ಮಂಗಳೂರು ಬಳಿಕ, ಬೆಂಗಳೂರಿನ ವಿಮಾನ ನಿಲ್ದಾಣದ ಮೇಲೆ ಅದಾನಿ ಕಣ್ಣು!
ಬೆಂಗಳೂರು, ನ. 14: ಮಂಗಳೂರು, ಅಹಮದಾಬಾದ್, ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗ ನಂತರ ಈಗ ಅದಾನಿ ಗ್ರೂಪ್ ಕಣ್ಣು ಬೆಂಗಳೂರು ವಿಮಾನ ನಿಲ್ದಾಣದ ಮೇಲೂ ಬಿದ್ದಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉಸ್ತುವಾರಿ, ಕಾರ್ಯ ನಿರ್ವಹಣೆ ಮಾಡುವ ಬೆಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್ನಲ್ಲಿ (ಬಿಐಎಎಲ್) ಪಾಲನ್ನು ತೆಗೆದುಕೊಳ್ಳುವ ಬಗ್ಗೆ ಅದಾನಿ ಗ್ರೂಪ್ ಚಿಂತಿಸುತ್ತಿದೆ ಎಂದು ಈ ಬಗ್ಗೆ ತಿಳಿದಿರುವ ಉನ್ನತ ಮೂಲಗಳು ಮಾಹಿತಿ ನೀಡಿವೆ.
''ಅದಾನಿ ಗ್ರೂಪ್ ಕೆಲವು ಸಮಯದಿಂದ ವಿಮಾನ ನಿಲ್ದಾಣದಲ್ಲಿ ಪಾಲನ್ನು ಖರೀದಿಸಲು ಹಲವು ವಿಧಾನಗಳನ್ನು ಮೌಲ್ಯಮಾಪನ ಮಾಡುತ್ತಿದೆ. ಫೇರ್ಫ್ಯಾಕ್ಸ್ನೊಂದಿಗೆ ಚರ್ಚೆಗಳು ನಡೆದಿವೆ. ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ (ಎಎಐ) ಬಿಡ್ಡಿಂಗ್ನಲ್ಲಿ ಭಾಗವಹಿಸಲು ಸಂಸ್ಥೆ ಉತ್ಸಾಹ ಹೊಂದಿದೆ" ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿಐಎಎಲ್ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರದೊಂದಿಗೆ 30 ವರ್ಷಗಳ ರಿಯಾಯಿತಿ ಒಪ್ಪಂದದ ಅಡಿಯಲ್ಲಿ ಹೊಂದಿದ್ದು, ನಿಲ್ದಾಣವನ್ನು ನಿರ್ವಹಿಸುತ್ತಿದೆ. ಈ ಒಪ್ಪಂದವನ್ನು ಇನ್ನೂ 30 ವರ್ಷಗಳವರೆಗೆ ನವೀಕರಿಸುವ ಆಯ್ಕೆಯನ್ನು ಹೊಂದಿದೆ.

ಪಾಲುದಾರಿಕೆಯಲ್ಲಿ ವಿಮಾನ ನಿಲ್ದಾಣ
1999ರಲ್ಲಿ, ವಿಮಾನ ನಿಲ್ದಾಣ ಯೋಜನೆಯನ್ನು 40:17:17 ಪಾಲುದಾರಿಕೆಯಲ್ಲಿ ಯೂನಿಕ್ ಜ್ಯೂರಿಚ್ ಮತ್ತು ಎಲ್ ಅಂಡ್ ಟಿ ಒಳಗೊಂಡಿರುವ ಸೀಮೆನ್ಸ್ ಪ್ರಾಜೆಕ್ಟ್ ನೇತೃತ್ವದ ಒಕ್ಕೂಟಕ್ಕೆ ನೀಡಲಾಗಿತ್ತು. ಎಎಐ ಮತ್ತು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮವು ವಿಮಾನ ನಿಲ್ದಾಣದಲ್ಲಿ ತಲಾ 13% ಪಾಲು ಹೊಂದಿತ್ತು.
ಬಿಐಎಎಲ್ನಲ್ಲಿ ಫೇರ್ಫ್ಯಾಕ್ಸ್ 54% ಪಾಲನ್ನು ಹೊಂದಿದೆ. ಬಿಐಎಎಲ್ನಲ್ಲಿನ ಇತರ ಷೇರುದಾರರಲ್ಲಿ ಸೀಮೆನ್ಸ್ ಪ್ರಾಜೆಕ್ಟ್ ವೆಂಚರ್ಸ್ 20%, AAI (13%), ಮತ್ತು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾರ್ಪೊರೇಷನ್ 13% ಪಾಲು ಹೊಂದಿದೆ.

ಮುಂದಿನ ವರ್ಷದೊಳಗೆ ಷೇರು ಮಾರಾಟ
''ಎಎಐ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಂದಿರುವ 13% ಪಾಲನ್ನು ತನ್ನ ಬಿಡ್ ಡಾಕ್ಯುಮೆಂಟ್ನೊಂದಿಗೆ ಬಹುತೇಕ ಸಿದ್ಧವಾಗಿದೆ. ಮುಂದಿನ ವರ್ಷದೊಳಗೆ ಷೇರು ಮಾರಾಟದ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳ್ಳಬೇಕು ಎಂಬುದು ನಿರೀಕ್ಷೆ. ಎಲ್ಲಾ ವಿಷಯಗಳು ಸರಿಯಾದರೆ, ಪ್ರಾಧಿಕಾರವು ಮುಂದಿನ ಎರಡು ತಿಂಗಳಲ್ಲಿ ಬಿಡ್ಗಳನ್ನು ಆಹ್ವಾನಿಸಬಹುದು'' ಎಂದು ಅಧಿಕಾರಿ ತಿಳಿಸಿದ್ದಾರೆ.
ದೆಹಲಿ ಮತ್ತು ಮುಂಬೈಯಂತಹ ಮಾನ ನಿಲ್ದಾಣಗಳಿಂದ ಬರುವ ಆದಾಯವು ''ಎಎಐಗೆ ನಿರ್ಣಾಯಕ ಆದಾಯದ ಮಾರ್ಗವಾಗಿದೆ. ಬೆಂಗಳೂರು ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳ ಆದಾಯ ಅತ್ಯಲ್ಪವಾಗಿದೆ. ಆದ್ದರಿಂದ ಈ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣಗಳಲ್ಲಿನ ತನ್ನ ಪಾಲನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದೆ" ಎಂದು ತಿಳಿಸಿದ್ದಾರೆ.
ಎಎಐಗೆ ಬರುವ ಒಟ್ಟು ಆದಾಯದಲ್ಲಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪಾಲು 45.99% ಮತ್ತು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪಾಲು 38.7% ಆಗಿದೆ. ಬೆಂಗಳೂರು ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಿಂದ ಬರುವ ಒಟ್ಟು ಆದಾಯದ 4% ಆಗಿದೆ.

ಅದಾನಿ ಕೈಯಲ್ಲಿ 8 ವಿಮಾನ ನಿಲ್ದಾಣಗಳು
ಅದಾನಿ ಗ್ರೂಪ್ ಈಗಾಗಲೇ ಭಾರತದಾದ್ಯಂತ ಎಂಟು ವಿಮಾನ ನಿಲ್ದಾಣಗಳನ್ನು ನಡೆಸುತ್ತಿದೆ. ದೇಶದ ಸುಮಾರು 20% ವಿಮಾನ ಪ್ರಯಾಣಿಕರನ್ನು ನಿರ್ವಹಿಸುತ್ತಿದೆ. ಅದಾನಿ ಗ್ರೂಪ್ ನಿಯಂತ್ರಿತ ನವಿ ಮುಂಬೈ ವಿಮಾನ ನಿಲ್ದಾಣವು 2024ರ ವೇಳೆಗೆ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ.
ಫೆಬ್ರವರಿ 2019ರಲ್ಲಿ ಈ ಅದಾನಿ ಗ್ರೂಪ್, ಲಕ್ನೋ, ಮಂಗಳೂರು, ಅಹಮದಾಬಾದ್, ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ಸೇರಿದಂತೆ ಆರು ಎಎಐ ವಿಮಾನ ನಿಲ್ದಾಣಗಳ ಬಿಡ್ಗಳನ್ನು ಗೆದ್ದಿದೆ. ಎಎಐನೊಂದಿಗಿನ ಒಪ್ಪಂದಗಳ ಪ್ರಕಾರ, ಪ್ರತಿ ಪ್ರಯಾಣಿಕರ ಶುಲ್ಕವನ್ನು ಸರ್ಕಾರಿ ಸ್ವಾಮ್ಯದ ಘಟಕಕ್ಕೆ ಪಾವತಿಸಬೇಕಾಗುತ್ತದೆ. ರಿಯಾಯಿತಿ ಒಪ್ಪಂದಗಳಲ್ಲಿ ಸೂಚಿಸಿದಂತೆ ಅದಾನಿ ಗುಂಪು 50 ವರ್ಷಗಳ ಅವಧಿಗೆ ವಿಮಾನ ನಿಲ್ದಾಣಗಳನ್ನು ನಿರ್ವಹಿಸಬೇಕು ಮತ್ತು ಅಭಿವೃದ್ಧಿಪಡಿಸಬೇಕು.

ಸರಕು ಸಾಗಾಣಿಕೆಯಲ್ಲೂ ಬೆಂಗಳೂರು ನಿಲ್ದಾಣ ಮುಂದು
ಎಎಐನ ಸೆಪ್ಟೆಂಬರ್ ಅಂಕಿಅಂಶಗಳ ಆಧಾರದ ಮೇಲೆ ಬಂದರುಗಳಿಂದ ಇಂಧನ ಸಮೂಹದಿಂದ ನಿರ್ವಹಿಸಲ್ಪಡುವ ವಿಮಾನ ನಿಲ್ದಾಣಗಳು ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನ ಸಂಚಾರದಲ್ಲಿ 22% ನಷ್ಟು ಪಾಲನ್ನು ಹೊಂದಿವೆ. ಇದರಲ್ಲಿ ಮುಂಬೈ 12% ಪಾಲು ಹೊಂದಿದ್ದು ಮುಂಚೂಣಿಯಲ್ಲಿದೆ.
ಸರಕುಗಳಿಗಾಗಿ ಅದಾನಿ ಗ್ರೂಪ್ ನಡೆಸುತ್ತಿರುವ ವಿಮಾನ ನಿಲ್ದಾಣಗಳು ಸೆಪ್ಟೆಂಬರ್ನಲ್ಲಿ ವಿಮಾನ ನಿಲ್ದಾಣಗಳಾದ್ಯಂತ 29.4% ಸರಕು ಸಾಗಣೆಯನ್ನು ನಿರ್ವಹಿಸಿವೆ. ಇತ್ತ, ಬೆಂಗಳೂರು ವಿಮಾನ ನಿಲ್ದಾಣವು ದೆಹಲಿ ಮತ್ತು ಮುಂಬೈ ನಂತರ 13% ಪಾಲನ್ನು ಹೊಂದಿರುವ ಮೂರನೇ ಅತಿದೊಡ್ಡ ಸರಕು ನಿರ್ವಾಹಕವಾಗಿದೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications