Aero India 2023: ಏರೋ ಶೋ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಐದು ವಿಷಯಗಳು
ಬೆಂಗಳೂರು, ಫೆಬ್ರವರಿ. 12: ಸೋಮವಾರದಿಂದ ಆರಂಭವಾಗಲಿರುವ ಏರೋ ಇಂಡಿಯಾ ಶೋಗೆ ಬೆಂಗಳೂರು ಸಜ್ಜಾಗಿದ್ದು, ಯಲಹಂಕ ಏರ್ ಸ್ಟೇಷನ್ನಲ್ಲಿ ಈಗಾಗಲೇ ರಿಹರ್ಸಲ್ ಶುರುವಾಗಿದೆ. ಜಾಗತಿಕವಾಗಿ ಗಮನ ಸೆಳೆಯುತ್ತಿರುವ ಐದು ದಿನಗಳ ಈ ಏರ್ ಶೋ ಫೆಬ್ರವರಿ 17 ರಂದು ಕೊನೆಗೊಳ್ಳಲಿದೆ.
14ನೇ ಆವೃತ್ತಿಯ ಏರ್ ಶೋಗೆ ಬಿಎಂಟಿಸಿಯಿಂದ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಿದೆ. ನಗರ ಸಂಚಾರಿ ಪೊಲೀಸರು ಮಾರ್ಗ ಬದಲಾವನೆ ಬಗ್ಗೆ ಈಗಾಗಲೇ ಸಲಹೆ ನೀಡಿದ್ದಾರೆ.
ಏರೋ ಇಂಡಿಯಾ ಶೋ 2023 ಬಗ್ಗೆ ತಿಳಿದುಕೊಳ್ಳಬೇಕಾದ ಐದು ವಿಷಯಗಳು.
1. ಈ ಬಾರಿಯ ದ್ವೈವಾರ್ಷಿಕ ಏರೋ ಇಂಡಿಯಾ ಪ್ರದರ್ಶನದಲ್ಲಿ ಒಟ್ಟು 809 ಪ್ರದರ್ಶಕರು ಭಾಗವಹಿಸಲಿದ್ದಾರೆ. ಅದರಲ್ಲಿ 110 ವಿದೇಶಿ ಪ್ರದರ್ಶಕರು ಮತ್ತು 699 ಭಾರತೀಯ ಪ್ರದರ್ಶಕರು ಭಾಗವಹಿಸಲಿದ್ದಾರೆ.

2. ಅನೇಕ ಯುದ್ಧವಿಮಾನಗಳು ಮತ್ತು ಹೆಲಿಕಾಪ್ಟರ್ಗಳು ಆಗಸದಲ್ಲಿ ಪ್ರದರ್ಶನ ನೀಡುತ್ತವೆ. ಇದರಲ್ಲಿ ರಕ್ಷಣಾ ಪ್ರದರ್ಶನವನ್ನು ಸಹ ನಿಗದಿಪಡಿಸಲಾಗಿದೆ. ಈ ಪ್ರದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಐದು ದಿನಗಳ ವೇಳಾಪಟ್ಟಿಯಲ್ಲಿ ಅನೇಕ ಏರೋಬ್ಯಾಟಿಕ್ ಪ್ರದರ್ಶನಗಳು ಸಹ ಇವೆ.
3. ಐಎಎಫ್ನ ತೇಜಸ್ ವಿಮಾನವು ಹಗುರವಾದ, ಹೆಚ್ಚು ಸೂಪರ್ಸಾನಿಕ್ ಫೈಟರ್ ಆಗಿದ್ದು, ಏರೋ ಇಂಡಿಯಾ ಪ್ರದರ್ಶನದಲ್ಲಿ ಹೈಲೈಟ್ ಆಗುವ ನಿರೀಕ್ಷೆಯಿದೆ.
4. ನಗರದಲ್ಲಿ ಏರೋ ಇಂಡಿಯಾ ಶೋ ನಡೆಯುವುದರಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನಗಳ ಮೇಲೆ ಭಾರಿ ಪರಿಣಾಮ ಬೀರಲಿದೆ. ಬೆಂಗಳೂರಿನಲ್ಲಿ ಏರ್ ಶೋ ನಡೆಯುತ್ತಿರುವ ಕಾರಣ ವಿಮಾನ ರದ್ದತಿ ಮತ್ತು ವಿಮಾನಗಳ ವಿಳಂಬದ ಬಗ್ಗೆ ವಿಮಾನಯಾನ ಸಂಸ್ಥೆಗಳು ಈಗಾಗಲೇ ಪ್ರಯಾಣಿಕರಿಗೆ ಎಚ್ಚರಿಕೆ ನೀಡುತ್ತಿವೆ.

5. ಏರೋ ಇಂಡಿಯಾ ಶೋ ಫೆಬ್ರವರಿ 16 ಮತ್ತು 17 ರಂದು ಸಾರ್ವಜನಿಕರಿಗೆ ಮುಕ್ತವಾಗಿರುತ್ತವೆ. ಏರ್ ಶೋಗೆ ಹೋಗಲು ಬಯಸುವವರು ಪ್ರತಿ ಟಿಕೆಟ್ಗೆ 2500 ರೂಪಾಯಿ ಪಾವತಿಸಬೇಕು. ಈ ಟಿಕೆಟ್ಗಳನ್ನು ಅಧಿಕೃತ ವೆಬ್ಸೈಟ್ aeroindia.gov.in ನಲ್ಲಿ ಖರೀದಿಸಬಹುದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ











Click it and Unblock the Notifications