Vinod Raj: ಲೀಲಮ್ಮನ ಮಗನ ಕಾರ್ಯಕ್ಕೆ ಜನರ ಮೆಚ್ಚುಗೆ: ಬಿರು ಬಿಸಿಲಿನಲ್ಲೂ ವಿನೋದ್ ರಾಜ್ ಸಮಾಜಸೇವೆ
ಬೆಂಗಳೂರು, ಮೇ 06: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಪುತ್ರ, ಸ್ಯಾಂಡಲ್ವುಡ್ ನಟ ವಿನೋದ್ ರಾಜ್ ಅವರು ತಮ್ಮ ಸಮಾಜಮುಖಿ ಕೆಲಸಗಳ ಮೂಲಕ ಆಗಾಗ ಸುದ್ದಿಯಲ್ಲಿರುತ್ತಾರೆ. ಸಮಾಜಮುಖಿ ಕಾರ್ಯ ಹಾಗೂ ದಾನ- ಧರ್ಮಗಳಲ್ಲಿ ಸದಾ ಮುಂದಿರುವ ವಿನೋದ್ ರಾಜ್ ಅವರು ಇದೀಗ ಮತ್ತೊಂದು ಜನ ಮೆಚ್ಚುವ ಕಾರ್ಯವನ್ನು ಮಾಡಿದ್ದು, ಲೀಲಾವತಿ ಅವರ ಪುತ್ರನ ಕಾರ್ಯವನ್ನು ಜನರು ಶ್ಲಾಘಿಸಿದ್ದಾರೆ.
ಸ್ಯಾಂಡಲ್ವುಡ್ ನಟ ವಿನೋದ್ ರಾಜ್ ಅವರು ಬೆಂಗಳೂರು ನಗರದ ನೆಲಮಂಗಲದ ಕರೆಕಲ್ ಕ್ರಾಸ್ನಿಂದ ಸೋಲದೇವನಹಳ್ಳಿವರೆಗೂ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಿದ್ದಾರೆ. ಸರ್ಕಾರದ ಯಾವುದೇ ಅನುದಾನಕ್ಕೆ ಕಾಯದೇ ವಿನೋದ್ ರಾಜ್ ತಾವೇ ಸ್ವತಃ ನಿಂತು ತಮ್ಮ ಸ್ವಂತ ಖರ್ಚಿನಲ್ಲಿ ರಸ್ತೆ ರಿಪೇರಿ ಕೆಲಸ ಮಾಡಿಸಿದ್ದಾರೆ.

ನೆಲಮಂಗಲದ ಕರೆಕಲ್ ಕ್ರಾಸ್ನಿಂದ ಸೋಲದೇವನಹಳ್ಳಿವರೆಗೂ ಗುಂಡಿ ಬಿದ್ದ ರಸ್ತೆ ಹಾಗೂ ಕೆಟ್ಟು ಹೋದ ರಸ್ತೆಗಳನ್ನು ಸರಿ ಪಡಿಸಿದ್ದಾರೆ. ಈ ಮೂಲಕ ಮಳೆಗಾಲ ಆರಂಭವಾಗುವ ಮೊದಲೇ ವಿನೋದ್ ರಾಜ್ ರಸ್ತೆಯನ್ನು ರಿಪೇರಿ ಮಾಡಿಸಿದ್ದಾರೆ.
ಒಮ್ಮೆ ಮಳೆಗಾಲ ಆರಂಭವಾಗಿ ಜೋರಾಗಿ ಮಳೆ ಶುರುವಾದರೆ, ರಸ್ತೆಗಳು ಮತ್ತಷ್ಟು ಕೆಟ್ಟು ಹೋಗಲಿದ್ದು, ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುತ್ತದೆ. ಅಲ್ಲದೇ ರಸ್ತೆಗಳು ಕೆಸರು ಮಯವಾಗುತ್ತದೆ. ಇದರಿಂದ ಅಪಘಾತಗಳ ಸಂಖ್ಯೆ ಕೂಡ ಹೆಚ್ಚಾಗುತ್ತದೆ.

ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ವಿನೋದ್ ರಾಜ್ ಈ ಸುಡು ಬಿಸಿಲಿನ ಮಧ್ಯೆಯೂ ರಸ್ತೆಯಲ್ಲಿ ನಿಂತು ತಾವೇ ಸ್ವತಃ ರಸ್ತೆಗುಂಡಿಗಳನ್ನು ಮುಚ್ಚಿಸುವ ಕೆಲಸವನ್ನು ಮಾಡಿಸಿದ್ದಾರೆ. ಇತ್ತೀಚಿಗಷ್ಟೇ ವಿನೋದ್ ರಾಜ್ ಅವರು ಈ ಬೇಸಿಗೆಯಲ್ಲಿ ನೀರು-ಹುಲ್ಲು ಇಲ್ಲದೇ ಹಸುಗಳನ್ನು ಸಾಕಲು ಪರದಾಡುತ್ತಿದ್ದ ರೈತರಿಗೆ ನೆರವಾಗಿದ್ದು, ರೈತರ ಹಸುಗಳಿಗೆ ಹುಲ್ಲು ನೀಡಿದ್ದರು.
ಸದ್ಯ ನಟಯಿಂದ ಅಂತರ ಕಾಯ್ದುಕೊಂಡಿರುವ ವಿನೋದ್ ರಾಜ್ ಅವರು, ಕೆಲವೊಂದು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ತಾಯಿ ಲೀಲಾವತಿ ಅವರ ಅಗಲಿಕೆ ಬಳಿಕ ಮೌನಕ್ಕೆ ಜಾರಿದ್ದ ವಿನೋದ್ ರಾಜ್, ಇತ್ತೀಚಿಗೆ ಮಹಾನಟಿ ಶೋನಲ್ಲಿ ಭಾಗಿಯಾಗಿದ್ದರು.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications