ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ಗೆ ತಂದವರು ಯಾರು? ಅವರೇ ಹೇಳಿದ್ದಾರೆ ನೋಡಿ
ಬೆಂಗಳೂರು, ಆಗಸ್ಟ್ 20: ಗೆಳೆಯ ವಿಶ್ವನಾಥ್ಗೆ ಮೋಸ ಮಾಡಿದರು ಎಂಬುದು ಸಿದ್ದರಾಮಯ್ಯ ಅವರ ಮೇಲಿರುವ ಆರೋಪಗಳಲ್ಲಿ ಒಂದು ಆದರೆ ಇದನ್ನು ಸಿದ್ದರಾಮಯ್ಯ ಅಲ್ಲಗಳೆದು ಕಾರಣವನ್ನೂ ನೀಡಿದ್ದಾರೆ.
ಕಾಂಗ್ರೆಸ್ನಲ್ಲಿದ್ದ ವಿಶ್ವನಾಥ್ ಅವರು, ಜೆಡಿಎಸ್ನಲ್ಲಿದ್ದ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಗೆ ತಂದರು ಆದರೆ ಮುಂದಿನ ದಿನಗಳಲ್ಲಿ ವಿಶ್ವನಾಥ್ ಅವರನ್ನು ಮೂಲೆಗುಂಪು ಮಾಡಿ ಸಿದ್ದರಾಮಯ್ಯ ಕಾಂಗ್ರೆಸ್ನಲ್ಲಿ ಎತ್ತರಕ್ಕೆ ಏರಿದರು ವಿಶ್ವನಾಥ್ ಕಾಂಗ್ರೆಸ್ ಪಕ್ಷದಲ್ಲಿ ಅಪ್ರಸ್ತುತರಾಗಿಬಿಟ್ಟರು. ಆದರೆ ಸಿದ್ದರಾಮಯ್ಯ ಹೇಳುವ ಪ್ರಕಾರ ಇದು ಸುಳ್ಳಂತೆ.
ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ಗೆ ತಂದವರು ವಿಶ್ವನಾಥ್ ಅಲ್ಲ ಅಹ್ಮದ್ ಪಟೇಲ್ ಎಂದು ಸ್ವತಃ ಅವರೇ ಹೇಳಿದ್ದಾರೆ.

ಕುರುಬ ಸಂಘದ ಕಾರ್ಯಕ್ರಮದಲ್ಲಿ ಮನಬಿಚ್ಚಿ ಮಾತನಾಡಿದ ಅವರು, ನನ್ನನ್ನು ಬೇರೆ ಯಾರೂ ಕಾಂಗ್ರೆಸ್ಗೆ ತಂದಿಲ್ಲ ನಾನು ಕಾಂಗ್ರೆಸ್ಗೆ ಬರಲು ಕಾರಣ ಅಹ್ಮದ್ ಪಟೇಲ್ ಎಂದು, ವಿಶ್ವನಾಥ್ ಅವರಿಗೆ ಛಾಟಿ ಬೀಸಿದ್ದಾರೆ.
ಈ ಹಿಂದೆ ನಾನೂ ಕುರುಬನೇ ನನಗೆ ಸಿದ್ದರಾಮಯ್ಯ ಅನ್ಯಾಯ ಮಾಡಿದ್ದಾರೆ ಎಂದು ಈಗ ಜೆಡಿಎಸ್ ರಾಜ್ಯಾಧ್ಯಕ್ಷರಾಗಿರುವ ವಿಶ್ವನಾಥ್ ಅವರು ಹೇಳಿದ್ದರು. ಅದಕ್ಕೆ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ತಮ್ಮ ಚುನಾವಣಾ ಸೋಲಿನ ಬಗ್ಗೆಯೂ ಮಾತನಾಡಿರುವ ಸಿದ್ದರಾಮಯ್ಯ, 'ನಾನು ಜಾತಿಗಳನ್ನು ಒಡೆಯುತ್ತೇನೆ ಎಂದು ಹೇಳಿ ನನ್ನನ್ನು ಚುನಾವಣೆಯಲ್ಲಿ ಸೋಲಿಸಿದರು, ಕೋಮುವಾದಿಗಳ ವಿರುದ್ಧ ನಿಲ್ಲಬೇಕಿದ್ದ ಜಾತ್ಯಾತೀತರು, ಹಿಂದುಳಿದ ಸಮಾಜದವರು ಸಹ ಸೂಕ್ತ ಪ್ರಮಾಣದಲ್ಲಿ ಪ್ರತಿಕ್ರಿಯಿಸದ ಕಾರಣ ನನಗೆ ಸೋಲಾಯಿತು' ಎಂದು ಮನದ ಮಾತನ್ನಾಡಿದ್ದಾರೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications