Darshan Thoogudeepa: 6 ತಿಂಗಳ ನಂತರ ನಟ ದರ್ಶನ್, ಪವಿತ್ರಾ ಗೌಡ ಮುಖಾ-ಮುಖಿ, 17 ಮಂದಿ ಕೋರ್ಟ್ಗೆ..
ಬೆಂಗಳೂರು, ಜನವರಿ 10: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣ ಸಂಬಂಧ ನಟ ದರ್ಶನ್ ತೂಗುದೀಪ್, ನಟಿ ಪವಿತ್ರಾ ಗೌಡ ಸೇರಿದಂತೆ ಎಲ್ಲ 17 ಆರೋಪಿಗಳು ಇಂದು ಶುಕ್ರವಾರ ಬೆಂಗಳೂರಿನ ಸಿಸಿಎಚ್ 57 ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಖುದ್ದು ಎಲ್ಲ ಆರೋಪಿಗಳು ಹಾಜರಾಗಬೇಕೆಂಬ ಸೂಚನೆ ಮೇರೆಗೆ ಕೋರ್ಟ್ಗೆ ಬಂದ ನಟ ದರ್ಶನ್ ಮತ್ತು ಪವಿತ್ರಾ ಗೌಡ. ಕಟಕಟೆಯಲ್ಲಿ ಖುದ್ದು ದರ್ಶನ್ ಮತ್ತು ಪವಿತ್ರಾ ಗೌಡರನ್ನು ನ್ಯಾಯಾಧೀಶರು ಪ್ರಕರಣ ಸಂಬಂಧ ಪ್ರಶ್ನಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ2 ಆರೋಪಿ ನಟ ದರ್ಶನ್ ಅವರು ಮೇಲಿನ ಕೊಲೆ, ಕಿಡ್ನಾಪ್, ಹಲ್ಲೆ ಸೇರಿದಂತೆ ಎಲ್ಲ ಆರೋಪಿಗಳನ್ನು ನ್ಯಾಯಾಧೀಶರು ಕೇಳಲಿದ್ದಾರೆ. ಕೋರ್ಟ್ ಸೂಚನೆ ಮೇರೆಗೆ ನ್ಯಾಯಾಲಯಕ್ಕೆ ಬಂದ ನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರು ಬರೋಬ್ಬರಿ 06 ತಿಂಗಳ ಬಳಿಕ ಮುಖಾ ಮುಖಿ ಆಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿರುವ ಸೆಕ್ಸನ್ ಗಳಡಿ ದಾಖಲಾದ ಆರೋಪಗಳ ಬಗ್ಗೆ ಖದ್ದು ವಿಚಾರಣೆ ನಡೆಸಲಾಗುತ್ತಿದೆ. ಕೋರ್ಟ್ಗೆ ಇಂದು ಎಲ್ಲ ಆರೋಪಿಗಳನ್ನು ಕಟಕಟೆಯಲ್ಲಿ ನಿಲ್ಲಿಸಲಾಗುತ್ತದೆ.
ಚಾರ್ಜ್ ಶೀಟ್ ನಲ್ಲಿ ಹಾಕಲಾದ ಸೆಕ್ಷನ್ ಗಳಡಿ ಆರೋಪಗಳ ಬಗ್ಗೆ ನ್ಯಾಯಾಧೀಶರು ಪ್ರಶ್ನೆ ಮಾಡಲಿದ್ದಾರೆ. ಈ ವೇಳೆ ಖುದ್ದು ಆರೋಪಿಗಳು ತಮ್ಮ ಮೇಲಿನ ಆರೋಪ ಕುರಿತು ಉತ್ತರಿಸುತ್ತಾರೆ. ಪವಿತ್ರಾ ಗೌಡಗೆ, ನಿಮ್ಮ ಮೇಲೆ ಐಪಿಸಿ ಸೆಕ್ಷನ್ 302 ಕೊಲೆ , 364 ಕಿಡ್ನ್ಯಾಪ್ ಮತ್ತು 201 ಅಡಿ ಸಾಕ್ಷಿನಾಶ ಕೇಸ್ ಗಳ ಆರೋಪ ಹೊರಿಸಲಾಗಿದೆ . ಈ ಎಲ್ಲ ಆರೊಪಗಳನ್ನು ನೀವು ಒಪ್ಪಿಕೊಳ್ಳುತ್ತೀರಾ ಎಂಬ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.

ಇದೇ ರೀತಿ ನಟ ದರ್ಶನ್ ಸೇರಿ ಎಲ್ಲ ಆರೋಪಿಗಳು ವಿಚಾರಣೆಯ ಟ್ರಯಲ್ ನಡೆಯಲಿದೆ. ಎಲ್ಲ ಆರೋಪಿಗಳು ತಮ್ಮ ಮೇಲಿನ ಆರೋಪ ಒಪ್ಪಿಕೊಂಡಲ್ಲಿ ಈ ವಿಚಾರಣೆಯ ಟ್ರಯಲ್ ಅವಶ್ಯಕತೆ ಇರುವುದಿಲ್ಲ. ತಮ್ಮ ಮೇಲಿನ ಎಲ್ಲ ಆರೋಪಗಳನ್ನು 17 ಆರೋಪಿಗಳ ಒಪ್ಪಿಕೊಳ್ಳುವ ಕುರಿತು ಕಟಕಟೆಯಲ್ಲಿ ನಿಲ್ಲಿಸಿ ನ್ಯಾಯಾಧೀಶರು ಪ್ರಶ್ನಿಸುತ್ತಾರೆ. ಈ ಸಂಬಂಧ ಎಲ್ಲ ಆರೋಪಿಗಳನ್ನು ಖುದ್ದು ಕೋರ್ಟ್ಗೆ ಪೊಲೀಸರು ಹಾಜರು ಪಡಿಸಿದ್ದಾರೆ.
ದರ್ಶನ್ ನೋಡಿ ಗಳಗಳನೇ ಅತ್ತ ಪವಿತ್ರಾ ಗೌಡ
ನಟ ದರ್ಶನ್ ಮೇಲೆ ಅಪಾರ ಪ್ರೀತಿ ಹೊಂದಿರುವ ನಟಿ ಪವಿತ್ರಾ ಗೌಡ ಇತ್ತೀಚೆಗೆ ಬೇಲ್ ಮೇಲೆ ಹೊರ ಬರುತ್ತಿದ್ದಂತೆ ದರ್ಶನ್ ಹೆಸರಿನಲ್ಲಿ ಪೂಜೆ ನೆರವೇರಿಸಿದ್ದಾರೆ. ಕಳೆದ ಆರೇಳು ತಿಂಗಳೂ ಇಬ್ಬರು ಪ್ರತ್ಯೇಕ ಜೈಲಿನಲ್ಲಿಯೇ ಕಳೆದಿದ್ದಾರೆ. ಪೊಲೀಸ್ ವಿಚಾರಣೆ ಬಳಿಕ ಇಬ್ಬರು ಮುಖಾ ಮುಖಿ ಆಗಿರಲಿಲ್ಲ. ಇದೀಗ ತಿಂಗಳುಗಳ ಬಳಿಕ ಕೋರ್ಟ್ನಲ್ಲಿ ದರ್ಶನ್ ರನ್ನು ನೋಡುತ್ತಿದ್ದಂತೆ ನಟಿ ಪವಿತ್ರಾ ಗೌಡ ಕಣ್ಣೀರು ಹಾಕಿದ್ದಾರೆ. ಕೆಲವು ಕ್ಷಣಗಳ ಕಾಲ ಭಾವುಕರಾಗಿದ್ದಾರೆ.
ಕೋರ್ಟ್ ಆವರಣದಲ್ಲಿ ನಟ ದರ್ಶನ್ ಅನ್ನು ಪವಿತ್ರಾ ಗೌಡ ಮಾತನಾಡಿಲು ಮುಂದಾಗಿದ್ದರು. ಈ ವೇಳೆ ನಟ ದರ್ಶನ್ ಅವರು ಮನಸ್ಸು ಮಾಡಲಿಲ್ಲ ಎನ್ನಲಾಗಿದೆ. ಹೀಗಾಗಿ ನಟಿ ಭಾವುಕರಾದರು ಎಂದು ತಿಳಿದು ಬಂದಿದೆ.
ಫೆಬ್ರವರಿ 25ಕ್ಕೆ ವಿಚಾರಣೆ ಮುಂದೂಡಿಕೆ
ಸಿಸಿಎಚ್ 57 ಕೋರ್ಟ್ ರೇಣುಕಾಸ್ವಾಮಿ ಪ್ರಕರಣದ ಟ್ರಯಲ್ ಅನ್ನು ನ್ಯಾಯಾಧಶರು ಮುಂದಿನ ತಿಂಗಳ ಫೆಬ್ರವರಿ 25ಕ್ಕೆ ಮುಂದೂಡಿದ್ದಾರೆ. ಮುಂದಿನ ದಿನಾಂಕದಿಂದ ಆರೋಪಿಗಳ ಖುದ್ದು ವಿಚಾರಣೆ ನಡೆಯಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications