ಸಂಪತ್ ರಾಜ್ ಬಂಧನ; ಅಖಂಡ ಶ್ರೀನಿವಾಸ ಮೂರ್ತಿ ಪ್ರತಿಕ್ರಿಯೆ ಏನು?
ಬೆಂಗಳೂರು, ನವೆಂಬರ್ 17: ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಬಂಧನದ ಬೆನ್ನಲ್ಲೇ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ.
"ಸಂಪತ್ ರಾಜ್ ಬಂಧನದಿಂದ ನನಗೆ ನ್ಯಾಯ ಸಿಕ್ಕಿದೆ. ನನ್ನ ಮನೆ ಸುಟ್ಟಿರುವುದು ನನಗೆ ದುಃಖ ಆಗುವುದಿಲ್ಲವಾ? ಈ ಪ್ರಕರಣದಲ್ಲಿರುವ ಎಲ್ಲರಿಗೂ ಶಿಕ್ಷೆ ಆಗಲೇಬೇಕು" ಎಂದಿದ್ದಾರೆ.
ಮುಂದಿನ ಬೆಳವಣಿಗೆ ಕುರಿತು ಚರ್ಚಿಸಲು ಬುಧವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವುದಾಗಿಯೂ ತಿಳಿಸಿದ್ದಾರೆ. "ನಮ್ಮ ಪಕ್ಷದ ಅಧ್ಯಕ್ಷರನ್ನೂ ಭೇಟಿ ಮಾಡುತ್ತೇನೆ. ಅವರಿಗೆ ನ್ಯಾಯಕ್ಕಾಗಿ ಮನವಿ ಮಾಡುತ್ತೇನೆ" ಎಂದು ಹೇಳಿದ್ದಾರೆ. ಮುಂದೆ ಓದಿ...

"ಜನರಿಂದ ನನ್ನನ್ನು ದೂರ ಮಾಡಲು ಹೊರಟಿದ್ದರು"
"ಜನರನ್ನು ನನ್ನಿಂದ ದೂರ ಮಾಡಲು ಕಾರ್ಪೊರೇಟರ್ ಗಳು ಹೊರಟಿದ್ದರು. ಆದರೆ ನಮ್ಮ ಕ್ಷೇತ್ರದಲ್ಲಿ ಎಲ್ಲರೂ ನನ್ನನ್ನು ನಂಬಿದ್ದಾರೆ. ಜನ ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದನ್ನು ಸಹಿಸದೇ ಇಂಥ ಕೃತ್ಯ ಎಸಗಿದ್ದಾರೆ" ಎಂದು ಸಂಪತ್ ರಾಜ್ ವಿರುದ್ಧ ಆರೋಪಿಸಿದರು. ಅವರು ತಪ್ಪು ಮಾಡಿಲ್ಲವೆಂದಿದ್ದರೆ ತಲೆ ಮರೆಸಿಕೊಳ್ಳುವ ಅವಶ್ಯಕತೆಯಾದರೂ ಏನಿತ್ತು ಎಂದು ಪ್ರಶ್ನಿಸಿದ್ದಾರೆ.

"ಈಗಲಾದರೂ ನನ್ನ ಪರ ನಿಲ್ಲಿ"
ಸಂಪತ್ ರಾಜ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಮಾಧ್ಯಮಗಳ ಎದುರು, ಬಿಜೆಪಿ ಪಕ್ಷದವರ ಎದುರು ಮಾತನಾಡುವುದಲ್ಲ. ಶಾಸಕ ಅಖಂಡ ಶ್ರೀನಿವಾಸ ಮೂರ್ತಿಗೆ ನೋವಿದ್ದರೆ ನನ್ನ ಬಳಿ ಬಂದು ಮಾತನಾಡಲಿ, ಮಾಧ್ಯಮದ ಎದುರು ಮಾತನಾಡುವುದು ಶಿಸ್ತಲ್ಲ ಎಂದು ಡಿ.ಕೆ. ಶಿವಕುಮಾರ್ ಅವರು ಗರಂ ಆಗಿದ್ದರು. ಈ ನಡುವೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ರಕ್ಷಣೆ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು.
ಇದೀಗ ಸಂಪತ್ ರಾಜ್ ಬಂಧನವಾಗಿದ್ದು, ಈಗಲಾದರೂ ನನ್ನ ಪರ ಅವರು ನಿಲ್ಲಲಿ ಎಂದು ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿಲ್ಲವೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, "ನಾನು ಎರಡು ಬಾರಿ ಅವರನ್ನು ಭೇಟಿ ಮಾಡಿದ್ದೇನೆ. ನಾಳೆಯೂ ಅವರನ್ನು ಭೇಟಿ ಮಾಡುತ್ತೇನೆ" ಎಂದು ಹೇಳಿದರು.

"ಸಿದ್ದರಾಮಯ್ಯ, ಜಮೀರ್ ನ್ಯಾಯ ಕೊಡಿಸುತ್ತಾರೆ"
ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಿದ್ದರಾಮಯ್ಯ, ಜಮೀರ್ ಅವರ ಜೊತೆ ಚರ್ಚೆ ನಡೆಸುತ್ತೇನೆ. ನಾನು ಕಾಂಗ್ರೆಸ್ ಬಿಟ್ಟು ಎಲ್ಲೂ ಹೋಗಲ್ಲ. ಯಾರು ಓಡಿಸಿದರೆ ಏನು, ನಾನು ಇಲ್ಲೇ ಇರ್ತೇನೆ. ಸಿದ್ದರಾಮಯ್ಯ, ಜಮೀರ್ ಅವರು ನನ್ನನ್ನು ಕಾಂಗ್ರೆಸ್ ಗೆ ಕರೆತಂದವರು. ಅದಕ್ಕೇ ನಾನು ಟಾರ್ಗೆಟ್ ಆಗ್ತಿದ್ದೇನಾ ಗೊತ್ತಿಲ್ಲ ಎಂದರು.

ಸೋಮವಾರ ಸಂಪತ್ ರಾಜ್ ಬಂಧನ
ಪ್ರವಾದಿ ನಿಂದನೆ ಆರೋಪದಲ್ಲಿ ಆಗಸ್ಟ್ ನಲ್ಲಿ ಡಿಜೆ ಹಳ್ಳಿಯಲ್ಲಿ ವ್ಯಾಪಕ ಗಲಭೆ ನಡೆದಿತ್ತು. ಗಲಭೆಯಲ್ಲಿ ಶಾಸಕ ಅಖಂಡ ಶ್ರೀನಿವಾಸ ಅವರ ನಿವಾಸದ ಮೇಲೆಯೂ ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಪ್ರಕರಣದಲ್ಲಿ ಮಾಜಿ ಮೇಯರ್ ಹಾಗೂ ಕಾಂಗ್ರೆಸ್ ಸ್ಥಳೀಯ ನಾಯಕ ಸಂಪತ್ ರಾಜ್ ಅವರ ಮೇಲೆ ಆರೋಪ ಕೇಳಿ ಬಂದಿದ್ದವು. ನಂತರ ಆರೋಪಿ ಸಂಪತ್ ರಾಜ್ ತಲೆ ಮರೆಸಿಕೊಂಡಿದ್ದರು. ತಿಂಗಳ ಬಳಿಕ ಸೋಮವಾರ ಸಿಸಿಬಿ ಅಧಿಕಾರಿಗಳು ಸಂಪತ್ ರಾಜ್ ಬಂಧಿಸಿದ್ದಾರೆ.
Recommended Video
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications