ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ಗೆ ತಂದವರು ಯಾರು? ಅವರೇ ಹೇಳಿದ್ದಾರೆ ನೋಡಿ
ಬೆಂಗಳೂರು, ಆಗಸ್ಟ್ 20: ಗೆಳೆಯ ವಿಶ್ವನಾಥ್ಗೆ ಮೋಸ ಮಾಡಿದರು ಎಂಬುದು ಸಿದ್ದರಾಮಯ್ಯ ಅವರ ಮೇಲಿರುವ ಆರೋಪಗಳಲ್ಲಿ ಒಂದು ಆದರೆ ಇದನ್ನು ಸಿದ್ದರಾಮಯ್ಯ ಅಲ್ಲಗಳೆದು ಕಾರಣವನ್ನೂ ನೀಡಿದ್ದಾರೆ.
ಕಾಂಗ್ರೆಸ್ನಲ್ಲಿದ್ದ ವಿಶ್ವನಾಥ್ ಅವರು, ಜೆಡಿಎಸ್ನಲ್ಲಿದ್ದ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಗೆ ತಂದರು ಆದರೆ ಮುಂದಿನ ದಿನಗಳಲ್ಲಿ ವಿಶ್ವನಾಥ್ ಅವರನ್ನು ಮೂಲೆಗುಂಪು ಮಾಡಿ ಸಿದ್ದರಾಮಯ್ಯ ಕಾಂಗ್ರೆಸ್ನಲ್ಲಿ ಎತ್ತರಕ್ಕೆ ಏರಿದರು ವಿಶ್ವನಾಥ್ ಕಾಂಗ್ರೆಸ್ ಪಕ್ಷದಲ್ಲಿ ಅಪ್ರಸ್ತುತರಾಗಿಬಿಟ್ಟರು. ಆದರೆ ಸಿದ್ದರಾಮಯ್ಯ ಹೇಳುವ ಪ್ರಕಾರ ಇದು ಸುಳ್ಳಂತೆ.
ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ಗೆ ತಂದವರು ವಿಶ್ವನಾಥ್ ಅಲ್ಲ ಅಹ್ಮದ್ ಪಟೇಲ್ ಎಂದು ಸ್ವತಃ ಅವರೇ ಹೇಳಿದ್ದಾರೆ.

ಕುರುಬ ಸಂಘದ ಕಾರ್ಯಕ್ರಮದಲ್ಲಿ ಮನಬಿಚ್ಚಿ ಮಾತನಾಡಿದ ಅವರು, ನನ್ನನ್ನು ಬೇರೆ ಯಾರೂ ಕಾಂಗ್ರೆಸ್ಗೆ ತಂದಿಲ್ಲ ನಾನು ಕಾಂಗ್ರೆಸ್ಗೆ ಬರಲು ಕಾರಣ ಅಹ್ಮದ್ ಪಟೇಲ್ ಎಂದು, ವಿಶ್ವನಾಥ್ ಅವರಿಗೆ ಛಾಟಿ ಬೀಸಿದ್ದಾರೆ.
ಈ ಹಿಂದೆ ನಾನೂ ಕುರುಬನೇ ನನಗೆ ಸಿದ್ದರಾಮಯ್ಯ ಅನ್ಯಾಯ ಮಾಡಿದ್ದಾರೆ ಎಂದು ಈಗ ಜೆಡಿಎಸ್ ರಾಜ್ಯಾಧ್ಯಕ್ಷರಾಗಿರುವ ವಿಶ್ವನಾಥ್ ಅವರು ಹೇಳಿದ್ದರು. ಅದಕ್ಕೆ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ತಮ್ಮ ಚುನಾವಣಾ ಸೋಲಿನ ಬಗ್ಗೆಯೂ ಮಾತನಾಡಿರುವ ಸಿದ್ದರಾಮಯ್ಯ, 'ನಾನು ಜಾತಿಗಳನ್ನು ಒಡೆಯುತ್ತೇನೆ ಎಂದು ಹೇಳಿ ನನ್ನನ್ನು ಚುನಾವಣೆಯಲ್ಲಿ ಸೋಲಿಸಿದರು, ಕೋಮುವಾದಿಗಳ ವಿರುದ್ಧ ನಿಲ್ಲಬೇಕಿದ್ದ ಜಾತ್ಯಾತೀತರು, ಹಿಂದುಳಿದ ಸಮಾಜದವರು ಸಹ ಸೂಕ್ತ ಪ್ರಮಾಣದಲ್ಲಿ ಪ್ರತಿಕ್ರಿಯಿಸದ ಕಾರಣ ನನಗೆ ಸೋಲಾಯಿತು' ಎಂದು ಮನದ ಮಾತನ್ನಾಡಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ











Click it and Unblock the Notifications