ತೇಜಸ್ವಿ ಸೂರ್ಯ ಅಭ್ಯರ್ಥಿ ಆದ ಮೇಲೆ ಪಾನಿಪೂರಿ ಕುಮಾರ್ ಫೇಮಸ್
ಬೆಂಗಳೂರು, ಮಾರ್ಚ್ 27: ಸೋಮವಾರ ರಾತ್ರಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಅವರ ಹೆಸರನ್ನು ಘೋಷಿಸಲಾಯಿತು. ಅದೇ ಸಮಯಕ್ಕೆ ಈ ತಳ್ಳುಗಾಡಿಯ ಪಾನಿಪೂರಿ ಮಾರಾಟಗಾರ ಎಚ್.ಆರ್. ಕುಮಾರ್ ಕೂಡ ಪ್ರಸಿದ್ಧಿಗೆ ಬಂದಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಅಂದ ಹಾಗೆ ಈ ಕುಮಾರ್ ತಳ್ಳುಗಾಡಿಯಲ್ಲಿ ಪಾನಿಪೂರಿ ಮಾರಾಟ ಮಾಡುವುದು ಬೆಂಗಳೂರಿನಲ್ಲಿನ ಗಿರಿನಗರದಲ್ಲಿರುವ ತೇಜಸ್ವಿ ಸೂರ್ಯ ಅವರ ಮನೆಗೆ ಬಹಳ ಹತ್ತಿರದಲ್ಲಿ. ಕಳೆದ ಮೂವತ್ತು ವರ್ಷಗಳಿಂದ ಇದೇ ವ್ಯಾಪಾರ ಮಾಡಿಕೊಂಡಿರುವ ಕುಮಾರ್ ಅವರಿಗೆ ದಿಢೀರನೇ ಖ್ಯಾತಿ ಹುಡುಕಿಕೊಂಡು ಬಂದಿದೆ.
Pani Puri at Girinagar Circle is a must try. If you happen to pass by this circle, stop and have two plates minimum! pic.twitter.com/whn1YjzIF9
— Chowkidar Tejasvi Surya (@Tejasvi_Surya) 25 March 2019
ಗಿರಿನಗರ್ ಸರ್ಕಲ್ ನಲ್ಲಿರುವ ಪಾನಿಪೂರಿ ನೀವು ಖಂಡಿತಾ ಒಂದು ಸಲ ಪ್ರಯತ್ನ ಪಡಬೇಕು. ನೀವು ಈ ಕಡೆಯಿಂದ ಹೋಗುವುದಾದರೆ ಈ ಸರ್ಕಲ್ ನಲ್ಲಿ ನಿಂತು, ಕನಿಷ್ಠ ಎರಡು ಪ್ಲೇಟ್ ಪಾನಿಪೂರಿ ತಿನ್ನಿ ಎಂದು ತೆಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ಅದು ಏನು ಗೊತ್ತಾ? ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ಕೆಲವೇ ಗಂಟೆಗಳ ಮುಂಚೆ.

ತಮ್ಮ ಸ್ನೇಹಿತರ ಜತೆಗೂಡಿ ಪಾನಿಪೂರಿ ತಿನ್ನುತ್ತಿರುವ ಫೋಟೋ ಕೂಡ ಅಪ್ ಲೋಡ್ ಮಾಡಿದ್ದರು. ಅದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇಡೀ ದಿನ ಕುಮಾರ್ ಅವರ ಬಳಿ ಬಂದು, ಪಾನಿ ಪೂರಿ ತಿಂದು ಹೋದ ಗ್ರಾಹಕರು, ಜತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಅಪ್ ಲೋಡ್ ಮಾಡುತ್ತಿದ್ದಾರೆ.
ಅವರಿಗೆ ಒಳ್ಳೆ ಆಲೋಚನೆ, ಯೋಜನೆ ಇದೆ. ನಮ್ಮ ಬದುಕು ಬದಲಾಗುತ್ತದೆ. ಚಿಕ್ಕ ವಯಸ್ಸಿನಿಂದ ಸೂರ್ಯ ಅವರು ಇಲ್ಲಿಗೆ ಬರುತ್ತಿದ್ದಾರೆ. ವಾರಾಂತ್ಯಗಳಲ್ಲಿ ಸ್ನೇಹಿತರ ಜತೆ ಬರುತ್ತಿದ್ದರು. ಅದೇ ರೀತಿ ಮೊನ್ನೆ ಕೂಡ ಸ್ನೇಹಿತರ ಜತೆ ಬಂದಿದ್ದರು. ಆದರೆ ಅವರು ಯಾವತ್ತೂ ರಾಜಕಾರಣ ಮಾತನಾಡಿದವರಲ್ಲ. ಅವರು ಅಭ್ಯರ್ಥಿ ಅನ್ನೋದು ನನಗೆ ಗೊತ್ತಾಗಿದ್ದೇ ತಡವಾಗಿ. ಟ್ವಿಟ್ಟರ್ ನಲ್ಲಿ ಹಾಕಿದ ಫೋಟೋ ನನ್ನದೇನಾ ಎಂದು ಬಹಳ ಜನ ಕೇಳಿದ ಮೇಲೆ ಎನ್ನುತ್ತಾರೆ ಕುಮಾರ್.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications