Get Updates
Get notified of breaking news, exclusive insights, and must-see stories!

Arohita joins AAP : ಬೆಂಗಳೂರಿನಲ್ಲಿ ಆಪ್ ಸೇರಿದ 'ಕಿರಿಕ್ ಪಾರ್ಟಿ' ಕುವರಿಗೆ ವಸಂತನಗರದ ಮೇಲೆ ಕಣ್ಣು!

ಬೆಂಗಳೂರು, ಸೆಪ್ಟೆಂಬರ್ 15: ಸಿನಿಮಾ ಮಂದಿ ರಾಜಕೀಯಕ್ಕೆ ಹೋಗುವುದು ಮೊದಲಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿಯಂತೆ ಆಗುತ್ತಿದೆ. ಸಿನಿ ವಲಯದಲ್ಲಿ ಮಿಂಚಿದ ನಾಯಕ-ನಾಯಕಿಯರು ನಂತರದಲ್ಲಿ ರಾಜಕಾರಣದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯುತ್ತಾರೆ. ಅದೇ ರೀತಿ ಕಿರಿಕ್ ಪಾರ್ಟಿ ಕುವರಿ ಇದೀಗ ಕೈಯಲ್ಲಿ ಆಮ್ ಆದ್ಮಿ ಪೊರಕೆ ಹಿಡಿದು ನಿಂತಿದ್ದಾರೆ.

ಕನ್ನಡದ ಅಧ್ಯಕ್ಷ ಸಿನಿಮಾದ ಮೂಲಕ ಮುನ್ನಲೆಗೆ ಬಂದಿರುವ ನಟಿ ಆರೋಹಿತ ಆಮ್ ಆದ್ಮಿ ಪಕ್ಷವನ್ನು ಸೇರಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ ರಾಜಕೀಯ ಪ್ರವೇಶ ಪಡೆದುಕೊಂಡರು. ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನಟಿ ಆರೋಹಿತರನ್ನು ಎಎಪಿಗೆ ಸ್ವಾಗತಿಸಿದರು.

ಕರ್ನಾಟಕದ ಅನೇಕ ಗಣ್ಯ ಹಾಗೂ ಪ್ರಾಮಾಣಿಕ ವ್ಯಕ್ತಿಗಳು ಭ್ರಷ್ಟಾಚಾರ ಹಾಗೂ ಒಡೆದು ಆಳುವ ನೀತಿಯಿಂದ ಬೇಸತ್ತು ಆಮ್‌ ಆದ್ಮಿ ಪಾರ್ಟಿಗೆ ಸೇರುತ್ತಿದ್ದಾರೆ. ಈಗ ಈ ಸಾಲಿಗೆ ನಟಿ ಆರೋಹಿತ ಸೇರ್ಪಡೆಯಾಗಿದ್ದು, ಸ್ವಚ್ಛ ರಾಜಕೀಯವನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದಾರೆ ಎಂದು ಹೇಳಿದರು.

ಕರ್ನಾಟಕದಲ್ಲಿ ಆಪ್ ಕಡೆಗೆ ಹೊರಳುತ್ತಿರುವ ನಾಯಕರು

ಕರ್ನಾಟಕದಲ್ಲಿ ಆಪ್ ಕಡೆಗೆ ಹೊರಳುತ್ತಿರುವ ನಾಯಕರು

ದೆಹಲಿ ಮತ್ತು ಪಂಜಾಬ್ ರಾಜ್ಯಗಳಲ್ಲಿ ಈಗಾಗಲೇ ತನ್ನ ಸಾಮರ್ಥ್ಯವನ್ನು ಪ್ರೂವ್ ಮಾಡಿರುವ ಆಮ್ ಆದ್ಮಿ ಪಕ್ಷವನ್ನು ರಾಜ್ಯದಲ್ಲಿ ಬೆಳೆಸುವುದಕ್ಕೆ ಎಲ್ಲ ರೀತಿ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಈಗಾಗಲೇ ರಾಜ್ಯದ ಹಲವು ನಾಯಕರು ಆಪ್ ತಂಡವನ್ನು ಸೇರಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಬಿಬಿಎಂಪಿ ಚುನಾವಣೆ ಹೊಸ್ತಿಲಿನಲ್ಲಿ ನಾಯಕರು ತಮ್ಮ ರಾಜಕೀಯ ನೆಲೆ ಕಂಡುಕೊಳ್ಳುವುದಕ್ಕೆ ಅಣಿಯಾಗುತ್ತಿದ್ದಾರೆ. ನಟಿ ಆರೋಹಿತ ಕೂಡ ಅದೇ ಸಾಲಿಗೆ ಸೇರಿದ್ದಾರೆ.

ನಟಿ ಆರೋಹಿತ ಬಗ್ಗೆ ನಿಮಗೆಷ್ಟು ಗೊತ್ತು?

ನಟಿ ಆರೋಹಿತ ಬಗ್ಗೆ ನಿಮಗೆಷ್ಟು ಗೊತ್ತು?

