10 ನಿಮಿಷ ತಡ: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬಿಟ್ಟು ಹಾರಿದ ವಿಮಾನ
ಬೆಂಗಳೂರು, ಜುಲೈ 28: ನೆರೆಯ ಹೈದರಾಬಾದ್ಗೆ ತೆರಳಬೇಕಿದ್ದ ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬಿಟ್ಟು ವಿಮಾನ ಹಾರಿದ ಘಟನೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಜಲೈ 27ರಂದು ಗುರುವಾರ ರಾಜ್ಯಪಾಲರು ಹೈದರಾಬಾದ್ಗೆ ತೆರಳಬೇಕಿತ್ತು. ಆದರೆ ಅವರು ವಿಮಾನ ನಿಲ್ದಾಣಕ್ಕೆ ಸುಮಾರು 10 ನಿಮಿಷ ತಡವಾಗಿ ತಲುಪಿದರು. ಸಿಬ್ಬಂದಿ ನಿರ್ಲಕ್ಷ್ಯೆಯಿಂದಾಗಿ ಅವರು ವಿಮಾನ ಮಿಸ್ ಮಾಡಿಕೊಂಡರು ಹತ್ತು ನಿಮಿಷ ವಿಳಂಬವಾಗಿ ಏರ್ಪೋರ್ಟ್ ತಲುಪಿದ ಥಾವರ್ ಚಂದ್ ಗೆಲ್ಹೋಟ್ ಅವರನ್ನು ಬಿಟ್ಟು ವಿಮಾನ ಹಾರಿದೆ.

ರಾಜ್ಯಪಾಲರು ಎಂದರೆ ಅವರು ರಾಜ್ಯದ ಪ್ರಥಮ ಪ್ರಜೆ. ಈ ಘಟನೆಯಿಂದ ನನಗೆ ಅಗೌರವ ಉಂಟಾಗಿದೆ. ನನ್ನ ವಿಚಾರದಲ್ಲಿ ಶಿಷ್ಟಾಚಾರ (Protocal) ಉಲ್ಲಂಘಿಸಲಾಗಿದೆ. 10 ನಿಮಿಷ ತಡವಾಗಿದ್ದಕ್ಕೆ ಕಾಯದೇ ಬಿಟ್ಟು ಹೋಗಲಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಅವರು ಏರ್ಏಶಿಯಾ ಏರ್ಲೈನ್ಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳಲು ಅವರು ಬೆಂಗಳೂರಿನಿಂದ ಗುರುವಾರ ಹೈದರಾಬಾದ್ಗೆ ಹೊರಟಿದ್ದರು. ಹತ್ತು ನಿಮಿಷ ತಡವಾಗಿ ಅವರು ಬೆಂಗಳೂರು ಏರ್ಪೋರ್ಟ್ ತಲುಪಿದ್ದಾರೆ. ಅಷ್ಟರಲ್ಲಿ ಈ ಪ್ರಮಾದ ನಡೆದಿದೆ. ಬಳಿಕ ಒಂದು ತಡವಾಗಿ ಅವರು ಹೈದರಾಬಾದ್ಗೆ ತೆರಳಿದ್ದಾರೆ.
ರಾಜ್ಯಪಾಲರನ್ನು ಬಿಟ್ಟು ಹೋಗುವ ಮೂಲಕ ಶಿಷ್ಟಾಚಾರ ಉಲ್ಲಂಘಿಸಿದ ಏರ್ಏಶಿಯಾ ಏರ್ಲೈನ್ಸ್ ವಿರುದ್ಧ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದಾರೆ. ವಿಮಾನ ಮಿಸ್ ಆಗಲು ಕಾರಣವೇನು, ತಪ್ಪಿತಸ್ಥರ ವಿರುದ್ಧ ಕ್ರಮವಹಿಸುವಂತೆ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಶುಕ್ರವಾರ ಈ ದೂರಿನ ಮೇರೆಗೆ FIR ದಾಖಲಾಗಿ ತನಿಖೆ ಮುಂದುವರಿಯುವ ಸಾಧ್ಯತೆಗಳು ಇವೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications