ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿ ಎನ್ಎಸ್ ಮೇಘರಿಕ್
ಬೆಂಗಳೂರು, ಜುಲೈ 31: ಬೆಂಗಳೂರು ನಗರಕ್ಕೆ ಹೊಸ ಪೊಲೀಸ್ ಆಯುಕ್ತರನ್ನು ನೇಮಿಸಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಶುಕ್ರವಾರ ಸಂಜೆ ಆದೇಶ ಹೊರಡಿಸಿದೆ. ಎಂಎನ್ ರೆಡ್ಡಿ ಅವರಿಗೆ ಡಿಜಿಪಿಯಾಗಿ ಬಡ್ತಿ ನೀಡಲಾಗಿದೆ. ಎನ್.ಎನ್ ಮೇಘರಿಕ್ ಅವರು ನೂತನ ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ.
ಬಿಬಿಎಂಪಿ ಚುನಾವಣೆ ಮುಗಿಯುವವರೆಗೂ ಪ್ರಮುಖ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡದೇ. ಹಾಲಿ ಇರುವ ಸ್ಥಾನದಲ್ಲೇ ಮುಂದುವರೆಸಬೇಕು ಎಂದು ಚುನಾವಣಾ ಆಯೋಗ ಸರ್ಕಾರಕ್ಕೆ ಸೂಚಿಸಿತ್ತು. ಹೀಗಾಗಿ ಗೊಂದಲಕ್ಕೆ ಬಿದ್ದಿದ್ದ ಸರ್ಕಾರ ಕೊನೆಗೂ ಧೈರ್ಯ ಮಾಡಿ ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆದೇಶಕ್ಕೆ ಅಂಕಿತ ಹಾಕಿದೆ.
Media for the unstinted support. Bengaluru will now have a new @cpblr in Mr. N S Meghrikh. I wish him all success & active SM engagement!!
— M N Reddi, IPS (@CPBlr) July 31, 2015 ಬೆಂಗಳೂರು ನಗರಕ್ಕೆ ನೂತನ ಪೊಲೀಸ್ ಆಯುಕ್ತರನ್ನು ನೇಮಕ ಮಾಡುವ ಸಂಬಂಧ ಸರ್ಕಾರ ಗೊಂದಲದಲ್ಲಿ ಸಿಲುಕಿ ಬೆಳಗ್ಗೆ ಇಂದ ಸಂಜೆ ತನಕ ಚರ್ಚೆ ನಡೆಸಿದ್ದು ವಿಶೇಷ. ಹಾಲಿ ಆಯುಕ್ತರನ್ನೇ ಮುಂದುವರೆಸಬೇಕೇ ಅಥವಾ ಹೊಸಬರನ್ನು ನೇಮಕ ಮಾಡಬೇಕೇ ಎಂಬುದರ ಬಗ್ಗೆ ಕೊನೆಗೂ ನಿರ್ಣಯ ಹೊರ ಬಿದ್ದಿದೆ.

ಪ್ರಮುಖ ಅಧಿಕಾರಿಗಳ ಬದಲಾದ ಹುದ್ದೆಗಳ ವಿವರ:
* ಆಡಳಿತ ವಿಭಾಗದ ಎಡಿಜಿಪಿಯಾಗಿ ಪ್ರವೀಣ್ ಸೂದ್
* ಆಂತರಿಕ ಭದ್ರತೆ ಎಡಿಜಿಪಿಯಾಗಿ ಟಿ ಸುನೀಲ್ ಕುಮಾರ್
* ನಾಗರೀಕ ಹಕ್ಕು ವಿಭಾಗದ ಎಡಿಜಿಪಿ ಭಾಸ್ಕರ್ ರಾವ್
* ರೈಲ್ವೆ ವಿಭಾಗದ ಎಡಿಜಿಪಿ ಪಾಂಡೆ
* ಕೆಎಸ್ ಆರ್ ಪಿ ಎಡಿಜಿಪಿ ಡಾ. ಎಸ್ ಪರಮಶಿವಮೂರ್ತಿ
* ಕಂಪ್ಯೂಟರ್ ವಿಭಾಗದ ಎಡಿಜಿಪಿ ರವೀಂದ್ರನಾಥ್
* ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಮೋಹನ್
*ಸಿಐಡಿ ಡಿಜಿಪಿ ಕಿಶೋರ್ ಚಂದ್ರ.
Today evening, Sri. N S Megharikh, IPS took charge as Commissioner of Police ,Bengaluru City @CPBlr pic.twitter.com/unZiUnSLOa
— BengaluruCityPolice (@BlrCityPolice) July 31, 2015 1987ರ ಐಪಿಎಸ್ ಬ್ಯಾಚಿನ ಅಧಿಕಾರಿಯಾದ ರಾಜಸ್ಥಾನ ಮೂಲದ ಮೇಘರಿಕ್ ಅವರು ಈ ಮುಂಚೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಡಿಜಿಪಿಯಾಗಿದ್ದರು, ಇದಕ್ಕೂ ಮುನ್ನ ಸಿಐಡಿ ಹಾಗೂ ಕ್ರೈಂ ಮತ್ತು ತಾಂತ್ರಿಕ ವಿಭಾಗದ ಎಡಿಜಿಪಿಯಾಗಿ ಕೂಡಾ ಕಾರ್ಯ ನಿರ್ವಹಿಸಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications