ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಕೊರೊನಾ ಸೋಂಕಿತರ ತುರ್ತು ಸೇವೆಗೆ ಏರ್ ಆಂಬ್ಯುಲೆನ್ಸ್

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 1: ಕೊರೊನಾ ಸೋಂಕಿತರ ತುರ್ತು ಸೇವೆಗೆ ಬೆಂಗಳೂರಿನಲ್ಲಿ ಏರ್ ಆಂಬ್ಯುಲೆನ್ಸ್ ರೆಡಿ ಇದೆ.

Recommended Video

Covid 19 ಲಸಿಕೆಗಾಗಿ ಭಾರತದಲ್ಲಿ Bangladesh ಹೂಡಿಕೆ | Oneindia Kannada

ತುರ್ತು ಪರಿಸ್ಥಿತಿಯಲ್ಲಿರುವವರು ಇನ್ನು ಮುಂದೆ ಹೆಚ್ಚು ಹೊತ್ತು ಕಾಯಬೇಕಿಲ್ಲ, ರಸ್ತೆ ಪ್ರಯಾಣದ ಬದಲು ಕೊರೊನಾ ರೋಗಿಗಳಿಗೆ ಏರ್ ಆಂಬ್ಯುಲೆನ್ಸ್ ಸೇವೆ ಒದಗಿಸಲಾಗುತ್ತಿದೆ.

ಭಾರತದಲ್ಲಿ ಒಂದೇ ದಿನ 69,921 ಕೊರೊನಾ ಸೋಂಕಿತರು ಪತ್ತೆ ಭಾರತದಲ್ಲಿ ಒಂದೇ ದಿನ 69,921 ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರಿನಿಂದ ಸೇವೆ ಆರಂಭಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅನುಮತಿ ನೀಡಿದ್ದಾರೆ ಎಂದು ಐಕಾತ್ ಮಾರ್ಕೆಟಿಂಗ್ ಮುಖ್ಯಸ್ಥ ಫಾಹಿಮ್ ಹುಸೇನ್ ತಿಳಿಸಿದ್ದಾರೆ.

Air Ambulance Service For Covid Emergencies In Bengaluru

ಈ ಮೊದಲು ಮುಂಬೈ, ದೆಹಲಿ ಮುಂತಾದ ನಗರಗಳಲ್ಲಿ ಮಾಡುತ್ತಿದ್ದೆವು. ಈಗ ಬೆಂಗಳೂರಿನಲ್ಲಿ ಆರಂಭಿಸಿದ್ದೇವೆ. ಇದರಿಂದ ಎಮರ್ಜೆನ್ಸಿ ಇರುವ ರೋಗಿಗಳಿಗೆ ಶೀಘ್ರವಾಗಿ ಚಿಕಿತ್ಸೆ ಲಭ್ಯವಾಗಲಿದೆ.

ಇದೇ ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ಜಕ್ಕೂರು ಏರ್ ಡ್ರಮ್ಸ್ ನಿಂದ ಏರ್ ಆಂಬ್ಯುಲೆನ್ಸ್ ಸೇವೆ ಅಸ್ಥಿತ್ವಕ್ಕೆ ಬರಲಿದೆ. ಸೆಪ್ಟೆಂಬರ್ ತಿಂಗಳಿನಿಂದ ಹಾರಾಟ ನಡೆಸಲಿದೆ.
ನಾಗರಿಕ ವಿಮಾನಯಾನ ನಿರ್ದೇಶನಾಲಯದ ಡಿಜಿ ಅವರಿಂದ ಅನುಮೋದನೆ ಪಡೆದಿರುವುದಾಗಿ ತಿಳಿಸಿದ್ದಾರೆ.

ಈಗಾಗಲೇ ಏಳರಿಂದ ಎಂಟು ಏರ್ ಆಂಬ್ಯುಲೆನ್ಸ್‌ಗಳಿವೆ, ಅಲ್ಲಿ ಚಾರ್ಟೆಡ್ ಕ್ರಾಫ್ಟ್ ಅನ್ನು ತಾತ್ಕಾಲಿಕವಾಗಿ ಏರ್ ಆಂಬ್ಯುಲೆನ್ಸ್ ಆಗಿ ಪರಿವರ್ತಿಸಲಾಗಿದೆ ಎಂದು ಹುಸೇನ್ ವಿವರಿಸಿದರು.

ತುಂಬಾ ರಿಮೋಟ್ ಪ್ರದೇಶದಲ್ಲಿರುವ ಹಳ್ಳಿಗಳಿಂದ ರೋಗಿಗಳನ್ನು ತುರ್ತಾಗಿ ಕರೆ ತರಲು ಏರ್ ಆಂಬ್ಯುಲೆನ್ಸ್ ಸಹಾಯ ಮಾಡಲಿದೆ..

English summary
Now, Covid-19 patients and other patients will no longer need to travel by road for medical emergencies. Bengaluru’s Jakkur aerodrome will be the first air base in South India with air ambulance services, which will commence in September.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X