆದುಕೊಂಡಿದ್ದರು.
ಸೈಕಲ್ ರವಿಯೊಂದಿಗೆ ರಾಜಕಾರಣಿಗಳು ಮತ್ತು ಸಿನಿಮಾರಂಗದ ಅನೇಕರು ನಂಟು ಇರಿಸಿಕೊಂಡಿದ್ದರು ಎಂಬ ಆರೋಪಗಳು ಕೇಳಿಬಂದಿವೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications