Yuva Rajkumar: ಇಂದು ಯುವ-ಶ್ರೀದೇವಿ ವಿಚ್ಛೇದನ ಅರ್ಜಿ ವಿಚಾರಣೆ
ಬೆಂಗಳೂರು, ಜುಲೈ 04: ದೊಡ್ಮನೆ ಕುಟುಂಬದ ಮೂರನೇ ತಲೆಮಾರಿನ ನಟ ಯುವ ರಾಜಕುಮಾರ್ ದಾಂಪತ್ಯ ಜೀವನದಲ್ಲಿ ಬಿರುಗಾಳಿ ಎದಿದ್ದು, ಅವರು ಪತ್ನಿಗೆ ಡಿವೋರ್ಸ್ ನೀಡುತ್ತಿರುವ ವಿಚಾರ ಬಹಿರಂಗವಾಗಿದೆ. ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ಇಂದು ಗುರುವಾರ (ಜುಲೈ 04) ನಡೆಯಲಿದೆ.
ನಟ ಯುವರಾಜ ಕುಮಾರ್ ಹಾಗೂ ಪತ್ನಿ ಶ್ರೀದೇವಿ ಭೈರಪ್ಪ ದಾಂಪತ್ಯ ಜೀವನ ಸರಿ ಇಲ್ಲ ಎಂಬುದು ಜಗಜ್ಜಾಹಿರಾಗಿದೆ. ಯುವ ಅವರು ಪತ್ನಿಗೆ ಡಿವೋರ್ಸ್ ನೋಟಿಸ್ ನೀಡುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂತು. ಅವರು ಪತ್ನಿ ಅಗೌರವ ತೋರುತ್ತಾರೆ ಎಂದೆಲ್ಲ ಹೇಳಿ ವಿಚ್ಛೇದನಕ್ಕಾಗಿ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ಯುವ ಪತ್ನಿ ಶ್ರೀದೇವಿ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಇದಕ್ಕೆ ಕೋರ್ಟ್ನಲ್ಲಿಯೇ ಉತ್ತರಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದ ಪತ್ನಿ ಶ್ರೀದೇವಿ ಬೈರಪ್ಪ, ತನ್ನ ಪತಿ ಹಾಗೂ ಸ್ಯಾಂಡಲ್ವುಡ್ ನಟಿಯೊಂದಿಗೆ ಸಂಬಂಧ ಇರುವುದಾಗಿ ತಿಳಿಸಿದ್ದರು. ಈ ಕುರಿತ ಆಡಿಯೋ ಸಹ ಹೊರ ಬಂದಿದ್ದು, ಎಲ್ಲರು ನಂಬುವಂತೆ ಮಾಡಿದೆ.
ಪತ್ನಿ ಶ್ರೀದೇವಿ ಬೆಂಗಳೂರಿಗೆ ಆಗಮನ
ಸದ್ಯ ಶ್ರೀದೇವಿ ಬೈರಪ್ಪ ಅವರು ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದು, ಕೋರ್ಟ್ ವಿಚಾರಣೆ ಪ್ರಯುಕ್ತ ಬುಧವಾರವಷ್ಟೇ ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ನ್ಯಾಯಾಲಯದಲ್ಲಿ ತಮಗೆ ಬಂದ ನೋಟಿಸ್, ದಾಂಪತ್ಯ ಜೀವನ ಇನ್ನಿತರ ವಿಷಯ ಕುರಿತು ಶ್ರೀದೇವಿ ಅವರು ಮಾತನಾಡಲಿದ್ದಾರೆ ಎನ್ನಲಾಗಿದೆ.
ಯುವ ರಾಜಕುಮಾರ್ ಈಗಷ್ಟೇ ಒಂದು ಸಿನಿಮಾ ಮಾಡಿ, ಗೆದ್ದ ಖುಷಿಯಲ್ಲಿದ್ದರು. ಪನೀತ್ ರಾಜಕುಮಾರ್ ನಿಧನಾನಂತರ ಅವರ ಸ್ಥಾನ ತುಂಬುವವರು ಇವರೇ ಎಂದು ಹೇಳಲಾಗಿತ್ತು. ಆದರೆ ಅಭಿಮಾನಿಗಳ ಈ ಭರವಸೆ, ಆಸೆಯನ್ನು ನಟ ಯುವ ನಿರಾಸೆ ಮಾಡಿದ್ದಾರೆ. ಅಭಿಮಾನಿಗಳು ಅಪ್ಪು ಅಪ್ಪುನೇ, ಅವರ ಸ್ಥಾನ ಯಾರು ತುಂಬಲು ಆಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ದೊಡ್ಮನೆಯಲ್ಲಿ ದಾಂಪತ್ಯದಲ್ಲಿ ಕಲಹ ವಿಚಾರವಾಗಿ, ಮುನ್ನೆಲೆ ಬಂದ, ದೊಡ್ಮನೆ ವೈಯಕ್ತಿಕ ವಿಚಾರಗಳು ಸುದ್ದಿಯಾದ ಮೊದಲ ಪ್ರಕರಣ ಇದಾಗಿದೆ. ಇಂತಹ ಘಟನೆ ನಡೆಯಬಾರದಿತ್ತು ಎಂದು ಅಭಿಮಾನಿಗಳು ಯುವಾ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications