ಬೆಂಗಳೂರಿನಲ್ಲಿ ನಟಿ ಆಶಿಕಾ ರಂಗನಾಥ್ ಸಂಬಂಧಿ ಆತ್ಮಹತ್ಯೆ
ಬೆಂಗಳೂರು, ನವೆಂಬರ್ 30: ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ವಿಚಾರಕ್ಕೆ ಮನಸ್ತಾಪಗಳು ಉಂಟಾಗಿ ಕೊನೆಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ನಡೆದಿವೆ. ಇದೀಗ ನಟಿ ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹಾಗಾದ್ರೆ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿ ಯುವತಿ ಡ್ರಗ್ ಅಡಿಕ್ಟ್ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ. ಹಾಸನ ಮೂಲದ ಯುವತಿ ಅಚಲ (22) ನವೆಂಬರ್ 22ರಂದು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ, 10 ದಿನ ಕಳೆದರೂ, ಸಾಕ್ಷ್ಯಗಳಿ ಇದ್ದರೂ ಸಹ ಆರೋಪಿಯನ್ನು ಬಂಧಿಸದೇ ಇರುವುದು ಯುವತಿ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಇಂಜಿನಿಯರಿಂಗ್ ಮುಗಿಸಿ ಕೆಲಸಕ್ಕೆ ಸೇರುವ ಹೊತ್ತಲೇ ಯುವತಿ ಅಚಲ ತನ್ನ ದೂರದ ಸಂಬಂಧಿ ಮಯಾಂಕ್ ಜೊತೆ ಸ್ನೇಹ ಹೊಂದಿದ್ದರು. ಇದೇ ವೇಳೆ ಪ್ರೀತಿಸುವುದಾಗಿ ನಂಬಿಸಿ ಮಯಾಂಕ್ ಮದುವೆಗೆ ಮೊದಲೇ ದೈಹಿಕ ಸಂಬಂಧಕ್ಕೆ ಒತ್ತಾಯಿಸಿದ್ದ. ಡ್ರಗ್ ಅಡಿಕ್ಟ್ ಆಗಿದ್ದ ಮಯಾಂಕ್ ಪದೇ ಪದೇ ಸಂಪರ್ಕಕ್ಕೆ ಪೀಡಿಸುತ್ತಿದ್ದ. ಇದಕ್ಕೆ ಅಚಲ ಒಪ್ಪದ ಕಾರಣ ದೈಹಿಕ ಹಲ್ಲೆ ನಡೆಸಿ ಮಾನಸಿಕವಾಗಿಯೂ ಕಿರುಕುಳ ನೀಡುತ್ತಿದ್ದ. ಪದೇ ಪದೇ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿ ಕಣ್ಣೀರಿಟ್ಟಿದ್ದಾರೆ.
ನಟಿ ಆಶಿಕಾ ರಂಗನಾಥ್ ಮಾವನ ಮಗಳೂ ಆಗಿರುವ ಅಚಲ ಇಂಜಿನಿಯರಿಂಗ್ ಮುಗಿಸಿ ಕೆಲಸಕ್ಕೆ ತಯಾರಿ ನಡೆಸಿದ್ದಳು. ಈ ವೇಳೆಯೇ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಮಯಾಂಕ್ ಹಾಗೂ ಆತನ ತಾಯಿ ಮೈನಾ ವಿರುದ್ಧ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗಳ ಸಾವಿಗೆ ಕಾರಣ ಆದವರನ್ನು ಬಂಧಿಸಿ ಎಂದು ಯುವತಿ ಪೋಷಕರು ಆಗ್ರಹಿಸಿದ್ದಾರೆ.
ಬೆಂಗಳೂರಿನಂತಹ ನಗರ ಪ್ರದೇಶಗಳಲ್ಲಿ ಇಂತಹ ಘಟನೆಗಳು ಈಗಾಗಲೇ ಸುಮಾರು ನಡೆದಿವೆ. ಗಂಡ-ಹೆಂಡತಿ ಜಗಳ ಹಾಗೂ ಪ್ರೀತೀಯ ವಿಚಾರಕ್ಕೆ ಜಗಳವಾಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾದ ಉದಾಹರಣೆಗಳಿವೆ.
-
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Horoscope March 2: ಈ ರಾಶಿಯವರಿಗೆ ಸಕಾರಾತ್ಮಕ ಪ್ರಗತಿ, ಮೇಷ-ಮೀನ ರಾಶಿಯವರೆಗೆ ಇಂದಿನ ದಿನ ಭವಿಷ್ಯ -
ಮಧ್ಯಪ್ರಾಚ್ಯದಲ್ಲಿ ವಿಮಾನಗಳ ಸಂಚಾರ ವ್ಯತ್ಯಯ: ಕರ್ನಾಟಕದ ನಾಗರಿಕರಿಗೆ ಸರ್ಕಾರ ನೆರವು -
Gold Rate : ಆಭರಣ ಪ್ರಿಯರಿಗೆ ಬಿಗ್ ಶಾಕ್; ಭಾರಿ ಏರಿಕೆ ಕಂಡ ಚಿನ್ನ- ಬೆಳ್ಳಿ ದರ, ಇಲ್ಲಿದೆ ಇಂದಿನ ಬೆಲೆ ಪಟ್ಟಿ -
Iran Vs America, Israel ಯುದ್ಧ ತೀವ್ರ: ಗಲ್ಫ್ ರಾಷ್ಟ್ರಗಳಿಗೂ ವ್ಯಾಪಿಸಿದ ಸಂಕಷ್ಟ; ಈ ಕ್ಷಣದ 10 ಪ್ರಮುಖ ಬೆಳವಣಿಗೆಗಳು -
ಯುದ್ಧದ ನಡುವೆಯೂ ಸರ್ವಧರ್ಮ ಸಮನ್ವಯತೆ ಸಂದೇಶ: ನಮ್ ಭಾರತ ಅಂದ್ರೆ ಹೀಗೆ ಅಂತಾ ವಿಶ್ವಕ್ಕೆ ಸಾರಿದ ಸಂಜು ಸ್ಯಾಮ್ಸನ್ -
Gold Price: ಇಂದು ಚಿನ್ನದ ಬೆಲೆಯಲ್ಲಿ ದಾಖಲೆಯ ಕುಸಿತ, ಯುದ್ಧದ ಎಫೆಕ್ಟ್ನಿಂದ ಬಂಗಾರ-ಬೆಳ್ಳಿ ಮತ್ತಷ್ಟು ದುಬಾರಿ! ಮುನ್ಸೂಚನೆ -
ಕರ್ನಾಟಕದ ಅಲಿಪುರದಲ್ಲಿ ಇರಾನ್ ನಾಯಕ ಖಮೇನಿ ಅಂದು ಆಡಿದ್ದ ಮಾತುಗಳೇನು ? -
Donald Trump: ಅಮೆರಿಕ, ಇಸ್ರೇಲ್ Vs ಇರಾನ್ ಯುದ್ಧದ ಬಗ್ಗೆ ಬಿಗ್ ಅಪ್ಡೇಟ್ಸ್ ಕೊಟ್ಟ ಡೊನಾಲ್ಡ್ ಟ್ರಂಪ್, ಏನದು -
ಮೂತ್ರ ವಿಸರ್ಜನೆ ವಿಡಿಯೋಗೆ ಕಿಚ್ಚ ಸುದೀಪ್ ಹಾಡು: ಬಿಗ್ಬಾಸ್ ಡಾಗ್ ಸತೀಶ್ ವಿರುದ್ಧ ರಜತ್ ದೂರು












Click it and Unblock the Notifications