ಬೆಂಗಳೂರಿನ ವಸಂತ ನಗರ ನಿವಾಸಿ ಆಗಿರುವ ಆರೋಹಿತ ಬಿ.ಕಾಂ ಪದವೀಧರೆ ಆಗಿದ್ದಾರೆ. ಕರಾಟೆ ಪಟುವಾದ ನಟಿ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಅಭಿನಯ ತರಂಗ ಸಂಸ್ಥೆಯಲ್ಲಿ ನಾಟಕದಲ್ಲಿ ಅಭಿನಯಿಸುವುದನ್ನು ಕಲಿತು, ನಂತರ ಕನ್ನಡ ಚಿತ್ರರಂಗವನ್ನು ಪ್ರವೇಶಿಸಿದ್ದರು. ಅಧ್ಯಕ್ಷ, ಆಟಗಾರ, ರಾಜರಾಜೇಂದ್ರ, ಜಗ್ಗಿ, ಭಾಗ್ಯ ರಾಜ್‌, ಕಿರಿಕ್‌ ಪಾರ್ಟಿ, ಗೌಡ್ರು ಹೋಟೆಲ್‌, ಕಾವೇರಿ, ಆಯುಷ್ಮಾನ್‌ ಭವ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

ರಾಜಕೀಯಕ್ಕೆ ಲಗ್ಗೆಯಿಟ್ಟ ಕಿರಿಕ್ ಪಾರ್ಟಿ ಹುಡುಗಿಯ ಗುರಿಯೇನು?

ರಾಜಕೀಯಕ್ಕೆ ಲಗ್ಗೆಯಿಟ್ಟ ಕಿರಿಕ್ ಪಾರ್ಟಿ ಹುಡುಗಿಯ ಗುರಿಯೇನು?

ಎಎಪಿ ಸೇರ್ಪಡೆ ಕುರಿತು ಮಾತನಾಡಿದ ನಟಿ ಆರೋಹಿತ, "ಕರ್ನಾಟಕ ಹಾಗೂ ದೇಶದೆಲ್ಲೆಡೆ ಯುವಜನತೆಯು ಬದಲಾವಣೆ ಬಯಸುತ್ತಿರುವುದನ್ನು ಗಮನಿಸುತ್ತಿದ್ದೇನೆ. ಹೀಗಾಗಿ ಬದಲಾವಣೆ ಸಾಧ್ಯವಾಗಬೇಕಾದರೆ ಶಾಲೆಗಳಲ್ಲಿ ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು. ದೆಹಲಿಯಲ್ಲಿ ಆಮ್‌ ಆದ್ಮಿ ಪಾರ್ಟಿಯು ಸರ್ಕಾರಿ ಶಾಲೆಗಳಲ್ಲಿ ಅದ್ಭುತ ಬದಲಾವಣೆ ತಂದಿದೆ. ಸ್ವಚ್ಛ ಹಾಗೂ ಗುಣಮಟ್ಟದ ಆಡಳಿತದಿಂದ ಮಾತ್ರ ಇದು ಸಾಧ್ಯವಾಗುತ್ತದೆ. ಕರ್ನಾಟಕದಲ್ಲೂ ಅಂತಹ ಆಡಳಿತ ಬರಬೇಕು ಎಂಬ ಉದ್ದೇಶದಿಂದ ಎಎಪಿ ಸೇರಿದ್ದೇನೆ," ಎಂದು ಹೇಳಿದರು.

ಆಪ್ ರಾಜ್ಯಾಧ್ಯಕ್ಷರು ಆರೋಹಿತ ಕುರಿತು ಏನು ಹೇಳುವರು?

ಆಪ್ ರಾಜ್ಯಾಧ್ಯಕ್ಷರು ಆರೋಹಿತ ಕುರಿತು ಏನು ಹೇಳುವರು?

ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮಾತನಾಡಿ, "ಆರೋಹಿತರಂತ ಪ್ರತಿಭಾವನ್ವಿತರು ಸಮಾಜದಲ್ಲಿ ಬದಲಾವಣೆ ತರಬೇಕೆಂಬ ಛಲದೊಂದಿಗೆ ಎಎಪಿ ಸೇರಿದ್ದನ್ನು ನಾವು ಪ್ರತಿದಿನ ನೋಡುತ್ತಿದ್ದೇವೆ. ಇಂತಹ ನಿಪುಣ ಹಾಗೂ ಪ್ರಬಲ ವ್ಯಕ್ತಿತ್ವಗಳನ್ನು ಆಮ್‌ ಆದ್ಮಿ ಪಾರ್ಟಿ ಮಾತ್ರ ಆಕರ್ಷಿಸಿ, ಕರ್ನಾಟಕದಲ್ಲಿ ಬದಲಾವಣೆ ತರಬಲ್ಲದು" ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ ಮಾತನಾಡಿ, "ತಮ್ಮ ಸ್ವಂತ ವಾರ್ಡ್ ವಸಂತ ನಗರದಿಂದ ಆರೋಹಿತ ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಲು ಬಯಸಿರುವುದು ಸಂತಸ ತಂದಿದೆ. ಅವರು ಅಲ್ಲಿ ಜಯಗಳಿಸಿ ನವ ಬೆಂಗಳೂರು ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆಂಬ ವಿಶ್ವಾಸವಿದೆ," ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+