ಕೊರೊನಾ ನಡುವೆಯು, ಕರ್ನಾಟಕ ಗಾಲ್ಫ್ ಅಸೋಸಿಯೇಷನ್ನಲ್ಲಿ ವಯಸ್ಸಿಗೆ ಯಾವುದೇ ಮಿತಿಯಿಲ್ಲ!
ಕೊರೊನಾವೈರಸ್ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಎಲ್ಲೆಡೆ ಕಟ್ಟೆಚ್ಚರದಿಂದಲೇ ಕಾರ್ಯ ನಿರ್ವಹಿಸಲಾಗುತ್ತಿದೆ. ಆದರೆ ಕರ್ನಾಟಕ ಗಾಲ್ಫ್ ಅಸೋಸಿಯೇಷನ್ ಹಿರಿಯ ನಾಗರೀಕರಿಗೂ ತನ್ನಲ್ಲಿ ಪ್ರವೇಶಕ್ಕೆ ಅನುವು ಮಾಡಿಕೊಟ್ಟು ಸುರಕ್ಷತೆಯನ್ನು ಮರೆತು ಬಿಟ್ಟಿದೆಯೇ? ಎಂಬ ಪ್ರಶ್ನೆ ಎದುರಾಗಿದೆ.
Recommended Video
ಕರ್ನಾಟಕ ಗಾಲ್ಫ್ ಅಸೋಸಿಯೇಷನ್ನಲ್ಲಿ ವಯಸ್ಸಿಗೆ ಯಾವುದೇ ಮಿತಿಯಿಲ್ಲದೆ ಎಲ್ಲರಿಗೂ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದೆ.
ಕೋವಿಡ್ -19 ರ ಸಮಯದಲ್ಲಿ ಹಿರಿಯ ನಾಗರಿಕರ ರಕ್ಷಣೆಗಾಗಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಏಪ್ರಿಲ್ 13 ರಂದು ಸಲಹೆ ನೀಡಿತ್ತು. ಉದ್ಯಾನವನಗಳು, ಮಾರುಕಟ್ಟೆಗಳು ಮತ್ತು ಧಾರ್ಮಿಕ ಸ್ಥಳಗಳಂತಹ ಕಿಕ್ಕಿರಿದ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸುವಂತೆ ಹಿರಿಯ ನಾಗರಿಕರಿಗೆ ಸೂಚಿಸಿದೆ. ವಾಡಿಕೆಯ ತಪಾಸಣೆಗಾಗಿ ಅಥವಾ ಅನುಸರಣೆಗೆ ಆಸ್ಪತ್ರೆಗೆ ಹೋಗದಂತೆ ಅವರಿಗೆ ಸೂಚಿಸಿದೆ.

ಆದರೆ ಕೆಜಿಎಯಿಂದ ಅದರ ಸದಸ್ಯರಿಗೆ ಬಂದಿರುವ ಸಂದೇಶವು ಆಶ್ಚರ್ಯ ಮೂಡಿಸುತ್ತದೆ ''ನಮ್ಮ ಆತ್ಮೀಯ ಗಾಲ್ಫಿಂಗ್ ಸದಸ್ಯರನ್ನು ಮರಳಿ ಸ್ವಾಗತಿಸಲು ಇದು ನಮಗೆ ಅಪಾರ ಸಂತೋಷವನ್ನು ನೀಡುತ್ತದೆ. 65+ ವಯಸ್ಸಿನ ವರ್ಗಕ್ಕೆ ಯಾವುದೇ ನಿರ್ಬಂಧಗಳಿಲ್ಲ. ಮರಳಿ ಸ್ವಾಗತ '' ಎಂದು ಇಮೇಲ್ನಲ್ಲಿ ಕೆಜಿಎ ಕಾರ್ಯದರ್ಶಿ ಪೃಥ್ವಿರಾಜ್ ಅರಸ್ ಬರೆದಿದ್ದಾರೆ.
ಬೆಂಗಳೂರು ಗಾಲ್ಫ್ ಕ್ಲಬ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ 65 ವರ್ಷಕ್ಕಿಂತ ಮೇಲ್ಪಟ್ಟ ತನ್ನ ಸದಸ್ಯರಿಗೆ ಕಳೆದ ವಾರವೇ ಸೌಲಭ್ಯಗಳನ್ನು ಬಳಸಲು ಅವಕಾಶ ಮಾಡಿಕೊಟ್ಟಿದೆ ಎಂದು ತಿಳಿದುಬಂದಿದೆ. "ಕೆಜಿಎ ಸೋಮವಾರದಿಂದ ಸದಸ್ಯರಿಗೆ ಸೌಲಭ್ಯಗಳನ್ನು ಬಳಸಲು ಅವಕಾಶ ನೀಡುತ್ತಿದೆ ಎಂದು ಸದಸ್ಯರೊಬ್ಬರು ಹೇಳಿದ್ದಾರೆ.
ಕೆಜಿಎ ಅಧಿಕಾರಿಗಳಿಂದ ಅನುಮತಿ ಪಡೆದಿದೆ ಎಂದು ಅರಸ್ ಬೆಂಗಳೂರು ಮಿರರ್ಗೆ ತಿಳಿಸಿದರು. "ಅಧಿಕಾರಿಗಳಿಂದ ಅನುಮತಿ ಪಡೆದ ನಂತರ ನಾವು ಸದಸ್ಯರಿಗೆ ಗಾಲ್ಫ್ ಕೋರ್ಸ್ ಬಳಸಲು ಅವಕಾಶ ನೀಡಿದ್ದೇವೆ," ಎಂದು ಅವರು ಹೇಳಿದರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications