Aero India 2023: ಏರೋ ಶೋ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಐದು ವಿಷಯಗಳು
ಬೆಂಗಳೂರು, ಫೆಬ್ರವರಿ. 12: ಸೋಮವಾರದಿಂದ ಆರಂಭವಾಗಲಿರುವ ಏರೋ ಇಂಡಿಯಾ ಶೋಗೆ ಬೆಂಗಳೂರು ಸಜ್ಜಾಗಿದ್ದು, ಯಲಹಂಕ ಏರ್ ಸ್ಟೇಷನ್ನಲ್ಲಿ ಈಗಾಗಲೇ ರಿಹರ್ಸಲ್ ಶುರುವಾಗಿದೆ. ಜಾಗತಿಕವಾಗಿ ಗಮನ ಸೆಳೆಯುತ್ತಿರುವ ಐದು ದಿನಗಳ ಈ ಏರ್ ಶೋ ಫೆಬ್ರವರಿ 17 ರಂದು ಕೊನೆಗೊಳ್ಳಲಿದೆ.
14ನೇ ಆವೃತ್ತಿಯ ಏರ್ ಶೋಗೆ ಬಿಎಂಟಿಸಿಯಿಂದ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಿದೆ. ನಗರ ಸಂಚಾರಿ ಪೊಲೀಸರು ಮಾರ್ಗ ಬದಲಾವನೆ ಬಗ್ಗೆ ಈಗಾಗಲೇ ಸಲಹೆ ನೀಡಿದ್ದಾರೆ.
ಏರೋ ಇಂಡಿಯಾ ಶೋ 2023 ಬಗ್ಗೆ ತಿಳಿದುಕೊಳ್ಳಬೇಕಾದ ಐದು ವಿಷಯಗಳು.
1. ಈ ಬಾರಿಯ ದ್ವೈವಾರ್ಷಿಕ ಏರೋ ಇಂಡಿಯಾ ಪ್ರದರ್ಶನದಲ್ಲಿ ಒಟ್ಟು 809 ಪ್ರದರ್ಶಕರು ಭಾಗವಹಿಸಲಿದ್ದಾರೆ. ಅದರಲ್ಲಿ 110 ವಿದೇಶಿ ಪ್ರದರ್ಶಕರು ಮತ್ತು 699 ಭಾರತೀಯ ಪ್ರದರ್ಶಕರು ಭಾಗವಹಿಸಲಿದ್ದಾರೆ.

2. ಅನೇಕ ಯುದ್ಧವಿಮಾನಗಳು ಮತ್ತು ಹೆಲಿಕಾಪ್ಟರ್ಗಳು ಆಗಸದಲ್ಲಿ ಪ್ರದರ್ಶನ ನೀಡುತ್ತವೆ. ಇದರಲ್ಲಿ ರಕ್ಷಣಾ ಪ್ರದರ್ಶನವನ್ನು ಸಹ ನಿಗದಿಪಡಿಸಲಾಗಿದೆ. ಈ ಪ್ರದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಐದು ದಿನಗಳ ವೇಳಾಪಟ್ಟಿಯಲ್ಲಿ ಅನೇಕ ಏರೋಬ್ಯಾಟಿಕ್ ಪ್ರದರ್ಶನಗಳು ಸಹ ಇವೆ.
3. ಐಎಎಫ್ನ ತೇಜಸ್ ವಿಮಾನವು ಹಗುರವಾದ, ಹೆಚ್ಚು ಸೂಪರ್ಸಾನಿಕ್ ಫೈಟರ್ ಆಗಿದ್ದು, ಏರೋ ಇಂಡಿಯಾ ಪ್ರದರ್ಶನದಲ್ಲಿ ಹೈಲೈಟ್ ಆಗುವ ನಿರೀಕ್ಷೆಯಿದೆ.
4. ನಗರದಲ್ಲಿ ಏರೋ ಇಂಡಿಯಾ ಶೋ ನಡೆಯುವುದರಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನಗಳ ಮೇಲೆ ಭಾರಿ ಪರಿಣಾಮ ಬೀರಲಿದೆ. ಬೆಂಗಳೂರಿನಲ್ಲಿ ಏರ್ ಶೋ ನಡೆಯುತ್ತಿರುವ ಕಾರಣ ವಿಮಾನ ರದ್ದತಿ ಮತ್ತು ವಿಮಾನಗಳ ವಿಳಂಬದ ಬಗ್ಗೆ ವಿಮಾನಯಾನ ಸಂಸ್ಥೆಗಳು ಈಗಾಗಲೇ ಪ್ರಯಾಣಿಕರಿಗೆ ಎಚ್ಚರಿಕೆ ನೀಡುತ್ತಿವೆ.

5. ಏರೋ ಇಂಡಿಯಾ ಶೋ ಫೆಬ್ರವರಿ 16 ಮತ್ತು 17 ರಂದು ಸಾರ್ವಜನಿಕರಿಗೆ ಮುಕ್ತವಾಗಿರುತ್ತವೆ. ಏರ್ ಶೋಗೆ ಹೋಗಲು ಬಯಸುವವರು ಪ್ರತಿ ಟಿಕೆಟ್ಗೆ 2500 ರೂಪಾಯಿ ಪಾವತಿಸಬೇಕು. ಈ ಟಿಕೆಟ್ಗಳನ್ನು ಅಧಿಕೃತ ವೆಬ್ಸೈಟ್ aeroindia.gov.in ನಲ್ಲಿ ಖರೀದಿಸಬಹುದು.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications