ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಲಕ್ಷ ನೀಡಿದ ದೀಪಿಕಾ ದಾಸ್
ಬೆಂಗಳೂರು, ಮಾರ್ಚ್ 31: ಕನ್ನಡ ಚಿತ್ರರಂಗದ ನಟಿ, 'ಬಿಗ್ ಬಾಸ್ ಕನ್ನಡ 7' ರಿಯಾಲಿಟಿ ಶೋ ಸ್ಪರ್ಧಿ ದೀಪಿಕಾ ದಾಸ್ ಕೊರೊನಾ ನಿಯಂತ್ರಣಕ್ಕೆ ಸಹಾಯ ಹಸ್ತ ಚಾಚಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.
5 ಲಕ್ಷ ರೂಪಾಯಿಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೀಪಿಕಾ ನೀಡಿದ್ದಾರೆ. ಈ ವಿಷಯವನ್ನು ಅವರೇ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ಸಹ ನಾಗರಿಕರಿಗೆ ಸಹಾಯ ಮಾಡುವ ಸಮಯ ಈಗ ಬಂದಿದೆ ಎಂದಿದ್ದಾರೆ.
ಕೊರೊನಾ ತಡೆಗೆ 5 ಲಕ್ಷ ಹಣವನ್ನು ದಾನ ಮಾಡಿದ ವೃದ್ದೆ
''ಮಾನವೀಯತೆಗಾಗಿ, ನಮ್ಮ ದೇಶ ಮತ್ತು ನಮ್ಮ ಸಹ ನಾಗರಿಕರಿಗಾಗಿ ಸಹಾಯ ಮಾಡುವ ಸಮಯ ಈಗ ಬಂದಿದೆ. ಹೀಗಾಗಿ ಅವರಿಗೆ ಸಹಾಯ ಮಾಡೋಣ. ನಾನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೋವಿಡ್-19 ತಡೆಗೆ 5 ಲಕ್ಷ ಕೊಡುತ್ತಿದ್ದೇನೆ'' ಎಂದು ತಿಳಿಸಿದ್ದಾರೆ.
''ಸಾಗರದ ಪ್ರತಿ ಹನಿಗೂ ಮೌಲ್ಯವಿದೆ. ಆದ್ದರಿಂದ ಕೊವೀಡ್-19 ಪರಿಸ್ಥಿತಿಯ ವಿರುದ್ಧ ಹೋರಾಡಲು ಸಹಾಯ ಮಾಡಬೇಕೆಂದು ನಾನು ನಿಮ್ಮೆಲ್ಲರನ್ನೂ ಕೇಳಿಕೊಳ್ಳುತ್ತೇನೆ. ಇದು ಯಾವ ದೊಡ್ಡಸ್ತಿಕೆ ತೋರುವುದಕ್ಕಲ್ಲ. ನೀವು ಕೂಡ ಈ ಕೆಲಸದಲ್ಲಿ ಭಾಗಿ ಆಗಲಿ ಎಂದು ಹೇಳಿದೆ. ಎಲ್ಲರೂ ಸಹಾಯ ಮಾಡೋಣ'' ಎಂದು ಬರೆದುಕೊಂಡಿದ್ದಾರೆ.
ಪ್ರಧಾನಮಂತ್ರಿ ಪರಿಹಾರ ನಿಧಿಗೆ 500 ಕೋಟಿ ನೀಡಿದ ರಿಲೆಯನ್ಸ್ ಇಂಡಸ್ಟ್ರೀಸ್
ಇಂದು (ಮಾರ್ಚ್ 31) ನಟ ಪುನೀತ್ ರಾಜ್ ಕುಮಾರ್ ಸಹ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ನೀಡಿದ್ದಾರೆ. 50 ಲಕ್ಷ ರೂಪಾಯಿಗಳನ್ನು ಪುನೀತ್ ಕೊಟ್ಟಿದ್ದಾರೆ. ಕನ್ನಡ ಚಿತ್ರರಂಗದ ಕೆಲವು ಕಲಾವಿದರು ಕೊರೊನಾ ತಡೆಗೆ ಹಣ ಸಹಾಯ ಮಾಡುತ್ತಿದ್ದಾರೆ.