Aero India 2023: ಪ್ರಯಾಣಿಕರೇ ಗಮನಿಸಿ, ಗುರುವಾರ, ಶುಕ್ರವಾರ ಬಳ್ಳಾರಿ ರಸ್ತೆಯಿಂದ ದೂರವಿರಿ
ಬೆಳಗ್ಗೆ 6 ರಿಂದ ರಾತ್ರಿ 10ರ ವರೆಗೆ ಬಳ್ಳಾರಿ ರಸ್ತೆಯಲ್ಲಿ ಬಿಎಂಟಿಸಿ ಬಸ್ ಹೊರತುಪಡಿಸಿ ಎಲ್ಲ ರೀತಿಯ ಸರಕು ಸಾಗಣೆ ವಾಹನಗಳು ಮತ್ತು ಭಾರಿ ವಾಹನಗಳ ಸಂಚಾರ ನಿಷೇಧ.
ಬೆಂಗಳೂರು, ಫೆಬ್ರವರಿ. 16: ಯಲಹಂಕದಲ್ಲಿ ನಡೆಯುಯುತ್ತಿರುವ ಏರೋ ಇಂಡಿಯಾ ಪ್ರದರ್ಶನಕ್ಕೆ ಗುರುವಾರ ಮತ್ತು ಶುಕ್ರವಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆಯಿರುವುದರಿಂದ ಎರಡು ದಿನಗಳು ಬಳ್ಳಾರಿ ರಸ್ತೆಯನ್ನು ಬಳಸದಂತೆ ಸಾರ್ವಜನಿಕರಿಗೆ ಪೊಲೀಸರು ಸೂಚಿಸಿದ್ದಾರೆ.
ಈ ಎರಡು ದಿನಗಳಲ್ಲಿ ಯಲಹಂಕ ವಾಯನೆಲೆಯಲ್ಲಿ ಏರ್ ಶೋ ಸಾರ್ವಜನಿಕರಿಗೆ ಮುಕ್ತವಾಗಿದ್ದು, ಸಾವಿರಾರು ಮಂದಿ ಭಾಗಿಯಾಗುವ ನಿರೀಕ್ಷೆಯಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಹೋಗುವ ವಾಹನಗಳು ಮತ್ತು ವಾಪಸ್ ಬರುವ ವಾಹನಗಳು ಹೆಣ್ಣೂರು - ಬಾಗಲೂರು ರಸ್ತೆಯನ್ನು ಕಡ್ಡಾಯವಾಗಿ ಬಳಸಬೇಕು ಎಂದು ಸಂಚಾರ ಸಲಹೆ ನೀಡಲಾಗಿದೆ.

ಏರೋ ಇಂಡಿಯಾ ಪ್ರದರ್ಶನಕ್ಕೆ ಭೇಟಿ ನೀಡುವ ಸಾರ್ವಜನಿಕರು ತಮ್ಮ ವಾಹನಗಳನ್ನು ಜಿಕೆವಿಕೆ ಕ್ಯಾಂಪಸ್ ಅಥವಾ ಜಕ್ಕೂರು ಕ್ಯಾಂಪಸ್ನಲ್ಲಿ ನಿಲ್ಲಿಸಬೇಕು. ಅಲ್ಲಿಂದ ಪ್ರದರ್ಶನದ ಸ್ಥಳಕ್ಕೆ ಹೋಗಲು ಬಿಎಂಟಿಸಿ ಬಸ್ಗಳನ್ನು ಬಳಸಬೇಕು ಎಂದು ಸೂಚಿಸಲಾಗಿದೆ
ಬೆಳಗ್ಗೆ 6 ರಿಂದ ರಾತ್ರಿ 10ರ ವರೆಗೆ ಬಳ್ಳಾರಿ ರಸ್ತೆಯಲ್ಲಿ ಬಿಎಂಟಿಸಿ ಬಸ್ ಹೊರತುಪಡಿಸಿ ಎಲ್ಲ ರೀತಿಯ ಸರಕು ಸಾಗಣೆ ವಾಹನಗಳು ಮತ್ತು ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಈ ರಸ್ತೆಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
1. ನಾಗೇನಹಳ್ಳಿ ಗೇಟ್ನಿಂದ ಬೆಂಗಳೂರು - ಬಳ್ಳಾರಿ ರಸ್ತೆಗೆ ಸಂಪರ್ಕ ಕಲ್ಪಿಸುವ ಆಂಬಿಯನ್ಸ್ ಧಾಬಾ ಕ್ರಾಸ್ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
2. ಬೆಂಗಳೂರು - ಬಳ್ಳಾರಿ ರಸ್ತೆಯ ಮೇಖ್ರಿ ವೃತ್ತದಿಂದ ದೇವನಹಳ್ಳಿವರೆಗಿನ ರಸ್ತೆಯ ಎರಡೂ ಬದಿಗಳಲ್ಲಿ ಸಂಚಾರ ನಿಷೇಧಿಸಲಾಗಿದೆ.

3. ಗೊರಗುಂಟೆಪಾಳ್ಯದಿಂದ ಹೆಣ್ಣೂರು ಜಂಕ್ಷನ್ವರೆಗಿನ ವರ್ತುಲ ರಸ್ತೆಯ ಎರಡೂ ಬದಿಯಲ್ಲಿಯೂ ಸಂಚಾರ ನಿರ್ಬಂಧ.
4. ಬಾಗಲೂರು ಮುಖ್ಯರಸ್ತೆಯಲ್ಲಿ ರೇವಾ ಕಾಲೇಜು ಜಂಕ್ಷನ್ನಿಂದ ಬಾಗಲೂರು ಕ್ರಾಸ್ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ಸಂಚಾರ ನಿಷೇಧ.
5. ನಾಗವಾರ ಜಂಕ್ಷನ್ನಿಂದ ಥಣಿಸಂದ್ರ ಮುಖ್ಯರಸ್ತೆ ಮೂಲಕ ಬಾಗಲೂರು ಜಂಕ್ಷನ್ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications