ವಿನೋದ್ ರಾಜ್ಗೆ ಮತ್ತೊಂದು ಆಘಾತ: ನಟಿ ಲೀಲಾವತಿ ಆಪ್ತೆ ಬಂಗಾರಮ್ಮ ನಿಧನ
ಬೆಂಗಳೂರು, ಡಿಸೆಂಬರ್ 14: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ಕಳೆದ ವಾರ ನಿಧನರಾದರು. ಈ ಆಘಾತ ಮಾಸುವ ಮುನ್ನವೇ ವಿನೋದ್ ರಾಜ್ ಹಾಗೂ ಲೀಲಾವತಿ ಅವರ ಆಪ್ತ ವಲಯದಲ್ಲಿ ಮತ್ತೊಂದು ಕಹಿ ಘಟನೆ ನಡೆದಿದೆ. ನಟಿ ಲೀಲಾವತಿ ಅವರ ಆರೈಕೆ ಮಾಡುತ್ತಿದ್ದ ಸದಾ ಅವರ ಜೊತೆಗೆ ಇರುತ್ತಿದ್ದ ಬಂಗಾರಮ್ಮ ನಿಧನರಾಗಿದ್ದಾರೆ.
65 ವರ್ಷ ವಯಸ್ಸಿನವರಾದ ಬಂಗಾರಮ್ಮ ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಕಳೆದ ಕೆಲ ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಂಗಾರಮ್ಮ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಬಂಗಾರಮ್ಮ ಅವರು ಹಿರಿಯ ನಟಿ ಲೀಲಾವತಿ ಹಾಗೂ ವಿನೋದ್ ರಾಜ್ ಅವರಿಗೆ ತುಂಬಾ ಆಪ್ತರಾಗಿದ್ದರು. ಬಂಗಾರಮ್ಮನವರು ಚಿಕ್ಕವಯಸ್ಸಿನಿಂದಲೂ ಲೀಲಾವತಿ ಅವರ ಜೊತೆಗೆ ಇರುತ್ತಿದ್ದರು, ಲೀಲಾವತಿ ಚೆನ್ನೈನಲ್ಲಿ ವಾಸವಾಗಿದ್ದಾಗಲೂ ಅವರೊಂದಿಗೆ ಬಂಗಾರಮ್ಮ ಇದ್ದರು, ಅಲ್ಲದೇ ವಿನೋದ್ ರಾಜ್ ಅವರನ್ನು ಸಹ ಬಂಗಾರಮ್ಮ ನೋಡಿಕೊಳ್ಳುತ್ತಿದ್ದರು. ಹೀಗಾಗಿ ವಿನೋದ್ ರಾಜ್ ಬಂಗಾರಮ್ಮ ಅವರನ್ನು ತಾಯಿಯಂತೆ ನೋಡಿಕೊಳ್ಳುತ್ತಿದ್ದರು. ಸದಾ ಲೀಲಾವತಿ ಅವರ ಜೊತೆಗೆ ಇರುತ್ತಿದ್ದ ಬಂಗಾರಮ್ಮ ಇತ್ತೀಚಿಗೆ ಹಾಸಿಗೆ ಹಿಡಿದಿದ್ದರು.
ಕಳೆದ ಶುಕ್ರವಾರ ಡಿಸೆಂಬರ್ 8ರಂದು ವಯೋಸಹಜವಾಗಿ ನಟಿ ಲೀಲಾವತಿ ವಿಧಿವಶರಾದರು. ಲೀಲಾವತಿ ಅವರ ಸಾವಿನ ಸುದ್ದಿ ಕೇಳಿ ಬಂಗಾರಮ್ಮ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ಲೀಲಾವತಿ ಅವರ ಸಾವಿನ ಬೆನ್ನಲ್ಲೇ ಬಂಗಾರಮ್ಮ ಕೂಡ ವಿಧಿವಶರಾಗಿದ್ದಾರೆ.
ಇನ್ನು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಬಂಗಾರಮ್ಮ ಅವರನ್ನು ವಿನೋದ್ ರಾಜ್ ಅವರೇ ನೋಡಿಕೊಳ್ಳುತ್ತಿದ್ದರು. ಅವರಿಗಾಗಿಯೇ ಓರ್ವ ನರ್ಸ್ ನೇಮಿಸಿ ವಿನೋದ್ ರಾಜ್ ಆರೈಕೆ ಮಾಡುತ್ತಿದ್ದರು ಎನ್ನಲಾಗಿದೆ. ತಾಯಿ ಸಾವಿನ ನೋವು ಮಾಸುವ ಮುನ್ನವೇ ವಿನೋದ್ ರಾಜ್ ಅವರಿಗೆ ಮತ್ತೊಂದು ನೋವು ಎದುರಾಗಿದೆ.
-
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Ramya: 'ಧುರಂಧರ್-2' ನೋಡಿ ಹಣ, ಸಮಯ ವ್ಯರ್ಥ ಮಾಡಬೇಡಿ: ನಟಿ ರಮ್ಯಾ ಪೋಸ್ಟ್ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ












Click it and Unblock the Notifications