ಬೆಂಗಳೂರಿನ ಜಿಬಿಎ ಆಡಳಿತ ನಿರ್ಲಕ್ಷ್ಯಕ್ಕೆ ತೀವ್ರ್ ಛೀಮಾರಿ ಹಾಕಿದ ನಟಿ ಐಂದ್ರಿತಾ ರೇ
ಬೆಂಗಳೂರು: ಬೆಂಗಳೂರಿನಲ್ಲಿ ಕಸದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದೀಗ ಬೆಂಗಳೂರಿನ ವಿವಿಧ ಭಾಗದಲ್ಲಿ ಕಸ ಸುಡುವುದು ಹೆಚ್ಚಾಗಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಗ್ರೇಟರ್ ಬೆಂಗಳೂರು ಆಡಳಿತದ ಕಾರ್ಯವೈಖರಿಗೆ ಇದೀಗ ನಟಿ ಐಂದ್ರಿತಾ ರೇ (Aindrita Ray) ಅವರು ಸಹ ಛೀಮಾರಿ ಹಾಕಿದ್ದಾರೆ. ಬೆಂಗಳೂರಿನಲ್ಲಿ ಕಸದ ಸಮಸ್ಯೆ ಹೆಚ್ಚಾಗುತ್ತಿದೆ. ಜನ ವಸತಿ ಪ್ರದೇಶದಲ್ಲಿ ಕಸ ಸುಡಲಾಗುತ್ತಿದೆ. ಕಳೆದ ಮೂರು ದಿನಗಳಿಂದಲೂ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಉಸಿರಾಡುವುದಕ್ಕೂ ಸಮಸ್ಯೆ ಆಗಿದೆ ಎಂದು ಅವರು ಹೇಳಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರು ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಬೆಂಗಳೂರಿನಲ್ಲಿ ಕಸದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಕಸ ಸಂಗ್ರಹ ಹಾಗೂ ವಿಲೇವಾರಿಗೆ ಸಂಬಂಧಿಸಿದಂತೆ ಹೊಸ ಟೆಂಡರ್ ಕರೆಯುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರಾದರೂ, ಈ ನಿಟ್ಟಿನಲ್ಲಿ ಯಾವುದೇ ಪ್ರಗತಿ ಆಗಿಲ್ಲ. ಇದೀಗ ಎಲ್ಲೆಂದರಲ್ಲಿ ಕಸ ಸುಡುವುದು ಹೆಚ್ಚಾಗಿದೆ.

ಬೆಂಗಳೂರಲ್ಲಿ ಕಸ ಸುಡುವ ಸಮಸ್ಯೆ ಹೆಚ್ಚಳ
ಇನ್ನು ಬೆಂಗಳೂರಿನಲ್ಲಿ ಕಸ ಸುಡುವ ಸಮಸ್ಯೆ ಹೆಚ್ಚಾಗಿದೆ. ನಗರದ ರಾಜರಾಜೇಶ್ವರಿ ನಗರ ಪ್ರದೇಶದಲ್ಲಿ ಮೂರು ದಿನಗಳಿಂದ ಕಸ ಸುಡುತ್ತಿದ್ದಾರೆ. ಏನಿದು ಸಮಸ್ಯೆ ಎಂದು ನೋಡಿದಾಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಿಬ್ಬಂದಿಯೇ ಕಸ ಸುಡುತ್ತಿದ್ದಾರೆ. ನಮ್ಮ ಅಪಾರ್ಟ್ಮೆಂಟ್ನಲ್ಲಿ ಉಸಿರಾಡುವುದಕ್ಕೂ ಆಗುತ್ತಿಲ್ಲ ಎಂದು ನಟಿ ಐಂದ್ರಿತಾ ರೇ ಬೇಸರ ವ್ಯಕ್ತಪಡಿಸಿದ್ದಾರೆ. ಕಸದಿಂದಾಗಿ ನಮಗೆ 3 ದಿನದಿಂದ ಸಮಸ್ಯೆ ಎದುರಾಗಿದೆ. ಈ ವಿಚಾರವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಾಯವಾಣಿಗೆ ಕರೆ ಮಾಡಿದರೂ ಕನೆಕ್ಟ್ ಆಗುತ್ತಿಲ್ಲ ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗತ್ತಿದೆ.
ಕಸ ಸುರಿಯುವ ಅಭಿಯಾನ ಏನಾಯ್ತು ?
ಇನ್ನು ನಟಿ ಐಂದ್ರಿತಾ ರೇ ಅವರ ವಿಡಿಯೋದಲ್ಲಿ ಹಲವು ಬೆಂಗಳೂರಿಗರು ಈಚೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪಾಲಿಕೆಗಳು ಎಲ್ಲೆಂದರಲ್ಲಿ ಕಸ ಎಸೆಯುವವರ ಮನೆಯ ಮುಂದೆ ಕಸ ಎಸೆಯುವ ಅಭಿಯಾನವನ್ನು ಪ್ರಾರಂಭಿಸಿತ್ತು. ಆದರೆ ಇದೀಗ ಎಲ್ಲೆಂದರಲ್ಲಿ ಕಸಕ್ಕೆ ಬೆಂಕಿ ಹಾಕಲಾಗುತ್ತಿದ್ದರೂ ಯಾಕೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ಅಲ್ಲದೇ ದೆಹಲಿ ಸೇರಿದಂತೆ ದೇಶದ ವಿವಿಧ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟ ಕುಸಿಯುತ್ತಿದೆ. ವಾಯುಮಾಲಿನ್ಯ ಪ್ರಮಾಣ ಹೆಚ್ಚಳದಿಂದಾಗಿ ಕೆಲವು ಪ್ರದೇಶಗಳಲ್ಲಿ ಉಸಿರಾಡುವುದಕ್ಕೂ ಸಮಸ್ಯೆ ಆಗುತ್ತಿದೆ. ಈ ರೀತಿ ಇರುವಾಗ ಕಸ ಸುಡುವುದು ತಪ್ಪು. ಅದರಲ್ಲೂ ನಿರಂತರವಾಗಿ ಬೃಹತ್ ಪ್ರಮಾಣದ ಕಸವನ್ನು ಬೆಂಗಳೂರಿನಲ್ಲಿ ಸುಡುತ್ತಿದ್ದರೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಗತ್ಯ ಮುಂಜಾಗ್ರತಾ ಕ್ರಮ ವಹಿಸದೆ ಇರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
AQI ಪ್ರಭಾವ: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಸುಡುತ್ತಿರುವುದರಿಂದ ವಾಯುಗುಣಮಟ್ಟದ ಮೇಲೆ ಪ್ರಭಾವ ಬೀರಲಿದೆ. ಈಗಾಗಲೇ ಈ ವರ್ಷ ಬೆಂಗಳೂರಿನಲ್ಲಿ ವಾಯುಗುಣಮಟ್ಟ ಕುಸಿತ ಕಂಡಿದೆ. ಈ ರೀತಿ ಇರುವಾಗ ಕಸ ಸುಡುವುದು ಎಷ್ಟು ಸರಿ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಕೆಲವರು ಐಂದ್ರಿತಾ ರೇ ಅವರನ್ನು ವೈಯಕ್ತಿಕವಾಗಿ ಟೀಕೆ ಮಾಡುವುದಕ್ಕೂ ಮುಂದಾಗಿದ್ದಾರೆ. ನೀವು ದಂಪತಿಗಳು ಬೆಟ್ಟಿಂಗ್ ಆ್ಯಪ್ ಪ್ರಮೋಟ್ ಮಾಡುವಾಗ ಸಮಾಜದ ಬಗ್ಗೆ ಕಾಳಜಿ ವಹಿಸಿರಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ ಈ ರೀತಿಯ ಕಮೆಂಟ್ಗಳಿಗೆ ಜನರೇ ಪ್ರತಿಕ್ರಿಯೆ ನೀಡಿದ್ದು, ಅದಕ್ಕೂ ಇದಕ್ಕೂ ಏನಾದರೂ ಸಂಬಂಧವಿದೆಯೇ ಯಾರೂ ಸರ್ಕಾರದ ನಿರ್ಲಕ್ಷ್ಯ ಧೋರಣೆಯ ಬಗ್ಗೆ ಪ್ರಶ್ನೆ ಮಾಡಬಾರದು ಎಂದರೆ ಹೇಗೆ ಎಂದು ಕೇಳಿದ್ದಾರೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications