Aero India 2023:ಯಲಹಂಕದಲ್ಲಿ ಜನವರಿ 30ರಿಂದ ಫೆಬ್ರುವರಿ 20ರವರೆಗೆ ಮಾಂಸ ಮಾರಾಟ ನಿಷೇಧ
ಬೆಂಗಳೂರಿನ ಯಲಹಂಕ ವಾಯು ನೆಲೆಯಲ್ಲಿ 'ಏರೋ ಇಂಡಿಯಾ 2023' ಪ್ರದರ್ಶನ ನಡೆಯಲಿದೆ. ಈ ಸಂಬಂಧ ಬಿಬಿಎಂಪಿ ಮಾಂಸ ಮಾರಾಟ ನಿಷೇಧಿಸಿ ಆದೇಶಿಸಿದೆ. ಯಾವ ಭಾಗದಲ್ಲಿ ಈ ಆದೇಶ ಅನ್ವಯವಾಗಲಿದೆ? ನಿಯಮ ಉಲ್ಲಂಘಿಸಿದರೆ ಏನು ಕ್ರಮ ಎಂಬುದರ ಮಾಹಿತಿ ಇಲ್ಲಿದೆ.
ಬೆಂಗಳೂರು, ಜನವರಿ 27: ಬೆಂಗಳೂರಿನ ಯಲಹಂಕ ವಾಯು ನೆಲೆಯಲ್ಲಿ 'ಏರೋ ಇಂಡಿಯಾ 2023' ಪ್ರದರ್ಶನ ನಡೆಯಲಿರುವ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಈ ಭಾಗದಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಿ ಶುಕ್ರವಾರ ಆದೇಶ ಹೊರಡಿಸಿದೆ.
ಕೇಂದ್ರ ರಕ್ಷಣಾ ಸಚಿವಾಲಯ ಬೆಂಗಳೂರಿನ ಯಲಹಂಕದಲ್ಲಿರುವ ವಾಯುನೆಲೆಯಲ್ಲಿ ಮುಂದಿನ ತಿಂಗಳು ಫೆಬ್ರುವರಿ 13ರಿಂದ ಫೆಬ್ರುವರಿ 17ರವರೆಗೆ 'ಅಂತಾರಾಷ್ಟ್ರೀಯ ಏರೋ ಇಂಡಿಯಾ 2023" (ವೈಮಾನಿಕ ಪ್ರದರ್ಶನ) ಹಮ್ಮಿಕೊಂಡಿದೆ. ಇದರ ಅಂಗವಾಗಿ ಯಲಹಂಕ ವಲಯ ವ್ಯಾಪ್ತಿಯಲ್ಲಿರುವ ಎಲ್ಲ ಮಾಂಸದ ಮಳಿಗೆಗಳಲ್ಲಿ ಜನವರಿ 30 ರಿಂದಲೇ ರಿಂದ ಫೆಬ್ರುವರಿ 20ರವರೆಗೆ ಯಲಹಂಕ ವಲಯದ ವ್ಯಾಪ್ತಿಯಲ್ಲಿರುವ ಎಲ್ಲ ತರಹದ ಮಾಂಸ ಮಾರಾಟ ನಿಷೇಧಿಸಲಾಗಿದೆ. ಇಷ್ಟೇ ಅಲ್ಲದೇ ಹೋಟೇಲ್ ಹಾಗೂ ರೆಸ್ಟೋರೆಂಟ್/ಡಾಬಾಗಳಲ್ಲಿ ಮಾಂಸಾಹಾರ ತಯಾರಿಕೆ ಮತ್ತು ಮಾರಾಟವನ್ನೂ ಸಹ ಬಿಬಿಎಂಫಿ ನಿಷೇಧಿಸಿದೆ.
ಬಿಬಿಎಂಪಿ ನಿಗದಿಪಡಿಸಿದ ಅವಧಿಯಲ್ಲಿ ಮಾಂಸ ಮಾರಾಟ, ಮಾಂಸಾಹಾರ ತಯಾರಿಸಿ ನಿಯಮ ಉಲ್ಲಂಘಿಸಿದ್ದೇ ಆದಲ್ಲಿ 'ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ಎರ್ಕ್ರಾಪ್ಟ್ ರೂಲ್ಸ್ 1937ರ ರೂಲ್ 91' ಅಡಿ ಕ್ರಮ ಕೈಗೊಳ್ಳುವುದಾಗಿ ಆದೇಶದಲ್ಲಿ ಯಲಹಂಕ ವಲಯ ಜಂಟಿ ಆಯುಕ್ತೆ ಪೂರ್ಣಿಮಾ ತಿಳಿಸಿದ್ದಾರೆ.

23 ದೇಶಗಳ ಪ್ರಾತಿನಿಧ್ಯದಡಿ ಏರ್ ಶೋ: ಪ್ರಧಾನಿ ಚಾಲನೆ
ಕೊರೊನಾ ನಂತರ ಯಲಹಂಕ ವಾಯುನೆಲೆಯಲ್ಲಿ ವಾರ್ಷಿಕ ವೈಮಾನಿಕ ಪ್ರದರ್ಶನ ನಡೆಯುತ್ತಿದೆ. ಇದು 14ನೇ ಆವೃತ್ತಿ ಏರ್ ಶೋ ಆಗಿದೆ. ಪ್ರದರ್ಶನದಲ್ಲಿ ಸುಮಾರು 557 ಭಾರತೀಯ ಪ್ರದರ್ಶಕರು ಹಾಗೂ 40ಕ್ಕೂ ಹೆಚ್ಚು ವಿದೇಶಿ ಪ್ರದರ್ಶಕರು ಭಾಗವಹಿಸುವುದು ಖಚಿತವಾಗಿದೆ. ಒಟ್ಟಾರೆ 23 ದೇಶಗಳ ಪ್ರಾತಿನಿಧ್ಯದಡಿ ಕಾರ್ಯಕ್ರಮ ನಡೆಯಲಿದೆ.

ಏರ್ ಇಂಡಿಯಾಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ. ಪ್ರದರ್ಶನದಲ್ಲಿ ವೈಮಾನಿಕ ಉದ್ಯಮ ಕುರಿತ ವಿಚಾರ ವಿನಿಮಯಕ್ಕೆ ಇದೊಂದು ಉತ್ತಮ ವೇದಿಕೆ ಆಗಿದೆ. ಯಲಹಂಕ ವಲಯವ್ಯಾಪ್ತಿಯಲ್ಲಿ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಕಳೆದ1996 ರಿಂದ ವೈಮಾನಿಕ ಪ್ರದರ್ಶನ ನಡೆಸಿಕೊಂಡು ಬರಲಾಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications