ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಏರ್ ಟ್ಯಾಕ್ಸಿ ಸೌಲಭ್ಯ?
ಬೆಂಗಳೂರು ನಗರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗಲು ಏರ್ ಟ್ಯಾಕ್ಸಿ ಸೌಲಭ್ಯ ನೀಡಬೇಕು. ಕೇಂದ್ರ ಸರ್ಕಾರ ನೇಮಿಸಿದ್ದ ಸಂಸದೀಯ ಸಮಿತಿಯ ಸೂಚನೆ.
ಬೆಂಗಳೂರು, ಜೂನ್ 13: ಬೆಂಗಳೂರು ನಗರದಿಂದ ಕೆಂಪೇಗೌಡ ವಿಮಾನ ನಿಲ್ದಾಣದವರೆಗೆ ತಲುಪುವ ಮಾರ್ಗದಲ್ಲಿ ಎದುರಾಗುವ ದಟ್ಟ ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಸಲಹೆ ನೀಡಿರುವ ಸಂಸದೀಯ ಸಮಿತಿಯೊಂದು ಬೆಂಗಳೂರು ನಗರದಿಂದ ಕೆಂಪೇಗೌಡ ವಿಮಾನ ನಿಲ್ದಾಣದವರೆಗೆ ಹೆಲಿ ಟ್ಯಾಕ್ಸಿ ಸೌಲಭ್ಯ ನೀಡಬೇಕೆಂದು ಸಲಹೆ ಮಾಡಿದೆ.
ಬೆಂಗಳೂರು, ಹೈದರಾಬಾದ್ ಸೇರಿದಂತೆ ದೇಶದ ಕೆಲವು ಮಹಾನಗರಗಳಲ್ಲಿ ಇರುವ ಟ್ರಾಫಿಕ್ ಸಮಸ್ಯೆಯಿಂದಾಗಿ ಪ್ರವಾಸೋದ್ಯಮ, ಸಾರಿಗೆ ಸೌಕರ್ಯಗಳು ಬಾಧೆಗೊಳಗಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ಲೋಕಸಭೆ ಹಾಗೂ ರಾಜ್ಯ ಸಭೆ ಸದಸ್ಯರುಳ್ಳ ಸಮಿತಿಯೊಂದನ್ನು ರಚಿಸಿ ಆ ಬಗ್ಗೆ ವರದಿ ನೀಡುವಂತೆ ಕೋರಿತ್ತು.

ಸಂಸದ ಮುಕುಲ್ ರಾಯ್ ನೇತೃತ್ವದ ಈ ಸಮಿತಿಯು ಬೆಂಗಳೂರು ಸೇರಿದಂತೆ ನಾನಾ ಮಹಾನಗರಗಳಲ್ಲಿ ಇರುವ ಟ್ರಾಫಿಕ್ ಸಮಸ್ಯೆಯನ್ನು ಅಧ್ಯಯನ ಮಾಡಿ ಅದರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ.
ಅದರಂತೆ, ಬೆಂಗಳೂರಿನಲ್ಲಿ ವಿಮಾನ ನಿಲ್ದಾಣಕ್ಕೆ ತಲುಪಲು ಹೆಲಿ ಟ್ಯಾಕ್ಸಿ ಸೇವೆ ನೀಡಬೇಕೆಂದು ಸಲಹೆ ನೀಡಿದೆ.
More From
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications