Bengaluru Agriculture Fair 2023: ನಾಳೆ ನ.17ರಂದು ಕೃಷಿ ಮೇಳಕ್ಕೆ ಸಿಎಂ ಚಾಲನೆ, ಏನೇನಿರಲಿದೆ, ವಿಶೇಷತೆಗಳೇನು ತಿಳಿಯಿರಿ
ಬೆಂಗಳೂರು, ನವೆಂಬರ್ 16: ರಾಜಧಾನಿ ಬೆಂಗಳೂರಿನ ಸುತ್ತಲಿನ ಹಾಗೂ ರಾಜ್ಯದ ರೈತರು ಕಾತರದಿಂದ ಕಾಯುತ್ತಿರುವ ಹೆಬ್ಬಾಳದ ಜಿಕೆವಿಕೆಯಲ್ಲಿ 'ಕೃಷಿ ಮೇಳ' ನಾಳೆ ನವೆಂಬರ್ 17ರಿಂದ 20ರವರೆಗೆ ನಡೆಯಲಿದೆ. ಈ ಭಾರಿ ಆಹಾರ-ಆರೋಗ್ಯ-ಆದಾಯಕ್ಕಾಗಿ ಸಿರಿಧಾನ್ಯಗಳು' ಎಂಬ ಘೋಷವಾಕ್ಯದಡಿ ಅದ್ಧೂರಿಯಾಗಿ ಕೃಷಿ ಮೇಳಕ್ಕೆ ಚಾಲನೆ ದೊರೆಯಲಿದೆ.
ಈ ಕೃಷಿ ಮೇಳದಲ್ಲಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರು (ಜಿಕೆವಿಕೆ) ಈ ಐದು ಹೊಸ ತಳಿಗಳನ್ನು ಬಿಡುಗಡೆ ಮಾಡಲಿದೆ. ಜತೆಗೆ ಕೃಷಿಯಲ್ಲಿ ಸಾಧನೆ ಮಾಡಿದ ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಸಾಧಕರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ವಿ.ಸುರೇಶ ಮಾಹಿತಿ ನೀಡಿದರು.

ಇದೆ ನವೆಂಬರ್ 17ರಂದು ಬೆಳಗ್ಗೆ 11ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಕೆವಿಕೆ ಆವರಣದಲ್ಲಿ ಕೃಷಿ ಮೇಳವನ್ನು ಉದ್ಘಾಟಿಸಲಿದ್ದಾರೆ. ಲಕ್ಷಾಂತರ ಜನರು, ರೈತರು ಆಗಮಿಸಲಿದ್ದಾರೆ. ಕೃಷಿ ಮೇಳದಲ್ಲಿ ಕ್ಷೇತ್ರ ಸಂದರ್ಶನ, ತಜ್ಞರೊಂದಿಗೆ ಚರ್ಚೆ, ವಸ್ತು ಪ್ರದರ್ಶನಗಳನ್ನು ಕೃಷಿ ಮೇಳವು ಒಳಗೊಂಡಿರಲಿದೆ. ವಸ್ತು ಪ್ರದರ್ಶನದಲ್ಲಿ 625 ಮಳಿಗೆಗಳು ಇರಲಿವೆ. ರೈತರು ಇಲ್ಲಿ ಅಗತ್ಯ ಮಾಹಿತಿ, ಕೃಷಿ ಕುರಿತು ಸಲಹೆಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದರು.
ವಿವಿಧ ತಳಿ ಬೀಜ, ಸಸಿಗಳು, ಉತ್ಪನ್ನ ಮಾರುಕಟ್ಟೆಗೆ
ಮುಖ್ಯವಾಗಿ ಅಧಿಕ ಇಳುವರಿಯ ತಳಿಗಳು ಮೇಳದಲ್ಲಿ ಬಿಡುಗಡೆ ಆಗಲಿವೆ. ಕಡಿಮೆ ಅವಧಿಯಲ್ಲಿ ಹೆಚ್ಚು ಇಳುವರಿ ನೀಡುವ ಎಂಎಲ್-322 ರಾಗಿ ತಳಿ, ಜಿಪಿಯುಎಲ್-11ಸಾಮೆ, ಜಿಪಿಯುಪಿ-32 ಬರಗು, ಕೆಬಿಎಸ್ಎಚ್-85 ಸೂರ್ಯಕಾಂತಿ ಹಾಗೂ ಹಾಗೂ ಪ್ರಕಟಣೆ ಜಿಕೆವಿಕೆ, ಕೆಂಪು ಹಲಸಿನ ನೂತನ ತಳಿಗಳನ್ನು ಲೋಕಾರ್ಪಣೆ ಆಗಲಿವೆ.
ರಾಜ್ಯದಲ್ಲಿ ಈಗಾದಂತೆ ಬರಗಾಲ ಉಂಟಾಗಿ ಮಳೆ ನೀರು ಸಿಗದಿದ್ದರೆ ಹೇಗೆ ಬೆಳೆ ಬೆಳೆಯಬೇಕು ಎಂಬ ಬಗ್ಗೆ ತಿಳಿಸಲಾಗುವುದು. ಅದಕ್ಕು ಮೊದಲು ಕಡಿಮೆ ನೀರನ್ನು ಬಯಸುವ ಬೆಳೆಗಳ ಬಿತ್ತನೆ ಬೀಜವನ್ನು ಇದೇ ಮೊದಲ ಬಾರಿಗೆ ಮಾರುಕಟ್ಟೆಗೆ ಪರಿಯಚಯಿಸಲಾಗುವುದು. ಈ ಬಗ್ಗೆ ರೈತರಿಗೆ ಸ್ಥಳದಲ್ಲಿಯೇ ಮಾಹಿತಿ ನೀಡಲಾಗುವುದು.
ಪ್ರಾತ್ಯಕ್ಷಿಕೆ, ಯಂತ್ರೋಪಕರಣ ಲಭ್ಯ
ಮೇಳದಲ್ಲಿ ಸಮಗ್ರ ಬೇಸಾಯ ಪದ್ಧತಿ, ಬೆಳೆ ಪದ್ಧತಿ, ಹನಿ ಮತ್ತು ತುಂತುರು ನೀರಾವರಿ, ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾರುಕಟ್ಟೆ ನೈಪುಣ್ಯತೆ, ರೈತರ ಸಮಸ್ಯೆಗಳಿಗೆ ತಜ್ಞರಿಂದ ಸಲಹೆ ನೀಡಲಾಗುತ್ತಿದೆ. ಕೃಷಿ ಪರಿಕರಗಳು ಮತ್ತು ಪ್ರಕಟಣೆಗಳ ಮಾರಾಟಕ್ಕೂವ್ಯವಸ್ಥೆ ಕಲ್ಪಿಸಲಾಗಿದೆ. ಬಾಟಲ್ ಬದನೆ, ಅಲಂಕಾರಿಕ ಇದೇ ಸೂರ್ಯಕಾಂತಿ ಮತ್ತಿತರ ವಿದೇಶಿ ತಳಿಯ ಸಸ್ಯಗಳ ಪ್ರಾತ್ಯಕ್ಷಿಕೆಯನ್ನು ರೈತರು ನೋಡಬಹುದು ಎಂದು ಅವರು ವಿವರಿಸಿದರು.
ಹೋರಿ ಸೇರಿ ವಿವಿಧ ಪ್ರಾಣಿಗಳು ಮೇಳದ ಆಕರ್ಷಣೆ
ಹೊಸ ಹೊಸ ತಳಿ ಸಸಿಗಳು, ಬೀಜಗಳ ಬಳಕೆ, ಪರಿಚಯದ ಜೊತೆಗೆ ಕೀಟನಾಶಕ, ಬಿತ್ತನೆ ಬೀಜ, ರಸಗೊಬ್ಬರ, ಆತ್ಯಾಧುನಿಕ ಸಲಕರಣೆ ಖರೀಸಬಹುದಾಗಿದೆ. ಮೇಳದಲ್ಲಿ ಮುಖ್ಯವಾಗಿ ಪ್ರಾಣಿ ಪಕ್ಷಗಳು ರೈತರನ್ನು, ಸಾರ್ವಜನಿಕರನ್ನು ಆಕರ್ಷಿಸಲಿವೆ. ಡಾರ್ಪರ್, ಬನ್ನೂರು ಸೇರಿದಂತೆ ವಿವಿಧ ಕುರಿ ತಳಿ, ವಿವಿಧ ಜಾತಿಯ ಹೋರಿ (ಎತ್ತು) ಗಳು ಇರುತ್ತವೆ. ದೊಡ್ಡ ರೈತರಿಂದ ಹಿಡಿದು ಸಣ್ಣ ಹಿಡುವಳಿದಾರರಿಗೂ ಕೃಷಿ ಮೇಳದಲ್ಲಿ ಅಗತ್ಯ ಮಾಹಿತಿಗಳು, ಸಲಹೆಗಳು ಸಿಗಲಿವೆ.
-
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications