ಜೆ.ಸಿ ನಗರ ಪೊಲೀಸ್ ಠಾಣೆಯಲ್ಲಿ ಆಫ್ರಿಕಾ ಪ್ರಜೆ ಲಾಕಪ್ ಡೆತ್ ಪ್ರಕರಣ ಸಿಐಡಿಗೆ
ಬೆಂಗಳೂರು, ಆ. 02: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ವಿದೇಶಿ ಪ್ರಜೆ ಜೆ.ಸಿ. ನಗರ ಪೊಲೀಸರ ಕಸ್ಡಡಿಯಲ್ಲಿ ಸಾವನ್ನಪ್ಪಿದ ಬೆನ್ನಲ್ಲೇ ಆಫ್ರಿಕನ್ ಪ್ರಜೆಗಳು ಪ್ರತಿಭಟನೆ ನಡೆಸಿದರು. ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಬೆನ್ನಲ್ಲೇ ಶಾಂತಿಯುತ ಪ್ರತಿಭಟನೆ ಹಿಂಸಾ ರೂಪಕ್ಕೆ ತಿರುಗಿದೆ. ಮುಷ್ಕರ ನಿರತ ಆಫ್ರಿಕನ್ ಪ್ರಜೆಗಳ ಮೇಲೆ ಲಾಠಿ ಬೀಸಿ ಚದುರಿಸಿದ್ದಾರೆ. ಜೆ.ಸಿ.ನಗರ ಪೊಲೀಸ್ ಠಾಣೆಗೆ ನಾಲ್ಕು ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಯನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಈ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ.
ವಿದೇಶಿ ಪ್ರಜೆ ಲಾಕಪ್ ಡೆತ್?: ಡ್ರಗ್ಸ್ ಜಾಲ ಪ್ರಕರಣದಲ್ಲಿ ಜೆ.ಸಿ. ನಗರ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ವಿದೇಶಿ ಪ್ರಜೆ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಪೊಲೀಸರ ಕಸ್ಟಡಿಯಲ್ಲಿದ್ದ ಈ ವ್ಯಕ್ತಿ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಉತ್ತರ ವಿಭಾಗದ ಡಿಸಿಪಿ ಸ್ಪಷ್ಟನೆ ನೀಡಿದ್ದಾರೆ. ವಿದ್ಯಾರ್ಥಿ ವೀಸಾದಡಿ 2015 ರಲ್ಲಿ ಬೆಂಗಳೂರಿಗೆ ಬಂದಿದ್ದ ಜಾನ್ ಅಲಿಯಸ್ ಜೋಯಲ್ ಶಿದಾನಿ ಮಲು ಮೃತಪಟ್ಟವ. ಈ ಕುರಿತು ಜೆ.ಸಿ ನಗರ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಹೃದಯಾಘಾತದ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸರ ಹಿಂಸೆಯಿಂದಲೇ ಆತ ಮೃತಪಟ್ಟಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಕಾಂಗೋ ಮೂಲದ ಜೋಯಿಲ್ ಎಂಬಾತ ಡ್ರಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದು, ಪೊಲೀಸರ ವಶದಲ್ಲಿದ್ದ ಜಾನ್ಗೆ ಬೆಳಗ್ಗೆ ಹೃದಯಾಘಾತ ಕಾಣಿಸಿಕೊಂಡಿದೆ. ಸಮೀಪದ ಚಿರಾಯು ಆಸ್ಪತ್ರೆಗೆ ದಾಖಲಿಸಿದ್ದು, ಒಂದು ಗಂಟೆ ಚಿಕಿತ್ಸೆ ಬಳಿಕ ಆತ ಮೃತಪಟ್ಟಿದ್ದಾನೆ. ಈ ಕುರಿತು ಕೇಸು ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.
ಆ.1 ರಂದು ಭಾನುವಾರ ಬೆಳಗ್ಗೆ ಬಂಜಾರ ಲೇಔಟ್ ಸಮೀಪದಲ್ಲಿ ಡ್ರಗ್ ಪೆಡ್ಲರ್ ಡ್ರಗ್ ಮಾರಾಟ ಮಾಡುತ್ತಿರುವ ಬಗ್ಗೆ ಜೆಸಿನಗರ ಪಿಎಸ್ಐ ರಘುಪತಿ ಅವರಿಗೆ ಮಾಹಿತಿ ಬಂದಿತ್ತು. ಆ ಪ್ರದೇಶದಲ್ಲಿ ಹೊಯ್ಸಳ ವಾಹನ ಓಡಾಡಿದ್ದರಿಂದ ಜೋನ್ ಜಾಗ ಬದಲಿಸಿ ಬಾಬುಸಾಬ್ ಪಾಳ್ಯದತ್ತ ತೆರಳಿದ್ದ. ಇದೇ ವೇಳೆ ಎಂಡಿಎಂಎ ಡ್ರಗ್ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಆ. 2 ರಂದು ಬೆಳಗಿನ ಜಾವ ಜಾನ್ ಎಂಬಾತನನ್ನು ವಶಕ್ಕೆ ಪಡೆದು ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಂಡಿದ್ದರು.

ಸೋಮವಾರ ಬೆಳಗಿನ ಜಾವ ಐದು ಗಂಟೆ ಸುಮಾರಿನಲ್ಲಿ ಜಾನ್ ತನಗೆ ಎದೆ ನೋವು ಎಂದು ಹೇಳಿಕೊಂಡಿದ್ದು, ಪಿಎಸ್ಐ ರಘುಪತಿ ಅವರಿಗೆ ಈ ಮಾಹಿತಿ ನೀಡಲಾಗಿದೆ. ಸಮೀಪದ ಚಿರಾಯು ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದು ಪ್ರಾಥಮಿಕ ಚಿಕಿತ್ಸೆ ಪಡೆದ ಬಳಿಕ ಜಾನ್ ಸಾವನ್ನಪ್ಪಿರವುದು ದೃಢಪಟ್ಟಿದೆ. 2015 ರಲ್ಲಿ ವಿದೇಶಿ ವಿದ್ಯಾರ್ಥಿ ವೀಸಾ ಮೇಲೆ ಬಂದಿದ್ದ ಜಾನ್ 2017 ರಲ್ಲಿ ವಾಪಸು ಮರಳಬೇಕಿತ್ತು. ಆದರೆ ಇಲ್ಲಿಯೇ ಮಾದಕ ವ್ಯಸನ ಜಾಲದಲ್ಲಿ ಸಿಕ್ಕಿಬಿದ್ದಿದ್ದ. ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಶಿಫಾರಸು ಹಿನ್ನೆಲೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂತು ತನಿಖೆ ನಡೆಸುತ್ತಿದ್ದೇವೆ ಎಂದು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.
ಆಫ್ರಿಕಾ ಪ್ರಜೆಗಳ ಪ್ರತಿಭಟನೆ: ಪೊಲೀಸರ ವಶದಲ್ಲಿ ಜಾನ್ ಮೃತಪಟ್ಟ ಬೆನ್ನಲ್ಲೇ ಆಫ್ರಿಕಾ ಮೂಲದ ಪ್ರಜೆಗಳು ಪ್ರತಿಭಟನೆ ನಡೆಸಿದರು. ನೂರಾರು ಆಫ್ರಿಕನ್ ಪ್ರಜೆಗಳು ಜಮಾಯಿಸಿದ್ದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿತ್ತು. ಈ ವೇಳೆ ಇಬ್ಬರು ಪೊಲೀಸ್ ಪೇದೆಗಳ ಮೇಲೆ ಆಫ್ರಿಕನ್ ಪ್ರಜೆಗಳು ಹಲ್ಲೆಗೆ ಯತ್ನಿಸಿದ್ದು, ಶಾಂತಿಯುತ ಹೋರಟ ಹಿಂಸಾ ರೂಪಕ್ಕೆ ತಿರುಗಿತು. ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದರು ಎಂಬ ಆರೋಪದ ಬೆನ್ನಲ್ಲೇ ಪೊಲೀಸರು ಲಾಠಿ ಬೀಸಿ ಪ್ರತಿಭಟನಾಕಾರರನ್ನು ಚದುರಿಸದರು. ಪೊಲೀಸರು ಲಾಠಿ ಬೀಸುತ್ತಿದ್ದಂತೆ ಆಫ್ರಿಕನ್ ಪ್ರಜೆಗಳೂ ಪರಾರಿಯಾಗಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿತ ವಿದೇಶಿ ಪ್ರಜೆಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನಾ ನಿರತರಿಗೆ ಜಾಗ ಖಾಲಿ ಮಾಡುವಂತೆ ತಿಳಿಸಿದ್ದೇವೆ. ಆದರೆ, ಎಷ್ಟೊತ್ತಾದರೂ ಹೋಗಲಿಲ್ಲ. ಪೊಲೀಸರ ಮೇಲೆ ಹಲ್ಲೆ ಮಾಡಿದ್ದು, ಇದರಿಂದ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಲಾಗುವುದು ಉತ್ತರ ವಿಭಾಗದ ಡಿಸಿಪಿ ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ್ದಾರೆ.
ವಿದೇಶಿ ಡ್ರಗ್ ಪೆಡ್ಲರ್ ಪೊಲೀಸರ ವಶದಲ್ಲಿ ಸಾವನ್ನಪ್ಪಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜೆ. ಸಿ. ನಗರ ಪೊಲೀಸ್ ಠಾಣೆ ಮುಂದೆ ಆಫ್ರಿಕನ್ ದೇಶದ ಪ್ರಜೆಗಳು ಪ್ರತಿಭಟನೆ ನಡೆಸಿದರು. ಪೊಲೀಸರ ಮೇಲೆ ಹಲ್ಲೆ ನಡೆದಿದ್ದು, ಆರೋಪಿತನನ್ನು ಪೊಲೀಸರು ಬಂಧಿಸಿದ್ದಾರೆ#Africa #Bengaluru #DrugPeddler pic.twitter.com/rgZjaxSCk3
— oneindiakannada (@OneindiaKannada) August 2, 2021
Recommended Video
ಸಿಐಡಿ ತನಿಖೆಗೆ ಆಫ್ರಿಕನ್ ಪ್ರಜೆ ಲಾಕಪ್ ಡೆತ್: ಆಫ್ರಿಕನ್ ಪ್ರಜೆ ಲಾಕಪ್ ಡೆತ್ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ಆದೇಶಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾರ್ಗದರ್ಶಿ ಸೂತ್ರದ ಪ್ರಕಾರ ಉನ್ನತ ಮಟ್ಟದ ತನಿಖೆ ನಡೆಯಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications