ಮೈ ಲಾರ್ಡ್! ಮೀಟೂ ಆರೋಪ ಮಾಡಿದ್ದ ಯುವ ವಕೀಲೆ ನಿಗೂಢ ಸಾವು
ಬೆಂಗಳೂರು, ನವೆಂಬರ್ 25: ವಕೀಲರ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದ ವಕೀಲೆ ನಿಗೂಢವಾಗಿ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ವಕೀಲಿಕೆ ಮಾಡುತ್ತಿದ್ದ ಅಂಡಮಾನ್-ನಿಕೋಬಾರ್ ಮೂಲದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ, ಮಲ್ಲೇಶ್ವರದ ಲುಕುಸೋಮ್ ಪಿಜಿ ನಿವಾಸ ಪುಷ್ಪಾಅರ್ಚನಾ ಲಾಲ್ ಮೃತೆ.
ಪುಷ್ಪಾ 2 ವರ್ಷಗಳ ಹಿಂದೆ ವ್ಯಾಸಂಗಕ್ಕಾಗಿ ನಗರಕ್ಕೆ ಬಂದು ಮಲ್ಲೇಶ್ವರದಲ್ಲಿರುವ ಹಿರಿಯ ವಕೀಲರೊಬ್ಬರ ಬಳಿ ಕೆಲಸ ಮಾಡುತ್ತಿದ್ದಳು. ಶನಿವಾರ ಬೆಳಗ್ಗೆ 11.15ಕ್ಕೆ ಕೆಲಸದ ಮಹಿಳೆ ಈಕೆಯ ಕೊಠಡಿಯನ್ನು ಶುಚಿಗೊಳಿಸಲೆಂದು ಬಂದಾಗ ಪುಷ್ಪಾ ಬಾಗಿಲು ತೆಗೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಹಿಳೆ ಕಿಟಕಿಯಲ್ಲಿ ನೋಡಿದಾಗ ಕೆಳಗೆ ಬಿದ್ದಿರುವುದು ಕಂಡು ಬಂದಿದೆ. ವಿಚಾರ ತಿಳಿದ ಪಿಜಿ ಮಾಲೀಕರು ಕೊಠಡಿಗೆ ತೆರಳಿ ಪರೀಕ್ಷಿಸಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಪುಷ್ಪಾ ಅವರು ಜಯಂತ್ ಎಂ ಪಟ್ಟಣಶೆಟ್ಟಿ ಅಂಡ್ ಅಸೋಸಿಯೇಟ್ಸ್ ಸಂಸ್ಥೆಯಲ್ಲಿ ವಕೀಲಿಕೆ ಕಲಿಯುತ್ತಿದ್ದ ಈಕೆ ವಕೀಲ ಟಿ ಚಂದ್ರನಾಯ್ಕ ಮತ್ತು ಸರ್ಕಾರಿ ಪ್ಲೀಡರ್ ಚೇತನ್ ದೇಶಾಯಿ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದರು.
ದೂರನ ಬೆನ್ನಲ್ಲೇ ಕಮರ್ಷಿಯಲ್ ಸ್ಟ್ರೀಟ್ ಠಾಣೆಯಲ್ಲಿ ನವೆಂಬರ್ 20ರಂದು ಎಫ್ಐಆರ್ ದಾಖಲಾಗಿತ್ತು. ದೂರಿಗೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ಆರಂಭಿಸಿದ ನಡುವೆಯೇ ಶನಿವಾರ ಮಧ್ಯಾಹ್ನ ವೈಯಾಲಿಕಾವಲ್ ಲುಕ್ಸ್ ಪಿಜಿಯಲ್ಲಿ ವಕೀಲೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
ವಕೀಲ ಸಮುದಾಯದಲ್ಲಿ ಈ ಸಾವು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸದ್ಯ ಪುಷ್ಪ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು, ಪರೀಕ್ಷಾ ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications