ಕೊರೊನಾ ಕಾಲದಲ್ಲಿ ಕರಕುಶಲಕರ್ಮಿಗಳಿಗೆ ಪ್ರೋತ್ಸಾಹ ಅಗತ್ಯ: ನಟಿ ಗ್ರೀಷ್ಮಾ
ಬೆಂಗಳೂರು ಏಪ್ರಿಲ್ 2: ಕರೋನಾ ಸಂಕಷ್ಟ ಕಾಲದಲ್ಲಿ ಕರಕುಶಲಕರ್ಮಿಗಳಿಗೆ ಪ್ರೋತ್ಸಾಹ ನೀಡುವುದು ಅಗತ್ಯವಿದೆ ಎಂದು ನಟಿ ಗ್ರೀಷ್ಮಾ ಅಭಿಪ್ರಾಯಪಟ್ಟರು.
ಇಂದು ನಗರದ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಗ್ರಾಂಡ್ ಫ್ಲಿಯಾ ಮಾರ್ಕೆಟ್ ಯುಗಾದಿ ಹಬ್ಬಕ್ಕೆ ಮತ್ತಷ್ಟು ಮೆರಗು ನೀಡುವ ಉದ್ದೇಶದಿಂದ ಆಯೋಜಿಸಿರುವ ಬೆಂಗಳೂರು ಉತ್ಸವ ಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೊರೊನಾ ಸಂಕಷ್ಟ ಕಾಲದಲ್ಲಿ ದೇಶದಾದ್ಯಂತ ಕರಕುಶಲ ಕರ್ಮಿಗಳು ಬಹಳ ಸಂಕಷ್ಟ ಅನುಭವಿಸಿದ್ದಾರೆ. ಅವರಿಗೆ ಸಿಗಬೇಕಾದಂತಹ ವೇದಿಕೆ ಸಿಗದೆ ಬಹಳ ತೊಂದರೆ ಅಗಿದೆ. ಜೀವನಾವಶ್ಯಕ ವಸ್ತುಗಳನ್ನು ಖರೀದಿಸಲು ತೊಂದರೆ ಅನುಭವಿಸಿದ್ದನ್ನು ನೋಡಿದ್ದೇವೆ. ಇಂತಹ ಕರಕುಶಲ ಕರ್ಮಿಗಳಿಗೆ ವೇದಿಕೆ ಒದಗಿಸುವ ಉದ್ದೇಶದಿಂದ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಿರುವ ಬೆಂಗಳೂರು ಉತ್ಸವದಂತಹ ಕಾರ್ಯಕ್ರಮಗಳು ಬಹಳ ಒಳ್ಳೆಯ ವೇದಿಕೆಯನ್ನು ಒದಗಿಸುತ್ತವೆ. ಇಂತಹ ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದರು.

ಮೇಳದ ಆಯೋಜಕರಾದ ಅಫ್ತಾಬ್ ಮಾತನಾಡಿ, ಯುಗಾದಿ ಹಬ್ಬಕ್ಕೆ ಮತ್ತಷ್ಟು ಮೆರಗು ನೀಡುವ ಉದ್ದೇಶದಿಂದ ಗ್ರಾಂಡ್ ಫ್ಲಿಯಾ ಮಾರ್ಕೇಟ್ ಏಪ್ರಿಲ್ 2 ರಿಂದ 11 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ "ಬೆಂಗಳೂರು ಉತ್ಸವ" ಯುಗಾದಿ ಶಾಪಿಂಗ್ ಕಾರ್ನಿವಲ್ ನ್ನು ಆಯೋಜಿಸಿದ್ದೇವೆ.

ಈ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ದೇಶದ ಎಲ್ಲಾ ಭಾಗಗಳಿಂದಲೂ ಆಗಮಿಸಲಿರುವ ಕರಕುಶಲ ಕರ್ಮಿಗಳು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲಿದ್ದಾರೆ. ಕಾಶ್ಮೀರಿ ಸೀರೆಗಳು ಮತ್ತು ಶಾಲುಗಳು, ಮಣಿಪುರಿ, ಆಂಧ್ರಪ್ರದೇಶ, ತಮಿಳುನಾಡಿನ ಪ್ರಸಿದ್ದ ರೇಷ್ಮೇ ಸೀರೆಗಳು ಹಾಗೂ ಈಶಾನ್ಯ ರಾಜ್ಯಗಳ ಕಲಾಕಾರರು ತಯಾರಿಸಿರುವ ಉತ್ಪನ್ನಗಳು ಎಲ್ಲರ ಗಮನ ಸೆಳೆಯಲಿವೆ.

ಕರಕುಶಲ ಕರ್ಮಿಗಳ ಜೊತೆಯಲ್ಲಿಯೇ ರಾಜ್ಯದ ವಿವಿಧ ಭಾಗಗಳ ಜಾನಪದ ಕಲಾಕಾರರಿಗೂ ವೇದಿಕೆ ಒದಗಿಸುವ ಉದ್ದೇಶದಿಂದ ಲೈವ್ ಡಾನ್ಸ್ ಪರ್ಫಾನ್ಮೆನ್ಸ್ ಕೂಡಾ ಆಯೋಜಿಸಲಾಗಿದೆ. ಏಪ್ರಿಲ್ 3 ರಂದು ಡೊಳ್ಳುಕುಣಿತ, ಏಪ್ರಿಲ್ 4 ರಂದು ಹುಲಿವೇಶ ಕುಣಿತ, 10 ನೇ ಏಪ್ರಿಲ್ ನಂದು ಕಂಗಿಲು ಕುಣಿತಾ ಹಾಗೂ ಏಪ್ರಿಲ್ 11 ರಂದು ಯಕ್ಷಗಾನ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು











Click it and Unblock the Notifications