10 ನಿಮಿಷ ತಡ: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬಿಟ್ಟು ಹಾರಿದ ವಿಮಾನ
ಬೆಂಗಳೂರು, ಜುಲೈ 28: ನೆರೆಯ ಹೈದರಾಬಾದ್ಗೆ ತೆರಳಬೇಕಿದ್ದ ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬಿಟ್ಟು ವಿಮಾನ ಹಾರಿದ ಘಟನೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಜಲೈ 27ರಂದು ಗುರುವಾರ ರಾಜ್ಯಪಾಲರು ಹೈದರಾಬಾದ್ಗೆ ತೆರಳಬೇಕಿತ್ತು. ಆದರೆ ಅವರು ವಿಮಾನ ನಿಲ್ದಾಣಕ್ಕೆ ಸುಮಾರು 10 ನಿಮಿಷ ತಡವಾಗಿ ತಲುಪಿದರು. ಸಿಬ್ಬಂದಿ ನಿರ್ಲಕ್ಷ್ಯೆಯಿಂದಾಗಿ ಅವರು ವಿಮಾನ ಮಿಸ್ ಮಾಡಿಕೊಂಡರು ಹತ್ತು ನಿಮಿಷ ವಿಳಂಬವಾಗಿ ಏರ್ಪೋರ್ಟ್ ತಲುಪಿದ ಥಾವರ್ ಚಂದ್ ಗೆಲ್ಹೋಟ್ ಅವರನ್ನು ಬಿಟ್ಟು ವಿಮಾನ ಹಾರಿದೆ.

ರಾಜ್ಯಪಾಲರು ಎಂದರೆ ಅವರು ರಾಜ್ಯದ ಪ್ರಥಮ ಪ್ರಜೆ. ಈ ಘಟನೆಯಿಂದ ನನಗೆ ಅಗೌರವ ಉಂಟಾಗಿದೆ. ನನ್ನ ವಿಚಾರದಲ್ಲಿ ಶಿಷ್ಟಾಚಾರ (Protocal) ಉಲ್ಲಂಘಿಸಲಾಗಿದೆ. 10 ನಿಮಿಷ ತಡವಾಗಿದ್ದಕ್ಕೆ ಕಾಯದೇ ಬಿಟ್ಟು ಹೋಗಲಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಅವರು ಏರ್ಏಶಿಯಾ ಏರ್ಲೈನ್ಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳಲು ಅವರು ಬೆಂಗಳೂರಿನಿಂದ ಗುರುವಾರ ಹೈದರಾಬಾದ್ಗೆ ಹೊರಟಿದ್ದರು. ಹತ್ತು ನಿಮಿಷ ತಡವಾಗಿ ಅವರು ಬೆಂಗಳೂರು ಏರ್ಪೋರ್ಟ್ ತಲುಪಿದ್ದಾರೆ. ಅಷ್ಟರಲ್ಲಿ ಈ ಪ್ರಮಾದ ನಡೆದಿದೆ. ಬಳಿಕ ಒಂದು ತಡವಾಗಿ ಅವರು ಹೈದರಾಬಾದ್ಗೆ ತೆರಳಿದ್ದಾರೆ.
ರಾಜ್ಯಪಾಲರನ್ನು ಬಿಟ್ಟು ಹೋಗುವ ಮೂಲಕ ಶಿಷ್ಟಾಚಾರ ಉಲ್ಲಂಘಿಸಿದ ಏರ್ಏಶಿಯಾ ಏರ್ಲೈನ್ಸ್ ವಿರುದ್ಧ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದಾರೆ. ವಿಮಾನ ಮಿಸ್ ಆಗಲು ಕಾರಣವೇನು, ತಪ್ಪಿತಸ್ಥರ ವಿರುದ್ಧ ಕ್ರಮವಹಿಸುವಂತೆ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಶುಕ್ರವಾರ ಈ ದೂರಿನ ಮೇರೆಗೆ FIR ದಾಖಲಾಗಿ ತನಿಖೆ ಮುಂದುವರಿಯುವ ಸಾಧ್ಯತೆಗಳು ಇವೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Karnataka Weather: ಕಲಬುರಗಿಯಲ್ಲಿ 41ಡಿಸೆ ತಾಪಮಾನ, ಉಷ್ಣಅಲೆ ಎಚ್ಚರಿಕೆ, ಕೆಲವೆಡೆ ಮಳೆ ಸಾಧ್ಯತೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ












Click it and Unblock the Notifications