Aero India 2023: ಬೆಂಗಳೂರಿನ ಯಲಹಂಕ ವಾಯನೆಲೆಯಲ್ಲಿ 14ನೇ ಆವೃತ್ತಿಯ 'ವೈಮಾನಿಕ ಪ್ರದರ್ಶನ'
ಬೆಂಗಳೂರು, ನವೆಂಬರ್ 25: ಏರೋ ಇಂಡಿಯಾದ ಬಹುನಿರೀಕ್ಷಿತ 14ನೇ ಆವೃತ್ತಿಯು ಬೆಂಗಳೂರಿನ ಯಲಹಂಕದ ವಾಯುಪಡೆ ನಿಲ್ದಾಣದಲ್ಲಿ ಆಯೋಜಿಸಲು ಸಿದ್ಧತೆ ಆರಂಭವಾಗಿದೆ. 2023ರ ಪೆಬ್ರುವರಿಯಲ್ಲಿ ಏರೋ ಇಂಡಿಯಾ ನಡೆಯಲಿದೆ.
ಬೆಂಗಳೂರಿನ ಯಲಹಂಕದ ಏರ್ ಫೋರ್ಸ್ ಸ್ಟೇಷನ್ 1996 ರಿಂದ ಏಷ್ಯಾದ ಅತಿದೊಡ್ಡ ಏರ್ ಶೋದ (ವೈಮಾನಿಕ ಪ್ರದರ್ಶನ) ಆತಿಥ್ಯ ವಹಿಸಿದೆ. ಈ ಬೃಹತ್ ಏರ್ ಶೋ ಆಯೋಜನೆ ದಿನಾಂಕಗಳ ಬಗ್ಗೆ ಸಂಬಂಧಿತ ಸಂಸ್ಥೆಗಳು ಅಧಿಕೃತವಾಗಿ ಘೋಷಿಸಬೇಕಿದೆ. ಪ್ರತಿ ವರ್ಷದಂತೆ ಈವರ್ಷವು 2023ರವರೆ ಫೆಬ್ರುವರಿಯಲ್ಲಿ ನಡೆಯುವ ಸಾಧ್ಯತೆ ಇದೆ.
ಕೇಂದ್ರ ರಕ್ಷಣಾ ಸಚಿವಾಲಯದ ಭಾಗವಾದ 'ಡಿಫೆನ್ಸ್ ಎಕ್ಸಿಬಿಷನ್ ಆರ್ಗನೈಜೇಷನ್' ವತಿಯಿಂದ ಈ ವೈಮಾನಿಕ ಪ್ರದರ್ಶನ ನಡೆಯಲಿದೆ. ಇದರಲ್ಲಿ ಭಾರತೀಯ ಏರೋಸ್ಪೇಸ್ ಉದ್ಯಮದ ಹಲವಾರು ತಯಾರಕರು ಮತ್ತು ಸೇವಾ ಪೂರೈಕೆದಾರರು ಭವಿಷ್ಯದ ಗ್ರಾಹಕರನ್ನು ಭೇಟಿ ಮಾಡುತ್ತಾರೆ. ಏರೋಸ್ಪೇಸ್ ಉದ್ಯಮ ಬೆಳೆವಣಿಗೆಗೆ ಈ ಏರೋ ಇಂಡಿಯಾ ಪ್ರದರ್ಶನ ಉತ್ತಮ ವೇದಿಕೆಯೂ ಆಗಿದೆ.

2003ರಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ 4ನೇ ಆವೃತ್ತಿ ವೈಮಾನಿಕ ಪ್ರದರ್ಶನದಲ್ಲಿ ಪ್ರಪಂಚದಾದ್ಯಂತದ 22 ದೇಶಗಳಿಂದ ಸುಮಾರು 176 ಪ್ರದರ್ಶಕರು ಭಾಗವಹಿಸಿದ್ದರು. 2005ರಲ್ಲಿ 380 ಪ್ರದರ್ಶಕರು ಭಾಗವಹಿಸುವ ಮೂಲಕ ಈ ಸಂಖ್ಯೆಯನ್ನು ದ್ವಿಗುಣಗೊಳಿಸಿದರು. ಅದಾದ ಬಳಿಕ ವರ್ಷದಿಂದ ವರ್ಷಕ್ಕೆ ಬೆಂಗಳೂರಿನ ಏರ್ಶೋನಲ್ಲಿ ಗಣನೀಯ ಮಟ್ಟದಲ್ಲಿ ಪ್ರದರ್ಶಕರ ಸಂಖ್ಯೆ ಕಂಡ ಬಂತು.
ಏರೋ ಇಂಡಿಯಾದ 13ನೇ ಆವೃತ್ತಿಯು 2021ರಲ್ಲಿ ಫೆಬ್ರವರಿ 3 ದ 5ರ ವರೆಗೆ ಮೂರು ದಿನಗಳ ಕಾಲ ನಡೆದಿತ್ತು. ಆದರೆ ಕೊರೋನಾ ಸಾಂಕ್ರಾಮಿಕದ ಭೀತಿ ಕಾರಣದಿಂದ ಪ್ರದರ್ಶನದಲ್ಲಿ ವಿದೇಶಿ ವಿಮಾನಗಳು, ಪ್ರದರ್ಶಕರು ಭಾಗವಹಿಸಲು ಸಾಧ್ಯವಾಗಲಿಲ್ಲ. ಅದೇ ವರ್ಷ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ಮತ್ತು ರಕ್ಷಣಾ ಸಚಿವಾಲಯದ ನಡುವೆ 83 ಎಚ್ಎಎಲ್ ತೇಜಸ್ ಎಂಕೆ 1ಎಎಸ್ (ಸಿಂಗಲ್ ಇಂಜಿನ್ ಫೈಟರ್ ಜೆಟ್) ಉತ್ಪಾದನೆಗೆ ಸಂಬಂಧಿಸಿದಂತೆ ಒಪ್ಪಂದ ನಡೆದಿತ್ತು ಎಂದು ಮೂಲಗಳು ಮಾಹಿತಿ ನೀಡಿವೆ.

20,000 ವಾಹನಗಳ ನಿಲುಗಡೆಗೆ ವ್ಯವಸ್ಥೆ!
ಏರೋ ಇಂಡಿಯಾ 2023 ಸಂಬಂಧ ರಾಜ್ಯ ಸರ್ಕಾರ, ಬಿಬಿಎಂಪಿ, ಬೆಂಗಳೂರು ನಗರ ಸಂಚಾರಿ ಪೊಲೀಸ್ ಸೇರಿದಂತೆ ವಾಹನ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ. ಒಂದು ಅಂದಾಜಿನ ಪ್ರಕಾರ ಲಕ್ಷಾಂತರ ಜನ ಬರುವ ನಿರೀಕ್ಷೆ ಇದ್ದು, 20,000 ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡುವುದಾಗಿ ವಾಯುಪಡೆ ಅಧಿಕಾರಿಗಳು ತಿಳಿಸಿದ್ದಾರೆ. ಅದಕ್ಕಾಗಿ ಜಕ್ಕೂರು ಸುತ್ತಮುತ್ತ ಸ್ಥಳ ನಿಗದಿ ಮಾಡಿದ್ದಾರೆ. ಒಟ್ಟಾರೆ ವೈಮಾನಿಕ ಪ್ರದರ್ಶನಕ್ಕೆ ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ











Click it and Unblock the Notifications