Bengaluru Parking: ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್ನಲ್ಲಿ ಸ್ಮಾರ್ಟ್ ಪಾರ್ಕಿಂಗ್ ವೈಫಲ್ಯದ ಬಳಿಕ ಹೊಸ ಪಾರ್ಕಿಂಗ್ ವ್ಯವಸ್ಥೆ
ಬೆಂಗಳೂರು, ಏಪ್ರಿಲ್. 24: ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ (CBD) ನಲ್ಲಿ ಸ್ಮಾರ್ಟ್ ಪಾರ್ಕಿಂಗ್ ವಿಫಲವಾದ ನಂತರ, ಮತ್ತೆ ಪೇ ಅಂಡ್ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ಬಂದಿದೆ. ಆದರೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಗೆ ಈ ಹೊಸ ಬೆಳವಣಿಗೆಯ ಬಗ್ಗೆ ಮಾಹಿತಿಯೇ ಇಲ್ಲ ಎಂಬುದೇ ಅಚ್ಚರಿಯಾಗಿದೆ.
ನಗರದ ಪ್ರಮುಖ ರಸ್ತೆಗಳಾದ ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್, ಲ್ಯಾವೆಲ್ಲೆ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಂತಹ ಪ್ರಮುಖ ಪ್ರದೇಶಗಳನ್ನು ಒಳಗೊಂಡಿರುವ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ (CBD) ಪ್ರದೇಶಕ್ಕೆ ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. ಸಾಕಷ್ಟು ಪಾರ್ಕಿಂಗ್ ಸೇವೆಗಳಿಲ್ಲದಿದ್ದರೇ ಇಲ್ಲಿ ಜನ ಪರದಾಡುತ್ತಾರೆ. ಹೀಗಾಗಿ ಹಲವು ತಿಂಗಳುಗಳಿಂದ ಕೇಂದ್ರೀಯ ಪಾರ್ಕಿಂಗ್ ವ್ಯವಸ್ಥೆ (ಸಿಪಿಎಸ್) ನಡೆಸುತ್ತಿರುವ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಯು ಕಾರ್ಯನಿರ್ವಹಿಸುತ್ತಿಲ್ಲ. ಈಗ ಹೊಸ ವ್ಯವಸ್ಥೆ ಜಾರಿಗೆ ತಂದಿದೆ.

ವರ್ಕ್ ಆಗದ ಸ್ಮಾರ್ಟ್ ಪಾರ್ಕಿಂಗ್
ಕೇಂದ್ರ ವಾಣಿಜ್ಯ ಪ್ರದೇಶದಲ್ಲಿ (ಸಿಬಿಡಿ) ಆರು ವರ್ಷಗಳ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಬಳಿಕ, ಹಳೆಯ ಶೈಲಿಯಲ್ಲಿ ಪೇ ಅಂಡ್ ಪಾರ್ಕ್ ವ್ಯವಸ್ಥೆಯನ್ನು ಮತ್ತೆ ಪ್ರಾರಂಭಿಸಲಾಗಿದೆ. ಪಾರ್ಕಿಂಗ್ ಸ್ಥಳ ನಿರ್ವಾಹಕರು ಪ್ರತ್ಯೇಕವಾಗಿ ಸೀಮಿತ ಅವಧಿಗೆ ದ್ವಿಚಕ್ರ ವಾಹನಗಳಿಗೆ ಗಂಟೆಗೆ 15 ರೂ. ಮತ್ತು ಕಾರುಗಳಿಗೆ ಗಂಟೆಗೆ 30 ರೂಪಾಯಿ ವಿಧಿಸುತ್ತಿದ್ದಾರೆ.
'BBMP Pay and Park' ಎಂಬ ಹೆಸರಿನಲ್ಲಿ ಸೇವೆಗಳನ್ನು ನಿರ್ವಹಿಸಲಾಗುತ್ತಿದೆ. ಪಾರ್ಕಿಂಗ್ ಟಿಕೆಟ್ಗಳಲ್ಲಿಯೂ 'ಬಿಬಿಎಂಪಿ ಪೇ ಮತ್ತು ಪಾರ್ಕ್' ಎಂಬ ಹೆಸರಿದೆ. ಆದರೆ, ಬಿಬಿಎಂಪಿ ಅಧಿಕಾರಿಗಳಿಗೆ ಈ ಪರಿಸ್ಥಿತಿಯ ಅರಿವಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಬಿಬಿಎಂಪಿ ಪೂರ್ವದ ಇಂಜಿನಿಯರಿಂಗ್ ವಿಭಾಗ ಮತ್ತು ಟಿಇಸಿ ವಿಭಾಗವು ಯಾವುದೇ ಅನುಮತಿ ನೀಡಲು ನಿರಾಕರಿಸಿದೆ.

ಸ್ಮಾರ್ಟ್ ಪಾರ್ಕಿಂಗ್ ಸ್ಥಗಿತವಾಗಿದ್ದು ಏಕೆ?
ಬಿಬಿಎಂಪಿ ಅಧಿಕಾರಿಗಳ ಪ್ರಕಾರ, ಗುತ್ತಿಗೆದಾರರು ಬಿಬಿಎಂಪಿಗೆ ಬಾಕಿ ಪಾವತಿಸದ ಕಾರಣ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಸ್ಥಗಿತಗೊಂಡಿದೆ. "ನಾವು ಎಂಟು ರಸ್ತೆಗಳಲ್ಲಿ ಸೆಂಟ್ರಲ್ ಪಾರ್ಕಿಂಗ್ ಸಿಸ್ಟಮ್ಗೆ ಗುತ್ತಿಗೆ ನೀಡಿದ್ದೇವೆ. ಆದರೆ, ಕಳೆದ 1.5 ವರ್ಷಗಳಿಂದ ಅವರು ಯಾವುದೇ ಬಾಕಿ ಪಾವತಿಸಿಲ್ಲ. ಅಂದಾಜಿನ ಪ್ರಕಾರ, ಗುತ್ತಿಗೆದಾರನಿಗೆ ತಿಂಗಳಿಗೆ 6 ರಿಂದ 7 ಲಕ್ಷ ಬಾಕಿ ಇದೆ. ಪಾರ್ಕಿಂಗ್ ವ್ಯವಸ್ಥೆಯು ಅವರಿಗೆ ಯಾವುದೇ ಆದಾಯವನ್ನು ನೀಡುತ್ತಿಲ್ಲ, ಏಕೆಂದರೆ ಗುತ್ತಿಗೆದಾರನು 35 ಲಕ್ಷ ರೂಪಾಯಿಗಳನ್ನು ಭಾಗಶಃ ಪಾವತಿಸಿದ ಕಾರಣ ನಾವು ಒಪ್ಪಂದವನ್ನು ರದ್ದುಗೊಳಿಸಿಲ್ಲ" ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications