ಧ್ವಜವಾಯ್ತು, ಈಗ ಬೆಂಗಳೂರಿನಲ್ಲಿ ನಾಡದೇವತೆ ವಿಗ್ರಹ ಸ್ಥಾಪನೆಗೆ ಚಿಂತನೆ
ಬೆಂಗಳೂರು, ಆಗಸ್ಟ್ 10: ಪ್ರತ್ಯೇಕ ಕರ್ನಾಟಕ ಧ್ವಜ, ಕನ್ನಡ ಫಲಕ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ಶಾಲೆಗಳಲ್ಲಿ ಕನ್ನಡ ಕಡ್ಡಾಯ.. ಇದೀಗ ನಾಡದೇವತೆ ಭುವನೇಶ್ವರಿ ಪ್ರತಿಮೆ.
ಕನ್ನಡ ಮಂತ್ರ ಪಠಣೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಧಾನಿ ಬೆಂಗಳೂರಿನಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮಾಡಲು ಮುಂದಾಗಿದ್ದಾರೆ. ಇದಕ್ಕಾಗಿ ಸದ್ಯದಲ್ಲೇ ಸಮಿತಿಯೊಂದನ್ನು ರಚನೆ ಮಾಡಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಈ ಸಮಿತಿ ನೀಡುವ ವರದಿಯ ಮೇಲೆ ಭುವನೇಶ್ವರಿ ವಿಗ್ರಹ ಪ್ರತಿಷ್ಠಾಪನೆಯ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆಯಂತೆ.
ಇದೇ ಡಿಸೆಂಬರ್ ನಲ್ಲಿ ದಾವಣಗೆರೆಯಲ್ಲಿ ಮೂರನೇ ವಿಶ್ವಕನ್ನಡ ಸಮ್ಮೇಳನ ನಡೆಯಲಿದೆ. ಇದಕ್ಕೂ ಮೊದಲು ಬೆಂಗಳೂರಿನಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆಯಾಗಬೇಕು ಎಂದು ಕರ್ನಾಟಕ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಜಿ.ಎಸ್.ಸಿದ್ದಲಿಂಗಯ್ಯ, ಗೊ. ರು. ಚನ್ನಬಸಪ್ಪ , ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ, ಸಾಹಿತಿ ಚಂಪಾ, ಶೇಷಗಿರಿರಾವ್ ಸೇರಿದಂತೆ ಅನೇಕರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರು. ಈ ಮನವಿ ಮೇರೆಗೆ ಪ್ರತಿಮೆ ಪ್ರತಿಷ್ಠಾಪನೆ ವಿಚಾರವನ್ನು ಸಿದ್ದರಾಮಯ್ಯ ಪರಿಶೀಲನೆಗೆ ತೆಗೆದುಕೊಂಡಿದ್ದಾರೆ.
ಇನ್ನು ಈ ಹಿಂದೆ ಬಿಎಸ್ ಯಡಿಯೂರಪ್ಪ ಸರಕಾರ ಬೆಂಗಳೂರಿನಲ್ಲಿ ನಾಡದೇವತೆ ಪ್ರತಿಮೆ ಸ್ಥಾನಪನೆಗೆ 25 ಕೋಟಿ ಮೀಸಲಿಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್












Click it and Unblock the Notifications