Actress Tamanna Bhatia: ಸಿಂಧಿ ಶಾಲೆಯಲ್ಲಿ ಮಕ್ಕಳಿಗೆ ತಮನ್ನಾ ಭಾಟಿಯ ಬಗ್ಗೆ ಬೋಧನೆ- ಪೋಷಕರ ಆಕ್ಷೇಪ
ಬೆಂಗಳೂರು, ಜೂನ್ 27: ನಟನೆ, ತಮ್ಮ ಸೌಂದರ್ಯದ ಮೂಲಕವೇ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ಇತ್ತೀಚೆಗೆ ವೆಬ್ಸಿರೀಸ್ ನಲ್ಲಿ ಬೋಲ್ಡ್ ದೃಶ್ಯಗಳಿಂದ ಮೂಲಕ ಸುದ್ದಿಯಾಗಿದ್ದ ನಟಿ ತಮನ್ನಾ ಭಾಟಿಯಾ (Tamannaah Bhatia) ಕುರಿತ ಅಧ್ಯಾಯ ಶಾಲಾ ಪಠ್ಯಪುಸ್ತಕದಲ್ಲಿ ಸೇರಿಸಿರುವುದು ವಿವಾದಕ್ಕೆ ಕಾರಣವಾಗಿದೆ.
ಕರ್ನಾಟಕದ ಬೆಂಗಳೂರಿನ ಹೆಬ್ಬಾಳದಲ್ಲಿರುವ 'ಸಿಂಧಿ ಹೈಸ್ಕೂಲ್' (Tamannaah Bhatia) ನಲ್ಲಿನ ಪಠ್ಯದಲ್ಲಿ ನಟಿ ತಮನ್ನಾ ಭಾಟಿಯಾ ಕುರಿತ ಅಧ್ಯಾಯ ಸೇರಿಸಲಾಗಿದೆ. ಇದಕ್ಕೆ ಇಲ್ಲಿ ಓದುತ್ತಿರುವ ಏಳನೇ ತರಗತಿ ಮಕ್ಕಳ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಈ ಕುರಿತು ಅವರೆಲ್ಲ ದೂರು ದಾಖಲಿಸಿದ್ದಾರೆ.

ಇನ್ನೂ ಅನುಪಯುಕ್ತ ಅಧ್ಯಾಯ ಸೇರ್ಪಡೆ ಕುರಿತು ಪೋಷಕರು ಶಾಲೆಯ ಆಡಳಿತದ ಗಮನಕ್ಕೆ ತಂದರು. ಆದರೆ ಶಾಲಾ ಆಡಳಿತ ಮಂಡಳಿ ಏನು ತಿಳಿಸದೇ 'ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್' ಸಂಪರ್ಕಿಸುವಂತೆ ಒತ್ತಾಯಿಸಿದೆ ಎಂದು ತಿಳಿದು ಬಂದಿದೆ.
ಯಶಸ್ವಿ ಸದಸ್ಯರ ಬಗ್ಗೆ ಬೋಧನೆ ಸೂಕ್ತ
ಸಿಂಧಿ ಸಮುದಾಯದ ನಟ ರಣವೀರ್ ಸಿಂಗ್ (Actor Ranveer Singh) ಅವರಂತಹ ಸಮುದಾಯದ ಪ್ರಮುಖ ಮತ್ತು ಯಶಸ್ವಿ ಸದಸ್ಯರನ್ನು ಅಧ್ಯಾಯದಲ್ಲಿ ಸೇರಿಸಿದರೆ ಯಾವುದೇ ವಿರೋಧ ಇಲ್ಲ. ಆದರೆ ತಮನ್ನಾಗೆ ಸಂಬಂಧಿಸಿದ ವಿಷಯ ಸೇರ್ಪಡೆ ಸರಿಯಲ್ಲ ಎಂದು ಪೋಷಕರು ಹೇಳಿದರು.

ಹೆಬ್ಬಾಳದ ಸಿಂಧಿ ಶಾಲೆಯು ಈ ಸಮುದಾಯದ 7ನೇ ತರಗತಿಯ ಪಠ್ಯಪುಸ್ತಕ ಒಳಗೊಂಡಿದೆ. ಅದರಲ್ಲಿ ಒಂದು ಅಧ್ಯಾಯವು ದೇಶದ ವಿಭಜನೆಯ ನಂತರದ ಜೀವನ, ಸಿಂಧ್ನಲ್ಲಿ ವಲಸೆ, ಸಮುದಾಯ ಮತ್ತು ಕಲಹ, 1947 ರಿಂದ 1962 ಕುರಿತಾದ ಅಂಶಗಳು ಇವೆ. ಭಾಷಾ ಅಲ್ಪಸಂಖ್ಯಾತರಾದ ಸಿಂಧಿ ಸಮುದಾಯ ಮತ್ತು ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲು ಅವಕಾಶ ಮಾಡಿಕೊಡಲಾಗಿದೆ.
ವಿದ್ಯಾರ್ಥಿಗಳ ಪೋಷಕರ ವಿರೋಧ ಏಕೆ?
ಸ್ವಾತಂತ್ರ್ಯಾ ನಂತರದ ಭಾರತೀಯರ ಜನಜೀವನ ಆಧ್ಯಾಯದಲ್ಲಿ ತಮನ್ನಾ ಭಾಟಿಯಾ ಬಗ್ಗೆ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲಾಗಿದೆ. ಇದು ವಿವಾದಕ್ಕೆ ಕಾರಣವಾಗಿದೆ. ಅವರು ಹಸಿ ಬಿಸಿ, ಬೋಲ್ಡ್ ದೃಶ್ಯಗಳಲ್ಲಿ ನಟಿಸುತ್ತಾರೆ. ಅವರು ಕಮರ್ಷಿಯಲ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇವರು ಮಕ್ಕಳಿಗೆ ಆದರ್ಶವಾಗಬೇಕೇ?. ಇದು ಸರಿಯಲ್ಲ ಎಂದು ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಕ್ಕಳಿಗೆ ಮತ್ತೊಂದು ಸಂಸ್ಕೃತಿಯ ಬಗ್ಗೆ ಪರಿಚಯಿಸುವ ಬಗ್ಗೆ ನಮಗೆ ಯಾವುದೇ ವಿರೋಧವಿಲ್ಲ. ಆದರೆ ಪೋಷಕರು ನಮ್ಮ ಆಕ್ಷೇಪಣೆಯು 7ನೇ ತರಗತಿ ವಿದ್ಯಾರ್ಥಿಗಳಿಗೆ ಸೂಕ್ತವಲ್ಲದ ನಟಿಯ ಅಧ್ಯಾಯ ಒಳಗೊಂಡಿದೆ. ಇದನ್ನು ವಿರೋಧಿಸಿದರೆ, ತಮ್ಮ ವಾರ್ಡ್ಗಳಿಗೆ ವರ್ಗಾವಣೆ ಪ್ರಮಾಣಪತ್ರ ನೀಡುವುದಾಗಿ ಶಾಲಾ ಆಡಳಿತ ಮಂಡಳಿ ಬೆದರಿಕೆ ನೀಡುತ್ತಿದೆ ಎಂದು ಪೋಷಕರು ಆರೋಪಿಸಿದರು.
ಸಿಂಧಿ ಇತರ ನಾಯಕರ ಬಗ್ಗೆ ಆಕ್ಷೇಪವಿಲ್ಲ
ಸಿಂಧಿ ಸಮುದಾಯದ ಹಿರಿಯ ಕಲಾವಿದರ ಕುರಿತ ಅಧ್ಯಾಯಗಳ ಬೋಧನೆ ಬಗ್ಗೆ ನನಗೆ ಯಾವುದೇ ಸಮಸ್ಯೆಗಳೂ ಇಲ್ಲ. ಆದರೆ ಈ ನಟಿಯ (ತಮನ್ನಾ ಭಾಟಿಯಾ) ಬಗ್ಗೆ ಕುರಿತು ನೀವು ಸಾಮಾಜಿಕ ಜಾಲತಾಣದಲ್ಲಿ ಹುಡುಕಿದರೆ ಅರೆಬರೆ ಬಟ್ಟೆಯ, ಅಸೂಕ್ತವಾದ ವಿಷಯ ಕಾಣಿಸುತ್ತದೆ. ಹೀಗಾಗಿ ಇವರ ಬಗ್ಗೆ ಮಕ್ಕಳಿಗೆ ಹೇಳಿಕೊಡುವುದು ಸೂಕ್ತ ಅಲ್ಲ ಎಂದು ಪೋಷಕರು ಆಡಳಿತ ಮಂಡಳಿಗೆ, ಸಂಬಂಧಿಸಿದ ಇಲಾಖೆಗೆ ಮನವಿ ಮಾಡಿದ್ದಾರೆ.
ಅನುಮೋದನೆ ಪಡೆಯುವುದು ಮುಖ್ಯ
ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಅವರು, ಯಾವುದೇ ಸಂದರ್ಭದಲ್ಲಿ ಒಂದು ವಿಷಯವನ್ನು ಸೇರಿಸಲು ಆ ಶಾಲೆಯು ಸಂಬಂಧಿತ ಮಂಡಳಿಯಿಂದ ಅನುಮೋದನೆ ಪಡೆಯಬೇಕಿರುತ್ತದೆ ಎಂದು ಅವರು ತಿಳಿಸಿದರು. ಸದ್ಯ ಈ ವಿವಾದದ ಬಗ್ಗೆ ಶಾಲಾ ಆಡಳಿತ ಮಂಡಳಿಯು ಬಹಿರಂಗವಾಗಿ ಉತ್ತರಿಸಿ ಗೊಂದಲ ಬಗೆಹರಿಸುವ ಕೆಲಸ ಮಾಡಬೇಕಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications