Air India: ಬರೋಬ್ಬರಿ 20 ಗಂಟೆ ತಡವಾಗಿ ಹೊರಟ ಏರ್ ಇಂಡಿಯಾ, ಮೂರ್ಛೆ ಹೋದ ಪ್ರಯಾಣಿಕರು!
ಬೆಂಗಳೂರು, ಮೇ. 31: ಗುರುವಾರ ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನವು ಸುಮಾರು 20 ಗಂಟೆಗಳ ಕಾಲ ತಡವಾಗಿ ಹೊರಟು ಪ್ರಯಾಣಿಕರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ವಿಮಾನವನ್ನು ಹತ್ತಲು ಮತ್ತು ಯಾವುದೇ ಎಸಿ ಇಲ್ಲದೆ ಉಸಿರುಗಟ್ಟುವ ವಾತಾವರಣದಲ್ಲಿ ಪ್ರಯಾಣಿಕರು ಪರಿತಪಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೋಗಳು ವೈರಲ್ ಆಗಿವೆ. ಎಸಿ ಇಲ್ಲದೆ ಉಸಿರುಗಟ್ಟುವ ವಾತಾವರಣದಲ್ಲಿ ಕೆಲವು ಮಂದಿ ಮೂರ್ಛೆ ತಪ್ಪಿ ಬಿದ್ದಿರುವ ಘಟನೆಯೂ ನಡೆದಿದೆ. ಕೆಲವರು ತಲೆ ಸುತ್ತಿ ಬಿದ್ದು ಸುಧಾರಿಸಿಕೊಂಡಿದ್ದಾರೆ. ಅಲ್ಲಲ್ಲೇ ಮಲಗಿದ್ದಾರೆ. ಬಳಿಕ ಅವರನ್ನು ವಿಮಾನದಿಂದ ಕೆಳಗಿಳಿಸಲಾಗಿದೆ. ಮಕ್ಕಳು ಮತ್ತು ಮಹಿಳೆಯರ ಪಾಡು ಹೇಳತೀರದ್ದಾಗಿದೆ.

20 ಗಂಟೆ ತಡವಾಗಿ ಹೊರಟ ವಿಮಾನ!
ಗುರುವಾರ ಮಧ್ಯಾಹ್ನ ಟೇಕ್ ಆಫ್ ಆಗಬೇಕಿದ್ದ ಸ್ಯಾನ್ ಫ್ರಾನ್ಸಿಸ್ಕೋ ವಿಮಾನವು 20 ಗಂಟೆಗಳ ವಿಳಂಬದ ನಂತರ ಇಂದು ಬೆಳಗ್ಗೆ 11 ಗಂಟೆಗೆ ಹೊರಡಲಿದೆ. ಗುರುವಾರ, ಟ್ವಿಟರ್ನಲ್ಲಿ ಪತ್ರಕರ್ತೆ ಶ್ವೇತಾ ಪುಂಜ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ವಿಮಾನ ಸಂಖ್ಯೆ AI 183ರಲ್ಲಿ ಈ ಘಟನೆ ನಡೆದಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಇದ್ದ ವಿಮಾನದಲ್ಲಿ ಪ್ರಯಾಣಿಕರಲ್ಲಿ ಕೆಲವರು ಮೂರ್ಛೆ ಹೋಗಿದ್ದಾರೆ. ಬಳಿಕ ಅವರನ್ನು ವಿಮಾನದಿಂದ ಕೆಳಗಿಳಿಯಲು ಹೇಳಲಾಯಿತು ಎಂದು ತಿಳಿಸಿದ್ದಾರೆ.

ತಾಂತ್ರಿಕ ದೋಷದಿಂದಾಗಿ ನಿರ್ಗಮನ ಸಮಯವನ್ನು ಮತ್ತೆ ನೀಡಲಾಗಿದೆ. ಶುಕ್ರವಾರ ಮಧ್ಯಾಹ್ನ ವಿಮಾನವು ತನ್ನ ಪ್ರಯಾಣವನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ವಲಸೆಯ ಔಪಚಾರಿಕತೆಗಳು ಪೂರ್ಣಗೊಂಡ ಕಾರಣ ಡಿಬೋರ್ಡ್ ಮಾಡಿದ ಪ್ರಯಾಣಿಕರಿಗೆ ಟರ್ಮಿನಲ್ಗೆ ಪ್ರವೇಶಿಸಲು ಅವಕಾಶವಿಲ್ಲ ಎಂದು ಮತ್ತೊಬ್ಬ ಪ್ರಯಾಣಿಕರು ತಿಳಿಸಿದ್ದಾರೆ. ಇನ್ನು, ಹಿರಿಯ ಪ್ರಯಾಣಿಕರ ಸಂಬಂಧಿಕರು ಸಹ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ಹೊರಹಾಕಿದ್ದಾರೆ.
-
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications