Aero India 2023: ಬೆಂಗಳೂರು ಯಲಹಂಕದಲ್ಲಿ ನಿರ್ಮಾಣ ಹಂತದ ಕಟ್ಟಡಗಳ ಕ್ರೇನ್ ಎತ್ತರ ಇಳಿಕೆಗೆ ಸೂಚನೆ
ಬೆಂಗಳೂರಿನ ಯಲಹಂಕ ವಾಯುಸೇನಾ ನೆಲೆಯಲ್ಲಿ ಫೆಬ್ರುವರಿಯಲ್ಲಿ 'ಏರ್ ಶೋ-2023' ನಡೆಯಲಿದೆ. ಈ ಪ್ರಯುಕ್ತ ಯಲಹಂಕದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮೇಲೆ ಅಳವಡಿಸಲಾದ ಕ್ರೇನ್ ಎತ್ತರ ತಗ್ಗಿಸಲು ಬಿಬಿಎಂಪಿ ಸೂಚನೆ ನೀಡಿದೆ.
ಬೆಂಗಳೂರು, ಜನವರಿ 31: ಬೆಂಗಳೂರಿನ ಯಲಹಂಕ ವಾಯುಸೇನಾ ನೆಲೆಯಲ್ಲಿ ಫೆಬ್ರುವರಿಯಲ್ಲಿ 'ಏರ್ ಶೋ-2023' ನಡೆಯಲಿದೆ. ಈ ಪ್ರಯುಕ್ತ ವಾಯುಸೇನಾ ನೆಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮೇಲೆ ಅಳವಡಿಸಲಾದ ಕ್ರೇನ್ ಎತ್ತರವನ್ನು ತಗ್ಗಿಸುವಂತೆ ಬಿಬಿಎಂಪಿ ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ, ಐಟಿ ಕೇಂದ್ರ ವಾಗಿರುವ ಬೆಂಗಳೂರು ಯಲಹಂಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ವೈಮಾನಿಕ ಪ್ರದರ್ಶನ 2023 (Air show 2023) ಇದೇ ಫೆಬ್ರವರಿ 13ರಿಂದ 17ರವರೆಗೆ ನಡೆಯಲಿದೆ. ಈ ವೇಳೆ ಅನೇಕ ಯುದ್ಧ ವಿಮಾನಗಳು ಕಡಿಮೆ ಎತ್ತರದ ಅಂತರದಲ್ಲಿ ವೈಮಾನಿಕ ಪ್ರದರ್ಶನ ನೀಡುತ್ತವೆ.
ಈ ಸಂಬಂಧ ಯಲಹಂಕ ವಲಯದ ವಾಯುಸೇನಾ ನೆಲೆಯ ಸುತ್ತಮುತ್ತಲಿನ ಐದು ಕಿಲೋ ಮೀಟರ್ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ನಿರ್ಮಾಣ ಹಂತದ ಬೃಹತ್ ಕಟ್ಟಡಗಳ ಮಾಲೀಕರಿಗೆ ಈ ಸೂಚನೆ ನೀಡಲಾಗಿದೆ. ನಿರ್ಮಾಣ ಗೊಳುತ್ತಿರುವ ಕಟ್ಟಡಗಳಲ್ಲಿನ ಕ್ರೇನ್ಗಳ ಎತ್ತರವನ್ನು ಫೆಬ್ರುವರಿ 09ರಿಂದ ಫೆಬ್ರುವರಿ 17ರವರೆಗೆ ತಗ್ಗಿಸಲು ಹಾಗೂ ಕ್ರೇನ್ ಚಟುವಟಿಕೆಯನ್ನು ಸ್ಥಗಿತಗೊಳಿಸಲು ಬಹುಮಹಡಿ ಕಟ್ಟಡಗಳ ಸಂಸ್ಥೆಗಳು/ಮಾಲಿಕರು/ಅಭಿವೃದ್ಧಿದಾರರಿಗೆ ಬಿಬಿಎಂಪಿ ತಿಳಿಸಿದೆ.

ಬೃಹತ್ ಬೆಂಗಳೂರು ನಗರ ಪಾಲಿಕೆಯ (BBMP)ಯ ಈ ಆದೇಶ ಉಲ್ಲಂಘಿಸಿದ್ದೇ ಆದಲ್ಲಿ 'ಬಿಬಿಎಂಪಿ ಕಾಯ್ದೆ 2020' ಮತ್ತು 'ಭಾರತೀಯ ಏರ್ಕ್ರಾಫ್ಟ್ ರೂಲ್ಸ್ 1937ರ ರೂಲ್ 91' ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಯೋಜನೆಯ ಜಂಟಿ ನಿರ್ದೇಶಕರು (ಉತ್ತರ) ಮಂಜೇಶ್ ಅವರು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಬಿಬಿಎಂಪಿಯು ವೈಮಾನಿಕ ಪ್ರದರ್ಶನ ಅಂಗವಾಗಿ ಯಲಹಂಕ ವಾಯುನೆಲೆ ವ್ಯಾಪ್ತಿಯಲ್ಲಿ ಜನವರಿ 30ರಿಂದ ಫೆಬ್ರುವರಿ 20ರವರೆಗೆ ಎಲ್ಲ ಬಗೆಯ ಮಾಂಸ ಮಾರಾಟ, ಹೋಟೆಲ್ ರೆಸ್ಟೋರೆಂಟ್ಗಳಲ್ಲಿ ಮಾಂಸಾಹಾರ ತಯಾರಿಕೆ ನಿಷೇಧಿಸಿ ಆದೇಶ ಹೊರಡಿತ್ತು.

ಬಿಬಿಎಂಪಿ ಸೂಚಿಸಿದ ಅವಧಿಯಲ್ಲಿ ಮಾಂಸ ಮಾರಾಟ, ಮಾಂಸಾಹಾರ ತಯಾರಿಕೆ ನಿಯಮ ಉಲ್ಲಂಘಿಸಿದರೆ ಅಂತವರ ವಿರುದ್ಧ 'ಬಿಬಿಎಂಪಿ ಕಾಯ್ದೆ 2020 ಹಾಗೂ ಭಾರತೀಯ ಏರ್ಕ್ರಾಪ್ಟ್ ರೂಲ್ಸ್ 1937ರ ರೂಲ್ 91' ರ ಪ್ರಕಾರ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿತ್ತು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD










Click it and Unblock the Notifications