ಸೋತ ಮೇಲೆ ಭತ್ಯೆ ಬೇಕೆಂದು ಸರ್ಕಾರಕ್ಕೆ ಮೊರೆ ಹೋದ ರಾಯರೆಡ್ಡಿ
ಬೆಂಗಳೂರು, ಜು.27: ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಬಸವರಾಜ ರಾಯರೆಡ್ಡಿ ಇತ್ತೀಚೆಗೆ ವಿಧಾನಸಭೆ ಚುನಾವಣೆಯಲ್ಲಿ ಯಲಬುರ್ಗಾ ಕ್ಷೇತ್ರದಿಂದ ಸೋಲನ್ನು ಅನುಭವಿಸಿದ್ದರು.
ಕೆಟ್ಟ ಮೇಲೆ ಬುದ್ಧಿಬಂತು ಎನ್ನುವಂತೆ ಸೋತ ಮೇಲೆ 5 ವರ್ಷಗಳ ಕಾಲ ಸರ್ಕಾರದಿಂದ ಪಡೆಯದೆ ಇರುವ ಶಾಸಕರ ಭತ್ಯೆಯನ್ನು ಈಗ ಬೇಕೆಂದು ಸರ್ಕಾರದ ಮೊರೆ ಹೋಗಿ ಅಚ್ಚರಿಯನ್ನು ಮೂಡಿಸಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮ ಹಿನ್ನೆಲೆಯಲ್ಲಿ ಭ್ರಮನಿರಸಗೊಂಡಿರುವ ಅವರು ಸ್ವಯಂಪ್ರೇರಣೆಯಿಂದ ಪಾಲನೆ ಮಾಡಲು ಹೊರಟಿದ್ದ ಆದರ್ಶಕ್ಕೆ ತಿಲಾಂಜಲಿ ಇಡಲು ನಿರ್ಧರಿಸಿದ್ದು ಈ ವರ್ತನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಸಚಿವರಾಗಿದ್ದಾಗ ಸರ್ಕಾರಿ ವಸತಿ ಪಡೆಯದೇ ಸ್ವಂತ ಮನೆಯಲ್ಲಿದ್ದ ಅವರು ಮಾಸಿಕ ಬಾಡಿಗೆ 1 ಲಕ್ಷ ರೂ. ಭತ್ಯೆ ಪಡೆದಿರಲಿಲ್ಲ. 23 ತಿಂಗಳುಗಳ ಕಾಲ ಮನೆ ಬಾಡಿಗೆ ಮೊತ್ತ, ಇತರೆ ಭತ್ಯೆ ಹಾಗೂ ವೇತನ ಮೊತ್ತ 50 ಲಕ್ಷವಾಗಲಿದ್ದು, ಶಾಸಕರ ಭತ್ಯೆ ಪ್ರತ್ಯೇಕಗಾವಿದೆ. ಇವೆಲ್ಲವನ್ನೂ ಒಟ್ಟಿಗೆ ಸೇರಿಸಿ ಒಟ್ಟಿಗೆ ದೊಡ್ಡ ಮೊತ್ತವೇ ಕೈ ಸೇರಲಿದೆ.

ಆಡಳಿತ ಸುಧಾರಣೆ ಇಲಾಖೆಗೆ ರಾಯರೆಡ್ಡಿ ಬರೆದ ಪತ್ರವನ್ನು ಈಗಘಾಲೇ ಹಣಕಾಸು ಇಲಾಖೆಗೆ ರವಾನೆ ಮಾಡಲಾಗಿದೆ. ಆದರೆ ಶಾಸನ ಸಭೆಯ ನಡಾವಳಿಯೊಂದು ಬಾಕಿ ಭತ್ಯೆ ಪಡೆಯುವುದಕ್ಕೆ ಅಡ್ಡಿಯಾಗಿ ಪರಿಣಮಿಸುವ ಸಾಧ್ಯತೆ ಇದೆ. ಹಣಕಾಸು ಇಲಾಖೆಯಿಂದ ಸ್ಪೀಕರ್ ಕಚೇರಿಗೆ ಕಳಹಿಸಿರುವ ಪತ್ರದಲ್ಲೂ ಇದನ್ನು ಉಲ್ಲೇಖಿಸಲಾಗಿದೆ.
-
Ramayana: ಯಶ್ ‘ರಾಮಾಯಣ’ಕ್ಕೆ 700 ಕೋಟಿ ರೂಪಾಯಿ ಆಫರ್ ತಿರಸ್ಕರಿಸಿದ ನಿರ್ಮಾಪಕ, 1000 ಕೋಟಿ ರೂ.ಗೆ ಪಟ್ಟು -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications