ಬೆಂಗಳೂರು: ಶೀಘ್ರವೇ ಮತದಾರರ ಪಟ್ಟಿಯಲ್ಲಿ ತೃತೀಯ ಲಿಂಗಿಗಳ ಸೇರ್ಪಡೆ
ಬೆಂಗಳೂರು, ಡಿಸೆಂಬರ್ 20: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ವಿಕಲಚೇತನರನ್ನು ಗುರುತಿಸಿ ಸೇರ್ಪಡೆ ಮಾಡಲು ಕ್ರಮ ಕೈಗೊಳ್ಳಿ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದರು. ಬಿಬಿಎಂಪಿ ಚುನಾವಣೆಗೂ ಮುನ್ನ 18 ವರ್ಷ ತುಂಬಿದ ತೃತೀಯ ಲಿಂಗಿಗಳು ಮತ್ತು ವಿಶೇಷಚೇತನರು ಸೇರ್ಪಡೆಯಾಗುವ ಸಾಧ್ಯತೆ ಇದೆ.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬಂಧ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ತುಷಾರ್ ಗಿರಿನಾಥ್, ಬೆಂಗಳೂರಿನಲ್ಲಿ ಪ್ರಸ್ತುತ 9,182 ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ. ಈಗಾಗಲೇ 9,085 ಮಂದಿಗೆ ಎಪಿಕ್ ಕಾರ್ಡ್ ಹೊಂದಿದ್ದು, ಉಳಿದವರ ಪೈಕಿ 15 ಮಂದಿ ಎಪಿಕ್ ಕಾರ್ಡ್ ಬೇಕೆಂದು ಅರ್ಜಿ ಸಲ್ಲಿಸಿದ್ದಾರೆ. ಮಿಕ್ಕುಳಿದವರ ಸಂಪರ್ಕ ಸಾಧ್ಯವಾಗಿಲ್ಲ. ಈ ಸಂಬಂಧ ಲಿಂಗತ್ವ ಅಲ್ಪ ಸಂಖ್ಯಾತ ಸಂಘಟನೆಯ ಸಹಕಾರ ಪಡೆದು ನೊಂದಣಿಗೆ ಬಾಕಿ ಇರುವವರ ಪಟ್ಟಿ ಪಡೆದು ಅಗತ್ಯ ಕ್ರಮವಹಿಸವುಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಲಿಂಗತ್ವ ಅಲ್ಪಸಂಖ್ಯಾತರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳಬೇಕಾದರೆ ವಾಸಸ್ಥಳ, ಜನ್ಮದಿನಾಂಕ ಸೇರಿದಂತೆ ಅಗತ್ಯ ದಾಖಲೆಗಳು ಲಭ್ಯವಿದ್ದರಿಂದ ತಾಂತ್ರಿಕ ದೋಷಗಳು ಕಂಡು ಬರುತ್ತಿವೆ. ಈ ಪೈಕಿ ಆಯಾ ವಲಯದ ಜಂಟಿ ಆಯುಕ್ತರು ಸಮನ್ವಯ ಸಾಧಿಸಿ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಕ್ರಮಕೈಗೊಳ್ಳಬೇಕು ಎಂದರು.

ಸೇರ್ಪಡೆಗಾಗಿ ಜಾಗೃತಿ ಮೂಡಿಸಿ
ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್ ಮಾತನಾಡಿ, ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ವಿಕಲಚೇತನರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕು. ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಬಗ್ಗೆ ಪರಿಣಾಮಕಾರಿಯಾಗಿ ಕ್ರಮವಹಿಸಬೇಕು. ಹೀಗೆಂದು ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲಿಕರಣ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃಧ್ಧಿ ನಿಗಮ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಖ್ಯಸ್ಥರಿಗೆ ತಿಳಿಸಿದರು.
ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣದ ಇಲಾಖೆ ನಿರ್ದೇಶಕಿ ಲತಾ ಅವರು ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಕಲಚೇತನರನ್ನು ಮತದಾರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಈಗಾಗಲೇ 28 ವಿಧಾನಸಭಾ ಕ್ಷೇತ್ರದಲ್ಲಿ 18 ವರ್ಷಕ್ಕೂ ಮೇಲ್ಪಟ್ಟವರ ನೊಂದಣಿ ಹಾಗೂ ಮತದಾರರ ಜಾಗೃತಿಗೆ ಎಲ್ಲ ವಾರ್ಡ್ ಗಳಲ್ಲಿ 2 ವಾರ್ಡ್ ಗಳಿಗೆ ಒಬ್ಬ ಅಧಿಕಾರಿಯನ್ನು ಸಮನ್ವಯ ಸಾಧಿಸಲು ನೇಮಿಸಲಾಗಿದೆ ಎಂದು ಹೇಳಿದರು.

ಎಲ್ಲ ವಲಯ ಆಯುಕ್ತರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರು, ವಲಯ ಜಂಟಿ ಆಯುಕ್ತರು, ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಉಪ ಆಯುಕ್ತರಾದ ಮುರಳೀಧರ್, ಸಹಾಯಕ ಆಯುಕ್ತರಾದ ಉಮೇಶ್, ತೃತೀಯ ಲಿಂಗಿಗಳ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
-
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications