ಚುನಾವಣೆಯಲ್ಲಿ ಸೋತ ಬಳಿಕ ಡಿ.ಕೆ ರವಿ ಪತ್ನಿ ಕುಸುಮಾ ಎಲ್ಲಿ ಹೋದರು?
ಬೆಂಗಳೂರು, ನವೆಂಬರ್21: ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿಗೆಲ್ಲುವ ಭರವಸೆ ಮೂಡಿಸಿ ಸೋತ ಡಿ.ಕೆ. ರವಿ ಪತ್ನಿ ಕುಸುಮಾ ಅವರು ಈಗ ಎಲ್ಲಿದ್ದಾರೆ ? ಏನು ಮಾಡುತ್ತಿದ್ದಾರೆ ? ಹೀಗೊಂದು ಪ್ರಶ್ನೆ ಪ್ರತಿಯೊಬ್ಬರಲ್ಲೂ ಮೂಡಿದರೂ ಅಚ್ದರಿಯೇನಲ್ಲ. ಡಿ.ಕೆ. ರವಿ ಪತ್ನಿ ಕುಸುಮಾ ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಸೋತ ಬಳಿಕ ಎದೆ ಗುಂದಿಲ್ಲ. ಬದಲಿಗೆ ಒಂದಲ್ಲಾ ಒಂದು ದಿನ ಗೆದ್ದೇ ಗೆಲ್ಲುತ್ತೇನೆ ಎಂಬ ಭರವಸೆಯೊಂದಿಗೆ ಸಮಾಜ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಮತ್ತೊಂದಡೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸಂಘಟಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮದೇ ಆದಂತಹ ನಿರಾತಂಕ ಸ್ವಯಂ ಸೇವಾ ಸಂಸ್ಥೆ ಮೂಲಕ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕುಸುಮಾ ಅವರು ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿ ನಿರತರ ಕನ್ನಡ ಸಮ್ಮೇಳನ ಆಯೋಜಿಸಿ ಯಶಸ್ವಿಗೊಳಿಸಿದ್ದಾರೆ.
ಉಪ ಚುನಾವಣೆ ವೇಳೆ ಬಹುತೇಕ ಕಾರ್ಪೋರೇಟರ್ ಗಳನ್ನು ಹಾಲಿ ಶಾಸಕ ಮನಿರತ್ನಂ ಸೆಳೆದಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಎರಡನೇ ಹಂತದ ನಾಯಕರ ಕೊರತೆ ಎದ್ದು ಕಾಣುತ್ತಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಎರಡನೇ ಹಂತದ ನಾಯಕರನ್ನಾಗಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯ ಯೋಜನೆ ರೂಪಿಸಿರುವ ಕುಸುಮಾ ಕಾರ್ಯಕರ್ತರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ಜತೆ ಜತೆಗೂ ತನ್ನ ಸಮಾಜ ಮುಖಿ ಕಾರ್ಯಗಳನ್ನು ಮುಂದುವರೆಸುತ್ತಿದ್ದಾರೆ. ನ. 14 ಮಕ್ಕಳ ದಿನಾಚರಣೆ ದಿನ ಅನಾಥಾಶ್ರಮಗಳಿಗೆ ಹೋಗಿ ಮಕ್ಕಳ ಜತೆ ಕಾಲ ಕಳೆದಿದ್ದಾರೆ. ಅನ್ನಪೂರ್ಣೇಶ್ವರಿನಗರ ಹಾಗೂ ಜೆ.ಪಿ. ಪಾರ್ಕ್ ಬಳಿಯಿರುವ ಅನಾಥಾಶ್ರಮಗಳಿಗೆ ಭೇಟಿ ನೀಡಿರುವ ಕುಸುಮಾ ಮಕ್ಕಳ ಮುಗ್ಧತೆಯೊಂದಿಗೆ ಕಾಲ ಕಳೆದಿದ್ದಾರೆ.

ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕುಸುಮಾ ಕಾರ್ಯಕರ್ತರ ನಡುವೆ ಸಮಾಲೋಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಚುನಾವಣೆಯಲ್ಲಿ ಸೋತ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಪಕ್ಷದ ಸಂಘಟನೆ, ವಿರೋಧ ಪಕ್ಷವಾಗಿ ಕ್ಷೇತ್ರದಲ್ಲಿ ಕೈಗೊಳ್ಳಬಹುದಾದ ಕಾರ್ಯ ಯೋಜನೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಬಂದಿದ್ದಾರೆ ಎಂಬ ಮಾಹಿತಿಯನ್ನು ಅವರ ಆಪ್ತರು ಹಂಚಿಕೊಂಡಿದ್ದಾರೆ.
ಕೋಲಾರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುವಾಗ ಡಿ.ಕೆ. ರವಿ ಇಡೀ ರಾಜ್ಯಕ್ಕೆ ಪರಿಚಿತರಾಗಿದ್ದರು. ಅವರ ಆತ್ಮಹತ್ಯೆಯ ಬಳಿಕ ನೊಂದಿದ್ದ ಕುಸುಮಾ ಅವರು ಅದರ ನೋವಿನಿಂದ ಬಂದಿರಲಿಲ್ಲ. ಪತಿಯನ್ನು ಕಳೆದುಕೊಂಡು ನಾನಾ ಆರೋಪಗಳನ್ನು ಎದುರಿಸಬೇಕಾಯಿತು ಹೆಚ್ಚಿನ ವ್ಯಾಸಂಗಕ್ಕೆ ವಿದೇಶಕ್ಕೆ ತೆರಳಿ ಸ್ನಾತಕೋತ್ತರ ಪದವಿ ಮುಗಿಸಿ ವಾಪಸು ಬಂದಿದ್ದರು.
ಕಾಲೇಜಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕುಸುಮಾ ಅವರು ಅನಿರೀಕ್ಷತವಾಗಿ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ರಾಜಕೀಯ ಭವಿಷ್ಯದ ಪರೀಕ್ಷೆಗೆ ಇಳಿದಿದ್ದರು. ಆದರೆ ಚುನಾವಣೆ ಫಲಿತಾಂಶ ನಿರೀಕ್ಷೆ ಹುಸಿ ಮಾಡಿತ್ತು. ಬದುಕಿನಲ್ಲಿ ಸೋಲುಂಡ ಕುಸುಮ ಅವರ ರಾಜಕೀಯ ಅದೃಷ್ಟ ಕೂಡ ಕೈಕೊಟ್ಟಿತ್ತು. ಸೋಲಿಗೆ ಶರಣಾಗದೇ ರಾಜಕೀಯದಲ್ಲಿಯೇ ಯಶಸ್ವು ಗಳಿಸುವ ನಿಟ್ಟಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications