ಪಟಾಕಿ ಎಫೆಕ್ಟ್: ಬೆಂಗಳೂರಿನಲ್ಲಿ ಅಪಾಯ ಮಟ್ಟ ಮೀರಿ ವಾಯುಮಾಲಿನ್ಯ ಹೆಚ್ಚಳ
ಬೆಂಗಳೂರು, ನವೆಂಬರ್ 13: ದೀಪಾವಳಿಯ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ದೀಪಗಳನ್ನು ಹಚ್ಚಿ, ಪಟಾಕಿ ಸಿಡಿಸಿ ಜನ ಸಂಭ್ರಮಿಸಿದ್ದಾರೆ. ಆದರೆ ಪಟಾಕಿ ಸಿಡಿಸಿದ ಪರಿಣಾಮ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಾಗಿದೆ. ಒಂದೇ ದಿನದಲ್ಲಿ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಪ್ರಮಾಣ ದಿಢೀರ್ ಹೆಚ್ಚಳವಾಗಿದೆ.
ವಾಯುಮಾಲಿನ್ಯ ನಿಯಂತ್ರಣಕ್ಕೆ ಹಸಿರು ಪಟಾಕಿ ಕಡ್ಡಾಯ ಇದ್ದರೂ ಮಾಲಿನ್ಯ ಏರಿಕೆಯಾಗಿದೆ. ನಿಯಮ ಮೀರಿ ಹಲವಡೆ ರಾಸಾಯನಿಕಯುಕ್ತ ಪಟಾಕಿಯನ್ನು ಹಲವರು ಬಳಸಿದ್ದು, ಬೆಂಗಳೂರಿನ ವಾಯುಮಾಲಿನ್ಯ ಅಪಾಯ ಮಟ್ಟಕ್ಕೆ ತಲುಪರುವುದು ಆತಂಕಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ಮಾಲಿನ್ಯ ಏರಿಕೆಯಿಂದ ಹಲವಾರು ಸಮಸ್ಯೆ ಆಗುತ್ತಿರುವ ಕಾರಣ ಬೆಂಗಳೂರಿನ ನಾನಾ ಭಾಗದಲ್ಲಿ ವಾಯುಮಾಲಿನ್ಯ, ಶಬ್ದ ಮಾಲಿನ್ಯ ಅಳೆಯಲು ಮಾಪನ ಆಳವಡಿಸಲಾಗಿತ್ತು.

ಬೆಂಗಳೂರಿನ ಹಲವು ಭಾಗಗಳಲ್ಲಿ ವಾತಾವರಣ ಡೇಂಜರ್ ಝೋನ್ನಲ್ಲಿ ಇರುವುದು ಬೆಳಕಿಗೆ ಬಂದಿದೆ. ಪ್ರತಿನಿತ್ಯ ವಾಹನಗಳ ಹೊಗೆ, ಧೂಳಿನಿಂದ ವಾಯು ಮಾಲಿನ್ಯ ಆಗುತ್ತಿತ್ತು. ಈಗ ರಜೆಯಿದ್ದರೂ ವಾಹನ ಸಂಖ್ಯೆ ಕಡಿಮೆಯಿದ್ದರೂ ವಾಯು ಮಾಲಿನ್ಯ ಏರಿಕೆಯಾಗಿದೆ. ಪಟಾಕಿಯ ಮಾಲಿನ್ಯದಿಂದಲೂ ಬೆಂಗಳೂರಿನ ಗಾಳಿಯ ಗುಣಮಟ್ಟ ಹದಗೆಡುತ್ತಿರುವುದು ಬೆಳಕಿಗೆ ಬಂದಿದ್ದು, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ ಅಂಶಗಳಿಂದ ಈ ವಿಚಾರ ಬಯಲಾಗಿದೆ.
ಗಾಳಿಯ ಗುಣಮಟ್ಟ ಕಳೆದುಕೊಂಡ ನಗರಗಳು
1. ಜಯನಗರ
ನವೆಂಬರ್ 13 - 282 AQI
ನವೆಂಬರ್ 11 - 105 AQI
2. ಹೆಬ್ಬಾಳ
ನವೆಂಬರ್ 13 -176 AQI
ನವೆಂಬರ್ 11 - 57 AQI
3. ಬಾಪೂಜಿ ನಗರ
ನವೆಂಬರ್ 13 - 185 AQI
ನವೆಂಬರ್ 11 - 90 AQI
4. ಸಿಲ್ಕ್ ಬೋರ್ಡ್
ನವೆಂಬರ್ 13 - 226 AQI
ನವೆಂಬರ್ 11 - 85 AQI

5. ಹೊಂಬೇಗೌಡ ನಗರ
ನವೆಂಬರ್ 13 - 171 AQI
ನವೆಂಬರ್ 11 - 92 AQI
6. ಜಿಗಣಿ
ನವೆಂಬರ್ 13 - 161 AQI
ನವೆಂಬರ್ 11 - 80 AQI
7. ಸಿಟಿ ರೈಲ್ವೆ ಸ್ಟೇಷನ್
ನವೆಂಬರ್ 13 - 100AQI
ನವೆಂಬರ್ 11 - 67 AQI
8. ಮೈಲಸಂದ್ರ
ನವೆಂಬರ್ 13 - 186 AQI
ನವೆಂಬರ್ 11 - 67 AQI
9. ಪೀಣ್ಯ
ನವೆಂಬರ್ 13 - 104 AQI
ನವೆಂಬರ್ 11 - 80 AQI
10. ಬಸವೇಶ್ವರನಗರ
ನವೆಂಬರ್ 13 - 82 AQI
ನವೆಂಬರ್ 11- 39 AQI
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ












Click it and Unblock the Notifications