AirAsia: ಕರ್ನಾಟಕ ರಾಜ್ಯಪಾಲರನ್ನು ಬಿಟ್ಟು ಹಾರಿದ ವಿಮಾನ ಕೇಸ್: ಮತ್ತೆ ಇಬ್ಬರು ಸಿಬ್ಬಂದಿ ಅಮಾನತು
ಬೆಂಗಳೂರು, ಆಗಸ್ಟ್ 03: ಕರ್ನಾಟಕ ರಾಜ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ವಿಮಾನ ನಿಲ್ದಾಣದಲ್ಲಿ ಬಿಟ್ಟು ಹಾರಿದ ವಿಮಾನ ಪ್ರಕರಣದಲ್ಲಿ ಪುರುಷ ಮತ್ತು ಮಹಿಳಾ ಗ್ರೌಂಡ್ ಸಿಬ್ಬಂದಿಯನ್ನು ದೈನಂದಿನ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಕೆಂಪೇಗೌಡ ವಿಮಾಣ ನಿಲ್ದಾಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಪ್ರಾಥಮಿಕ ವಿಚಾರಣೆ ನಡೆಸಿ ಏರ್ ಏಶಿಯಾ ತನ್ನ ಸ್ಟೇಷನ್ ಮ್ಯಾನೇಜರ್ ಅವರನ್ನು ಅಮಾನತುಗೊಳಿಸಿತ್ತು. ಅದರ ಬೆನ್ನಲ್ಲೆ ನಾಲ್ಕು ದಿನ ನಂತರ ತನ್ನ ಇಬ್ಬರು ಗ್ರೌಂಡ್ ಸಿಬ್ಬಂದಿಯನ್ನು ಅಮಾನತು ಮಾಡಿದೆ.

ಕಳೆದ ತಿಂಗಳು ಜುಲೈ 27 ರಂದು ಮಧ್ಯಾಹ್ನ ಬೆಂಗಳೂರಿನಿಂದ ಹೈದರಾಬಾದ್ಗೆ ತೆರಳಲು ರಾಜ್ಯಪಾಲರು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ (KIA) ತೆರಳಲಿದ್ದರು. ಈ ವೇಳೆ ಅಲ್ಲಿಂದ ಹೈದರಾಬಾದ್ ಗೆ ತೆರಳಬೇಕಿದ್ದ ಏರ್ ಏಶಿಯಾ ವಿಮಾನವು (I5 972) ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಅವರು ತಡವಾಗಿ ಬಂದರೆಂದು ಅವರನ್ನು ಬಿಟ್ಟು ವಿಮಾನ ಹಾರಿತ್ತು. ಮಧ್ಯಾಹ್ನ 2.05ಕ್ಕೆ ವಿಮಾನ ಟೇಕ್ ಆಪ್ ಆಗಬೇಕಿತ್ತು. ರಾಜ್ಯಪಾಲರು 2.07ಕ್ಕೆ ನಿಲ್ದಾಣ ತಲುಪಿದರು ಎನ್ನಲಾಗಿದೆ.
ಏರ್ಲೈನ್ಸ್ ಕಾರ್ಯಕ್ಕೆ ನೆಟ್ಟಿಗರ ಮೆಚ್ಚುಗೆ
ಕರ್ನಾಟಕ ರಾಜ್ಯಪಾಲರಿಗಾಗಿ ಕಾಯುವಲ್ಲಿ ವಿಫಲ ಆರೋಪದ ಮೇಲೆ ತನ್ನ 30 ದಿನ ಅಮಾನತಗೊಂಡ ಸ್ಟೇಷನ್ ಮ್ಯಾನೇಜರ್ ಸೇರಿ ಪ್ರಕರಣ ವಿಚಾರವಾಗಿ ನಾಲ್ಕು ಮಂದಿ ಅಮಾನತಾಗಿದ್ದಾರೆ. ಪ್ರಕರಣ ಹೆಚ್ಚುಚರ್ಚೆಗೆ ಬರುತ್ತಿದ್ದಂತೆ ಸಾಮಜಿಕ ಜಾಲತಾಣಗಳಲ್ಲಿ ಏರ್ ಏಶಿಯಾ ಸಾಮಾನ್ಯ ಪ್ರಯಾಣಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸುತ್ತಿದೆ ಎಂದು ಏರ್ಲೈನ್ಸ್ ಪರವಾಗಿ ಮೆಚ್ಚುಗೆ ವ್ಯಕ್ತವಾಗಿತ್ತು. ಹೀಗಿದ್ದರೂ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಘಟನೆ ಬಳಿಕ ಒಂದು ಗಂಟೆ ತಡವಾಗಿ ರಾಜ್ಯಪಾಲ್ಯರು ಹೈದರಾಬಾದ್ಗೆ ತೆರಳಿದ್ದಾರೆ. ಗವರ್ನರ್ ತಂಡವು ಏರ್ಲೈನ್ಸ್ ಮತ್ತು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ದೂರು ನೀಡಿದೆ. ಏರ್ಏಷಿಯಾ ಗ್ರೌಂಡ್ ಸ್ಟಾಫ್ನ ತಪ್ಪಿನಿಂದಾಗಿ ರಾಜ್ಯಪಾಲರಿಗೆ ವಿಮಾನ ತಪ್ಪಿದೆ ಎಂದು ಆರೋಪಿಸಿದರು. ರಾಜ್ಯಪಾಲರು ಸಮಯಕ್ಕೆ ಸರಿಯಾಗಿ ಏರ್ಪೋರ್ಟ್ ತಲುಪಿದ್ದಾರೆ ಎಂದು ರಾಜಭವನ ಸಮರ್ಥಿಸಿಕೊಂಡಿದೆ.

ರಾಜ್ಯಪಾಲರ ಬ್ಯಾಗ್ ನೋಡದ ಮೇಲೂ ಲೋಪ
ಏರ್ ಏಶಿಯಾದ ಬೆಂಗಳೂರು ವಿಮಾನ ನಿಲ್ದಾಣದ ವ್ಯವಸ್ಥಾಪಕರಾದ ಜಿಕೊ ಸೊರೆಸ್ ಅವರು ವಿಶೇಷ ವ್ಯಕ್ತಿಗಳಿಗಾಗಿ (VIP) ಕಾಯದ ಆರೋಪದ ಮೇರೆಗೆ ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ. 100 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಹೈದರಾಬಾದ್ ವಿಮಾನ ಸಮಯಕ್ಕೆ ಸರಿಯಾಗಿ ಟೇಕಾಫ್ ಆಗಿದೆ. ಆದರೆ ಸಿಬ್ಬಂದಿಗೆ ರಾಜ್ಯಪಾಲರ ಬ್ಯಾಗ್ಗಳು ಮೊದಲೇ ಬಂದಿದ್ದರು ಆ ಬಗ್ಗೆ ಅರಿಯದೇ, ಸ್ವಲ್ಪ ಕಾಲ ಕಾಯದೇ ಲೋಪವೆಸಗಿದ್ದಾರೆ ಎಂದು ತಿಳಿದು ಬಂದಿದೆ.
ಏರ್ ಏಶಿಯಾ ಹಿರಿಯ ಅಧಿಕಾರಿಗಳ ತಂಡವೊಂದು ಕಳೆದ ಸೋಮವಾರ ಜುಲೈ 31ರಂದು ರಾಜ್ಯಪಾಲರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಘಟನೆಯ ಬಗ್ಗೆ ಕ್ಷಮೆ ಕೋರಿದರು. ಅಷ್ಟರಲ್ಲಾಗಲೇ ಸ್ಟೇಷನ್ ಮ್ಯಾನೇಜರ್ನ ಅಮಾನತು ಆಗಿದ್ದರು.
ನಿಮಗಾದ ತೊಂದರೆಗೆ ಕ್ಷಮೆ ಕೋರುತ್ತಾರೆ. ಅಂದು ಕರ್ತವ್ಯದಲ್ಲಿದ್ದ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಲಾಗುವುದು ಅವರು ರಾಜ್ಯಪಾಲರಿಗೆ ತಿಳಿಸಿದರು ಎಂದು ರಾಜಭವನದ ಅಧಿಕಾರಿ ಹೇಳಿದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications